AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗಿಂತ ಪತ್ನಿ ಪಾರ್ವತಿ ಶ್ರೀಮಂತೆ

ಸಿದ್ದರಾಮಯ್ಯಗಿಂತ ಪತ್ನಿ ಪಾರ್ವತಿ ಶ್ರೀಮಂತೆ ಎಂದು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭ ಸಲ್ಲಿಸಿದ ಅಫಿಡವಿಟ್​​ನಿಂದ ತಿಳಿದುಬಂದಿದೆ.

Siddaramaiah: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗಿಂತ ಪತ್ನಿ ಪಾರ್ವತಿ ಶ್ರೀಮಂತೆ
ಸಿದ್ದರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 19, 2023 | 9:28 PM

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆ ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ. ಸಿದ್ದರಾಮಯ್ಯಗಿಂತ ಪತ್ನಿ ಪಾರ್ವತಿ ಶ್ರೀಮಂತೆ ಎಂದು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭ ಸಲ್ಲಿಸಿದ ಅಫಿಡವಿಟ್​​ನಿಂದ ತಿಳಿದುಬಂದಿದೆ. 2018ರಲ್ಲಿ 18.55 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ್ದ ಸಿದ್ದರಾಮಯ್ಯ, 2023ರಲ್ಲಿ 19 ಕೋಟಿ ಆಸ್ತಿ ಘೋಷಿಸಿಕೊಂಡಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ತಿ ವಿವರ ಹೀಗಿದೆ

ಆಸ್ತಿ (ಸಿದ್ದರಾಮಯ್ಯ ಬಳಿ): 19 ಕೋಟಿ ರೂ.

ಆಸ್ತಿ (ಪತ್ನಿ ಪಾರ್ವತಿ ಬಳಿ): 32.12 ಕೋಟಿ ರೂ.

ಚರಾಸ್ತಿ: 9.58 ಕೋಟಿ ರೂ.

ಸ್ಥಿರಾಸ್ತಿ: 9.43 ಕೋಟಿ ರೂ.

ಚರಾಸ್ತಿ (ಪತ್ನಿ ಪಾರ್ವತಿ ಹೆಸರಲ್ಲಿ): 11.26 ಕೋಟಿ ರೂ.

ಸ್ಥಿರಾಸ್ತಿ (ಪತ್ನಿ ಪಾರ್ವತಿ ಹೆಸರಲ್ಲಿ): 19.56 ಕೋಟಿ ರೂ.

ಸಾಲ: 6.84 ಕೋಟಿ ರೂ.

ಸಿದ್ದರಾಮಯ್ಯ ಹೆಸರು ಕೋಲಾರ ಕ್ಷೇತ್ರಕ್ಕೆ ತಳಕು ಹಾಕಿಕೊಂಡಿದ್ದೇಕೆ?

ವಿಪಕ್ಷ ನಾಯಕ ಸಿದ್ದರಾಮಯ್ಯನವರು 2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲ ಕಳೆದೊಂದು ವರ್ಷದಿಂದ ನಡೆಯುತ್ತಲೇ ಇತ್ತು. ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಬಾದಾಮಿ ಕ್ಷೇತ್ರದಿಂದ ಗೆದ್ದು ಚಾಮುಂಡೇಶ್ವರಿಯಲ್ಲಿ ಸೋತಿದ್ದರು. ಆದರೆ ಈ ಬಾರಿ ಬಾದಾಮಿ ಕ್ಷೇತ್ರ ತುಂಬಾ ದೂರ, ಬೆಂಗಳೂರಿನಿಂದ ಓಡಾಡೋದು ಕಷ್ಟ ಅನ್ನೋ ಕಾರಣಕ್ಕೆ ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡೋದಿಲ್ಲ.

ಇದನ್ನೂ ಓದಿ: ಕೋಲಾರದಲ್ಲಿ ಇನ್ನೂ ಬಗೆಹರಿದಿಲ್ಲ ಕಾಂಗ್ರೆಸ್​ ಅಭ್ಯರ್ಥಿ ಆಯ್ಕೆ ಗೊಂದಲ, ಇನ್ನೂ ಉಳಿದಿದೆ ಕೊನೆ ಕ್ಷಣದ ಕುತೂಹಲ! ಏನದು ಒಳಸುಳಿ

ಬೆಂಗಳೂರಿಗೆ ಹತ್ತಿರ ಅನ್ನೋ ಕಾರಣಕ್ಕೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದು ಒಂದು ವರ್ಷದಿಂದ ಸತತವಾಗಿ ಕೇಳಿಬಂದಿತ್ತು. ಅದಕ್ಕೆ ಕಾರಣ ಕೂಡಾ ಇತ್ತು. ಕೋಲಾರ ಕ್ಷೇತ್ರದಲ್ಲಿ ಅಹಿಂದ ಮತಗಳು ಹೆಚ್ಚಾಗಿವೆ ಅನ್ನೋ ಕಾರಣಕ್ಕೆ ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸುಲಭದ ತುತ್ತಾಗುತ್ತದೆ ಎಂಬುದು ಲೆಕ್ಕಾಚಾರವಾಗಿತ್ತು. ಅದರಂತೆ ತೀರಾ ಇತ್ತೀಚೆಗೆ, ನಾಲ್ಕೈದು ತಿಂಗಳಿಂದ ಸಿದ್ದರಾಮಯ್ಯ ಕೋಲಾರದಲ್ಲಿ ಒಂದಷ್ಟು ಓಡಾಡಿ ಕಳೆದ ಮೂರು ತಿಂಗಳ ಹಿಂದಷ್ಟೇ ಅಂದರೆ ಜನವರಿ 09 ರಂದು ತಾನು ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ
ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ
ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ