AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸೋಲುವುದು ಬೇಡ, ಈ ಬಾರಿ ಅವರು ಗೆಲ್ಲಲಿ: ಸಚಿವ ಸುಧಾಕರ್ ಅಚ್ಚರಿ ಹೇಳಿಕೆ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರ ಪ್ರಮುಖವಾಗಿದ್ದು, ಭಾರೀ ಸುದ್ದಿಯಲ್ಲಿದೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಜಿ್ಲ್ಲೆಯಲ್ಲಿ ರಾಜಕೀಯ ರಂಗೇರಿದೆ. ಅದರಲ್ಲೂ ಈ ಬಾರಿ ಸಿದ್ದು ಸೋಲಿಸಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಇದರ ಮಧ್ಯೆ ಸಚಿವ ಸುಧಾಕರ್, ಸಿದ್ದರಾಮಯ್ಯ ಸೋಲುವುದು ಬೇಡ ಎಂದಿದ್ದಾರೆ.

ಸಿದ್ದರಾಮಯ್ಯ ಸೋಲುವುದು ಬೇಡ, ಈ ಬಾರಿ ಅವರು ಗೆಲ್ಲಲಿ: ಸಚಿವ ಸುಧಾಕರ್ ಅಚ್ಚರಿ ಹೇಳಿಕೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Feb 04, 2023 | 5:34 PM

Share

ಚಿಕ್ಕಬಳ್ಳಾಪುರ: ಕಳೆದ ಒಂದು ವರ್ಷದಿಂದಲೂ ಕ್ಷೇತ್ರ ಹುಡುಕಾಟದಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಅಳೆದು ತೂಗಿ ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದಂತೆಯೇ ಎಲ್ಲಾ ಪಕ್ಷಗಳ ಚಿತ್ತ ಸಿದ್ದರಾಮಯ್ಯನವರತ್ತ ನೆಟ್ಟಿದೆ. ಅದರಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಸಿದ್ದರಾಮಯ್ಯನವರನ್ನು ಮಣಿಸುವುದಕ್ಕೆ ನಿಂತಿವೆ. ಇದರ ಮಧ್ಯೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (Dr K Sudhakar) ಅವರು ಸಿದ್ದರಾಮಯ್ಯ ಸೋಲುವುದು ಬೇಡ, ಈ ಬಾರಿ ಅವರು ಗೆಲ್ಲಲಿ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುಧಾಕರ್ ಮಾಡಿದ್ದು ಒಂದೇ ಕೆಲಸ, ಅದು ಲೂಟಿ ಮಾತ್ರ: ಚಿಕ್ಕಬಳ್ಳಾಪುರದಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರದಲ್ಲಿ ಇಂದು (ಫೆಬ್ರವರಿ 04) ಸ್ತ್ರೀ ಶಕ್ತಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸುಧಾಕರ್, ನನ್ನ ಸೋಲಿಸಬೇಕೆಂದು ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ. ಆದರೆ ನಾನು ಸಿದ್ದರಾಮಯ್ಯ ರೀತಿ ಹೇಳಲ್ಲ. ಸಿದ್ದರಾಮಯ್ಯ ಸೋಲುವುದು ಬೇಡ, ಈ ಬಾರಿ ಅವರು ಗೆಲ್ಲಲಿ. 5 ವರ್ಷಗಳ ಕಾಲ ನಿಮ್ಮ ಜತೆ ನಾನು ವಿಶ್ವಾಸಾರ್ಹವಾಗಿ ಇದ್ದೆ. ನಾನು ಹೋರಾಟ ಮಾಡಿ ಮೆಡಿಕಲ್ ಕಾಲೇಜು ತರಬೇಕಾಯ್ತು. ನಾನು ನನ್ನ ಕ್ಷೇತ್ರ ಅಭಿವೃದ್ಧಿಯಲ್ಲಿ ತೊಡಗಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿ ಕಂಡು ನನ್ನನ್ನು ಸೋಲಿಸಲು ಹೇಳಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರೇ ನನ್ನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ರು ಎಂದು ಹೇಳಿದರು.

ಸುಧಾಕರ್​ನನ್ನು ಸೋಲಿಸಿ ಎಂದಿದ್ದ ಸಿದ್ದರಾಮಯ್ಯ

ಇತ್ತೀಚೆಗೆ ಚಿಕ್ಕಬಳ್ಳಾಪುರಲದಲ್ಲಿ ನಡೆದಿದ್ದ ಪ್ರಜಾಧ್ವನಿ ಯಾತ್ರೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿ, ಈ ಬಾರಿ ಅವರನ್ನು ಸೋಲಿಸಿ ಎಂದು ಕರೆಕೊಟ್ಟಿದ್ದರು. ಡಾ.ಕೆ.ಸುಧಾಕರ್​ ಒಬ್ಬ ಫ್ರಾಡ್, ಅವರಿಗೆ ಟಿಕೆಟ್ ನೀಡಬೇಡಿ​ ಎಂದು ವೀರಪ್ಪ ಮೊಯ್ಲಿ ಹೇಳಿದ್ದರು. ಆದರೂ ನಾವು ಟಿಕೆಟ್ ನೀಡಿದ್ದೆವು. ಆದರೆ ಇಂದು ಸುಧಾಕರ್​ಗೆ ಟಿಕೆಟ್​ ನೀಡಿದ್ದಕ್ಕೆ ಇಂದು ಪಶ್ಚಾತ್ತಾಪ ಪಡುತ್ತಿದ್ದೇವೆ, ನಾನು ಕೂಡ ಪಶ್ಚಾತ್ತಾಪ ಪಡುತ್ತಿದ್ದೇನೆ ಎಂದು ಹೇಳಿದ್ದರು.

ಆಪರೇಷನ್​ ಕಮಲಕ್ಕೆ ಬಲಿಯಾಗಿ ರಾತ್ರಿ 1 ಗಂಟೆ ಸುಮಾರಿಗೆ ಪ್ರಮಾಣ ಮಾಡಿ ಬೆಳಗ್ಗೆ ಬಾಂಬೆಗೆ ಓಡಿಹೋದ ಸುಧಾಕರ್ ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾನೆ. ಸುಧಾಕರ್ ಮತ್ತೆ ಶಾಸಕ ಆಗಬಾರದು. ಸುಧಾಕರ್​ನನ್ನು ಚುನಾವಣೆಯಲ್ಲಿ ಸೋಲಿಸುವಂತವರನ್ನು ಅವರ ವಿರುದ್ಧ ಕಣಕ್ಕಿಳಿಸಿ. ನಿಮಗೆ ದಮ್ಮಯ್ಯ ಅಂತೀನಿ ಸುಧಾಕರ್​​ನನ್ನು ಸೋಲಿಸಿ. ಜನರು ಯಾರಿಗೆ ಹೇಳುತ್ತೀರೋ ಅವರಿಗೆ ಟಿಕೆಟ್ ಕೋಡುತ್ತೇನೆ ಎಂದಿದ್ದರು.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ