AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನ ಬೇಸತ್ತು, ಬಿಜೆಪಿ ತೊಲಗಲಿ ಎಂದು ಪಾಠ ಕಲಿಸಿದ್ದಾರೆ: ಸಿದ್ದರಾಮಯ್ಯ

ಕಾಂಗ್ರೆಸ್ ಪಾರ್ಟಿ ತನ್ನ ಶಕ್ತಿ ಮೇಲೆ ಸರ್ಕಾರ ಮಾಡುತ್ತದೆ. ಜನರು ಬದಲಾವಣೆ ಬಯಸಿದ್ದಾರೆ. 40 ಪರ್ಸೆಂಟ್ ಭ್ರಷ್ಟಾಚಾರ, ಬಿಜೆಪಿ ಸರ್ಕಾರದ ವಿರುದ್ದ ಕೆಂಪಣ್ಣ ಧ್ವನಿ ಎತ್ತಿದ್ದರು.

ರಾಜ್ಯದ ಜನ ಬೇಸತ್ತು, ಬಿಜೆಪಿ ತೊಲಗಲಿ ಎಂದು ಪಾಠ ಕಲಿಸಿದ್ದಾರೆ: ಸಿದ್ದರಾಮಯ್ಯ
ಸಿದ್ದರಾಮಯ್ಯ
ರಶ್ಮಿ ಕಲ್ಲಕಟ್ಟ
|

Updated on:May 13, 2023 | 1:57 PM

Share

ಈ ಚುನಾವಣೆ ಲೋಕಸಭಾ ಚುನಾವಣೆಗೆ ದಿಕ್ಸೂಚಿ. ಎಲ್ಲಾ ಪ್ರಚಾರ ಸಭೆಗಳಲ್ಲೂ ಹೇಳಿದ್ದೇನೆ. ಸುಮಾರು 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ( Siddaramaiah) ಹೇಳಿದ್ದಾರೆ .ಕಾಂಗ್ರೆಸ್ ಪಾರ್ಟಿ ತನ್ನ ಶಕ್ತಿ ಮೇಲೆ ಸರ್ಕಾರ ಮಾಡುತ್ತದೆ. ಜನರು ಬದಲಾವಣೆ ಬಯಸಿದ್ದಾರೆ. 40 ಪರ್ಸೆಂಟ್ ಭ್ರಷ್ಟಾಚಾರ, ಬಿಜೆಪಿ ಸರ್ಕಾರದ ವಿರುದ್ದ ಕೆಂಪಣ್ಣ ಧ್ವನಿ ಎತ್ತಿದ್ದರು. ರಾಜ್ಯದ ಜನ ಬೇಸತ್ತು, ಬಿಜೆಪಿ ತೊಲಗಲಿ ಎಂದು ಪಾಠ ಕಲಿಸಿದ್ದಾರೆ. ಮೋದಿ,ನಡ್ಡಾ, ಯಡಿಯೂರಪ್ಪ ಎಲ್ಲರಿಗೂ ಗೊತ್ತಿದ್ದರೂ ಸುಳ್ಳು ಹೇಳುತ್ತಿದ್ದರು. ಇಂಟೆಲಿಜೆಂಟ್ಸ್ ಎಜೆನ್ಸಿ ಇದ್ದರೂ ಆಗಲಿಲ್ಲ ಎಂದಿದ್ದಾರೆ ಸಿದ್ದರಾಮಯ್ಯ. ತಾವು ಎಣಿಸಿದಂತೆಯೇ ಕಾಂಗ್ರೆಸ್ 120 ಕ್ಕಿಂತ ಹೆಚ್ಚು ಸ್ಥಾನ ಪಡೆಯಲಿದೆ ಮತ್ತು ಯಾವುದೇ ಪಕ್ಷದ ನೆರವಿಲ್ಲದೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ . ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ (V Somanna) ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋಲಲಿದ್ದಾರೆ ಎಂದು ಅವರು ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಅಮಿತ್ ಶಾ (Amit Shah) ಅವರು ಎಷ್ಟೇ ಬಾರಿ ರಾಜ್ಯಕ್ಕೆ ಬಂದರೂ ಮತದಾರನ ಮೇಲೆ ಪ್ರಭಾವ ಬೀರಲಾರರು, ಯಾಕೆಂದರೆ, ರಾಜ್ಯದ ಜನತೆ ಬಿಜೆಪಿ ಸರ್ಕಾರದಿಂದ ಬೇಸತ್ತು ಹೋಗಿದೆ. ಕಾಂಗ್ರೆಸ್ ಪಕ್ಷ ಹೇಳಿದ್ದು ನಿಜವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಚುನಾವಣೆಯಲ್ಲಿ ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಗೆಲುವು, ಹಲವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಇದು ಜಾತ್ಯತೀತ ಪಕ್ಷಕ್ಕೆ ಸಂದ ಜಯ.ಕರ್ನಾಟಕದ ಜನರು ಭರವಸೆ ನೀಡಿದಂತೆ ನೀಡುವ ಸ್ಥಿರ ಸರ್ಕಾರವನ್ನು ಬಯಸಿದ್ದರು ಮತ್ತು ಆದ್ದರಿಂದ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ ಎಂದಿದ್ದಾರೆ.

ಇನ್ನೊಂದು ಟ್ವೀಟ್​​ನಲ್ಲಿ 40% ಕಮಿಷನ್‌ ವಿರುದ್ಧ ಪ್ರಾಮಾಣಿಕತೆ, ಅಸ್ಥಿರತೆಯ ವಿರುದ್ಧ ಸ್ಥಿರತೆ, ಕೋಮು ರಾಜಕಾರಣದ ವಿರುದ್ಧ ಸೆಕ್ಯುಲರಿಸಂ, ದ್ವೇಷದ ವಿರುದ್ಧ ಸಾಮರಸ್ಯ, ಟ್ರಬಲ್ ಎಂಜಿನ್ ವಿರುದ್ಧದ ಕರ್ನಾಟಕದ ದನಿ, ಕನ್ನಡಿಗರ ಜನಾದೇಶ ಗಟ್ಟಿಯಾಗಿದೆ. ಇದು ಕಾಂಗ್ರೆಸ್ ಎಂದು ಟ್ವೀಟ್ ಮಾಡಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:42 pm, Sat, 13 May 23

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!