ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ: ಎರಡು ಕಡೆ ಪ್ರಮಾಣವಚನಕ್ಕೆ ಪ್ಲ್ಯಾನ್, ಹಾಗಾದ್ರೆ ಸಿಎಂ ಯಾರು?

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ನಡುವೆ ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮತ್ತೊಂದೆಡೆ ಇತ್ತ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪ್ರಮಾಣಚವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ.

ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ: ಎರಡು ಕಡೆ ಪ್ರಮಾಣವಚನಕ್ಕೆ ಪ್ಲ್ಯಾನ್, ಹಾಗಾದ್ರೆ ಸಿಎಂ ಯಾರು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
Follow us
|

Updated on:May 17, 2023 | 11:31 AM

ಬೆಂಗಳೂರು: ಈ ಬಾರಿ ಕಾಂಗ್ರೆಸ್​ ಕರ್ನಾಟಕದಲ್ಲಿ (Karnataka Congress) 135 ವಿಧಾನಸಭೆ ಸೀಟು ಗೆಲ್ಲುವ ಮೂಲಕ ಮ್ಯಾಜಿಕ್‌ ನಂಬರ್‌ ದಾಟಿ ಬಹುಮತ ಪಡೆದುಕೊಂಡಿದೆ. ಆದರೆ, ಫಲಿತಾಂಶ ಪ್ರಕಟಗೊಂಡು ಮೂರು ದಿನಗಳು ಕಳೆದರೂ ಸಿಎಂ ಯಾರು ಎನ್ನುವುದು ಮಾತ್ರ ಇನ್ನೂ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸಿದ್ದಾರೆ. ಇದರ ಮಧ್ಯೆ ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗ ಹಾಗೂ ಕಠೀರವ ಸ್ಟೇಡಿಯಂನಲ್ಲಿ ಆಯೋಜಿಸಲು ಚಿಂತನೆಗಳು ನಡೆದಿವೆ.

ಇದನ್ನೂ ಓದಿ: Karnataka CM Race: ತಾರಕಕ್ಕೇರಿದ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬೆಂಬಲಿಗರ ಜಟಾಪಟಿ, ಮುಸಿಮುಸಿ ನಗುತ್ತಿರುವ ಬಿಜೆಪಿ ಕಾರ್ಯಕರ್ತರು

ಹೌದು…ಇನ್ನೂ ಅಧಿಕೃತವಾಗಿ ಸಿಎಂ ಯಾರು ಎನ್ನುವುದೇ ಘೋಷಣೆ ಮಾಡಿಲ್ಲ. ಆಗಲೇ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ತಯಾರಿಗಳು ಆರಂಭವಾಗಿವೆ. ಹಲವು ವರ್ಷಗಳ ಬಳಿಕ ಕಾಂಗ್ರೆಸ್​ಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸೀಟು ಬಂದಿವೆ. ಹೀಗಾಗಿ ಸಿಎಂ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಹೀಗಾಗಿ ವಿಧಾನಸೌಧ ಮುಂಭಾಗ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಲು ಚಿಂತನೆಗಳು ನಡೆದಿವೆ.

ನಾಳೆ(ಮೇ 18) ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ. ಒಂದು ವೇಳೆ ನಾಳೆ ತಪ್ಪಿದರೆ ಶನಿವಾರ ಅಂದರೆ ಮೇ 20ರಂದು ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ನಡೆದಿದೆ. ಶುಕ್ರವಾರ(ಮೇ 19) ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರ‌ ಸಲಹೆ ನೀಡಿದ್ದಾರೆ. ಹೀಗಾಗಿ ಮೇ 18 ಇಲ್ಲ ಮೇ 20ರಂದು ಪ್ರಮಾಣ ವಚನ ಸ್ವೀಕಾರವಾಗಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಬಹುತೇಕ ನಾಳೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯುಸ ಸಾಧ್ಯತೆಗಳು ಹೆಚ್ಚಿವೆ.

ನಾಳೆಯೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸಾಧ್ಯತೆ

ಇದೀಗ ಬಂದ ಸುದ್ದಿ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಒಮದು ವೇಳೆ ಅದು ಹಾಗೇ ಆದರೆ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ(ಮೇ 18) ಮಧ್ಯಾಹ್ನ 3:30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಆದ್ರೆ, ವಿಧಾನಸೌಧ ಬಳಿ

ಇನ್ನು ಅಧಿಕೃತವಾಗಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಣೆಯಾದರೆ ಅವರ ನಿವಾಸದ ಬಳಿ ಅಭಿಮಾನಿಗಳು ನಬರುವ ಮುನ್ಸೂಚನೆ ಹಿನ್ನಲೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಶಿವಾನಂದ ಸರ್ಕಲ್ ಸಮೀಪ ಇರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದ ಬಳಿ ಒಂದು ಕೆಎಸ್ಆರ್ ಪಿ ವ್ಯಾನ್, 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಪಟ್ಟ?

ಇನ್ನು ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಜೊತೆ ಎರಡು ಪ್ರಮುಖ ಖಾತೆಗಳನ್ನು ನೀಡಲಾಗುತ್ತದೆ. ಇನ್ನು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎನ್ನಲಾಗಿದ್ದು, ನಾಳೆಯೇ ಸಿದ್ದರಾಮಯ್ಯನವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ ಸಚಿವ ಸಂಪುಟ ರಚನೆ ಮಾಡಲಾಗಿ್ತತೆ ಎನ್ನುವ ಮಾಹಿತಿ ಲಭ್ಯವಾಗಿದೆ.

Published On - 11:30 am, Wed, 17 May 23

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ