AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಬೌಲಿಂಗ್ ಕೋಲಾರದ ಕಡೆ ಹಾಕಿ, ರನ್ ವರಣಾ ಕಡೆ ಓಡ್ತಾರೆ: ಮಾಜಿ ಶಿಷ್ಯನ ಅಚ್ಚರಿ ಹೇಳಿಕೆ

ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ವ್ಯಾಪಾಕ ಚರ್ಚೆ ನಡೆಯುತ್ತಲೇ ಇದೆ. ಕೆಲವರು ಸಿದ್ದರಾಮಯ್ಯ ವರುಣಾಗೆ ಹೋಗುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಬೌಲಿಂಗ್ ಕೋಲಾರದ ಕಡೆ ಹಾಕಿ, ರನ್ ವರಣಾ ಕಡೆ ಓಡ್ತಾರೆ: ಮಾಜಿ ಶಿಷ್ಯನ ಅಚ್ಚರಿ ಹೇಳಿಕೆ
ಸಿದ್ದರಾಮಯ್ಯ Image Credit source: indianexpress.com
TV9 Web
| Edited By: |

Updated on: Jan 25, 2023 | 4:22 PM

Share

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಗ್ನಿ ಪರೀಕ್ಷೆ ಎದುರಿಸುವುದಕ್ಕೆ ಚಿನ್ನದ ನಾಡಿನತ್ತ ಮುಖ ಮಾಡಿದ್ದಾರೆ. ಅಳೆದು ತೂಗಿ ಕೋಲಾರ (Kolar) ಕಣದಿಂದ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ. ಆದ್ರೆ, ಸಿದ್ದು ಪ್ರಜಾಧ್ಭನಿ ಸಮಾವೇಶದಲ್ಲಿ ಕ್ಷೇತ್ರ ಆಯ್ಕೆಯ ವಿಚಾರವನ್ನ ತುಂಬಾ ಗಟ್ಟಿಯಾಗಿ ಹೇಳದೇ ಹೈಕಮಾಂಡ್ ತೀರ್ಮಾನ ಎಂದಿದ್ದಾರೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆಯ ಕೊನೆ ಕ್ಷಣದಲ್ಲಿ ಕೋಲಾರ ಬಿಟ್ಟು ವರುಣಾದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದರು. ಇದೀಗ ಇದೇ ಮಾತನ್ನು ಆರೋಗ್ಯ ಸಚಿವ ಸುಧಾಕರ್ (Dr K Sudhakar) ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಬರೀ ಡ್ರಾಮ ಅಷ್ಟೆ, ಸಿದ್ದು ನಡೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಬಿ.ಎಸ್.ಯಡಿಯೂರಪ್ಪ

ಇಂದು (ಜನವರಿ 25) ಕೋಲಾರದಲ್ಲಿ ಮಾತನಾಡಿರುವ ಸುಧಾಕರ್, ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲುವುದು ಬಹಳ ಕಷ್ಟ. ಕೋಲಾರದಲ್ಲಿ ಕೆಲವು ನಾಯಕರು ಸೋಲುತ್ತಿದ್ದಾರೆ. ಸಿದ್ದರಾಮಯ್ಯರನ್ನು ಇಟ್ಟುಕೊಂಡು ಗೆಲ್ಲಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಖೆಡ್ಡಾ ತೋಡುತ್ತಿದ್ದಾರೆ. ಬಹುಶಃ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲ್ಲ ಎಂದರು.

ಕೊನೆಗೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಬೌಲಿಂಗ್ ಕೋಲಾರದ ಕಡೆ ಹಾಕಿ, ರನ್ ವರಣಾ ಕಡೆ ಓಡುತ್ತಾರೆ ಎಂದು ಹೇಳಿದರು.

ಬಿಎಸ್​ವೈ ಹೇಳಿದ್ದು ಇದನ್ನೇ

ಈಗ ಸುಧಾಕರ್ ಹೇಳಿದ್ದ ಮಾತುಗಳನ್ನು ಇತ್ತೀಚೆಗೆ ಅಷ್ಟೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದರು. ಯಾವ ಕಾರಣಕ್ಕೂ ಕೋಲಾರದಿಂದ ಸಿದ್ದರಾಮಯ್ಯ ನಿಲ್ಲುವುದಿಲ್ಲ. ಡ್ರಾಮಾ ಮಾಡುತ್ತಿದ್ದಾರೆ. ಕೋಲಾರದಲ್ಲಿ ನಿಂತುಕೊಂಡರೆ ಅವರು ಮನೆಗೆ ಹೋಗುವುದು ನಿಶ್ಚಿತ ಎಂದು ಅರಿತು ಮೈಸೂರಿಗೆ ಬರಲು ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದರು.

ಕೋಲಾರದಲ್ಲಿ ಸೋಲು ಎದುರಾಗುವ ಖಾತ್ರಿ ಸಿದ್ದರಾಮಯ್ಯ ಅವರಿಗಿದ್ದು, ಮೈಸೂರಿನಲ್ಲಿ ಸ್ಪರ್ಧಿಸಲು ಯತ್ನಿಸುತ್ತಿದ್ದಾರೆ. ಆದರೆ ಅವರು ಸುಮ್ಮನೆ ರಾಜಕೀಯ ಡೋಂಬರಾಟ, ನಾಟಕ ಮಾಡುತ್ತಿದ್ದಾರೆ ಅಷ್ಟೆ. ನನ್ನ ಪ್ರಕಾರ ಅವರು ಕೋಲಾರದಲ್ಲಿ ನಿಲ್ಲುವುದಿಲ್ಲ ಮೈಸೂರಿಗೆ ಹೋಗಬಹುದು. ಆದಾದ ಬಳಿಕ ಮುಂದಿನ ಸ್ಟ್ಯಾಟರ್ಜಿ ಮಾಡಬೇಕು ಮಾಡುತ್ತೇವೆ. ಸಿದ್ದರಾಮಯ್ಯ ಎರಡು ಕಡೆಯಾದರೂ ಸ್ಪರ್ಧೆ ಮಾಡಲಿ ಅಥವಾ ಮೂರು ಕಡೆಯಾದರೂ ಸ್ಪರ್ಧೆ ಮಾಡಲಿ. ಆದರೆ ಅವರು ಮನೆಗೆ ಹೋಗುವುದು ಅಂತು ನಿಶ್ಚಿತ ಎಂದು ಹೇಳಿದ್ದರು.

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ