ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಮಿಸ್: ಹೇಳದೆ ಕೇಳದೆ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್

ಎರಡನೇ ಕ್ಷೇತ್ರವಾಗಿ ಕೋಲಾರದ ಮೇಲೆ ಕಣ್ಣಿಟ್ಟಿದ್ದ ಸಿದ್ದರಾಮಯ್ಯಗೆ ಟಿಕೆಟ್ ಮಿಸ್ ಆಗಿದ್ದು, ತಾಲೂಕಿನಲ್ಲಿ ಕೊತ್ತೂರು ಮಂಜುನಾಥ್​ಗೆ ಹೈಕಮಾಂಡ್ ಮಣೆಹಾಕಿದೆ. ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಮಿಸ್: ಹೇಳದೆ ಕೇಳದೆ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್
ಕೊತ್ತೂರು ಮಂಜುನಾಥ್ ಮತ್ತು ಸಿದ್ದರಾಮಯ್ಯ
Follow us
|

Updated on: Apr 15, 2023 | 5:19 PM

ಕೋಲಾರ: ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ವರುಣಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದ್ದರೂ ಎರಡನೇ ಕ್ಷೇತ್ರವಾಗಿ ಕೋಲಾರದ ಮೇಲೆ ಕಣ್ಣಿಟ್ಟಿದ್ದ ಸಿದ್ದರಾಮಯ್ಯ (Siddaramaiah) ಬದಲಾಗಿ ಕ್ಷೇತ್ರದಲ್ಲಿ ಕೊತ್ತೂರು ಮಂಜುನಾಥ್​ಗೆ (Kothur Manjunath) ಮಣೆ ಹಾಕಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್, ಸಿದ್ದರಾಮಯ್ಯ ಅವರೇ ಕೋಲಾರಕ್ಕೆ ಬರಬೇಕು ಅನ್ನೋದೆ ನನ್ನ ವಾದ. ಅವರೇ ಕೋಲಾರದ (Kolar) ಅಭ್ಯರ್ಥಿಯಾಗಬೇಕು. ಪಕ್ಷ ಹಾಗೂ ಹೈಕಮಾಂಡ್ ಹೇಳದೆ ಕೇಳದೆ ಪಟ್ಟಿ ಬಿಡುಗಡೆ ಮಾಡಿದೆ ಎಂದರು.

ಜಿಲ್ಲೆಯ ಎಲ್ಲಾ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಬೇಕಿತ್ತು. ಈಗಲೂ ಹೈಕಮಾಂಡ್​ಗೆ ಕೇಳಿಕೊಳ್ಳುವುದು ಇಷ್ಟೆ ಸಿದ್ದರಾಮಯ್ಯ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿ. ಒಂದು ವೇಳೆ ಹೈಕಮಾಂಡ್ ನೀನೆ ಹೋಗಿ ಪ್ರಚಾರ ಮಾಡು ಅಂದರೆ ಜಿಲ್ಲೆಯ ಎಲ್ಲಾ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಿದೆ. ಕಾಂಗ್ರೇಸ್ ಪಕ್ಷಕ್ಕೆ ಶಕ್ತಿ ಇದೆ ಹಾಗಾಗಿ ಇಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೋಲಾರ ಟಿಕೆಟ್​ ಸಿದ್ದರಾಮಯ್ಯ ಬಿಟ್ಟು ಬೇರೆಯವರ ಪಾಲಾಗುತ್ತಿದ್ದಂತೆಯೇ ಭುಗಿಲೆದ್ದ ಆಕ್ರೋಶ

ಕಾಂಗ್ರೇಸ್ ಪಕ್ಷ ಒಳ್ಳೆಯ ಅಭ್ಯರ್ಥಿಯನ್ನ ಬಿಟ್ಟು ಕೊಡಲ್ಲ ಅನ್ನೋ ನಂಬಿಕೆ ಬಂದಿದೆ. ಆದರೂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬರಬೇಕು ಅನ್ನೋದು ನನ್ನ ಅಭಿಪ್ರಾಯ. ಎಲ್ಲರನ್ನ ಕರೆದು ವಿಶ್ವಾಸಕ್ಕೆ ಪಡೆದು ಸ್ಪರ್ಧೆಗೆ ಸೂಚಿಸಿದರೆ ನಾನು ಒಪ್ಪುತ್ತೇನೆ. ನನ್ನ ಬಳಿ ಯಾರೂ ಸಹ ಯಾವದೇ ಮಾತುಕತೆ ಮಾಡಿಲ್ಲ, ಆದರೂ ನನ್ನ ಹೆಸರು ಘೋಷಣೆ ಮಾಡಿದೆ. ನಾನು ಸಹ ತಯಾರಿಯಲ್ಲಿದ್ದೇನೆ, ಆದರೂ ನನಗೂ ಗೊಂದಲ ಇದೆ. ಕೋಲಾರದ ಸ್ಥಳೀಯ ಹೈ ಕಮಾಂಡ್ ಹೇಳಿದರೆ ನಾನು ಸ್ಪರ್ಧೆ ಮಾಡುತ್ತೇನೆ. ರಮೇಶ್ ಕುಮಾರ್, ಶ್ರೀನಿವಾಸಗೌಡ, ಅನಿಲ್ ಕುಮಾರ್ ಒಪ್ಪಿಕೊಳ್ಳಬೇಕು ಎಂದರು.

ನನ್ನ ಮುಳಬಾಗಲು ಕ್ಷೇತ್ರಕ್ಕೂ ಇನ್ನೂ ಅಭ್ಯರ್ಥಿ ಮಾಡಿಲ್ಲ. ಮುಳಬಾಗಲು ಕ್ಷೇತ್ರಕ್ಕೆ ತಮ್ಮನ ಹೆಂಡತಿ ಹೆಸರನ್ನ ನಾನು ಸೂಚಿಸಿದ್ದೇನೆ. – ಕೊತ್ತೂರು ಮಂಜುನಾಥ್, ಕೋಲಾರ ಕಾಂಗ್ರೆಸ್ ಅಭ್ಯರ್ಥಿ

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ತಪ್ಪಿಸಿದ್ದು ಯಾರು?

ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಇದೀಗ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮುಖ್ಯವಾಗಿ ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ನೀಡಿಲ್ಲ. ಕೋಲಾರ ಟಿಕೆಟ್​ ಸಿದ್ದರಾಮಯ್ಯನವರನ್ನು ಬಿಟ್ಟು ಕೊತ್ತೂರು ಮಂಜುನಾಥ್​ಗೆ ಘೋಷಣೆಯಾಗಿದೆ. ಸಿದ್ದರಾಮಯ್ಯ ಅವರಿಗೆ ಕೋಲಾರದ ಟಿಕೆಟ್ ಕೂಡ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ ಕೊನೆಗೆ ಟಿಕೆಟ್ ಮಂಜುನಾಥ್ ಪಾಲಾಗಿದೆ. ಅಲ್ಲದೆ, ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಡಾ.ಜಿ.ಪರಮೇಶ್ವರ್​ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ  ಮಾಜಿ ಸಿಎಂ ಸಿದ್ದರಾಮಯ್ಯಗೆ ಟಿಕೆಟ್​ ನೀಡದಿದ್ದರೆ ಮುಸ್ಲಿಮರಿಗೆ ನೀಡುವಂತೆ ಮುಸ್ಲಿಂ ಮುಖಂಡರು ಒತ್ತಾಯಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!