AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira Election Results: ಶಿರಾ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಕಾಂಗ್ರೆಸ್​ ಜೆಡಿಎಸ್ ನಡುವೆ ಜಿದ್ದಾಜಿದ್ದಿ

Sira Assembly Election Result 2023 Live Counting Updates: ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದ್ದು, 2020ರ ಉಪಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿ ಕ್ಷೇತ್ರ ಗೆದ್ದುಕೊಂಡಿತ್ತು.

Sira Election Results: ಶಿರಾ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಕಾಂಗ್ರೆಸ್​ ಜೆಡಿಎಸ್ ನಡುವೆ ಜಿದ್ದಾಜಿದ್ದಿ
ಶಿರಾ ವಿಧಾನಸಭೆ ಚುನಾವಣೆ ಫಲಿತಾಂಶ
Rakesh Nayak Manchi
|

Updated on: May 13, 2023 | 2:36 AM

Share

Sira Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ತುಮಕೂರು ಜಿಲ್ಲೆಯ ಶಿರಾ (ಸಿರಾ) ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ರಾಜೇಶ್ ಗೌಡ, ಕಾಂಗ್ರೆಸ್​ನಿಂದ ಟಿಬಿ ಜಯಚಂದ್ರ ಹಾಗೂ ಜೆಡಿಎಸ್​ನಿಂದ ಆರ್ ಉಗ್ರೇಶ್ ಕಣದಲ್ಲಿದ್ದಾರೆ. ಇವರ ನಡುವೆ ಆಮ್ ಆದ್ಮಿ ಪಕ್ಷದ ಶಶಿ ಕುಮಾರ್ ಅವರು ಹೋರಾಟ ನಡೆಸುತ್ತಿದ್ದಾರೆ.

ದಶಕಗಳಿಂದ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿ ಇದ್ದು, 2020ರಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿ ಕ್ಷೇತ್ರವನ್ನು ಗೆದ್ದುಕೊಂಡಿತ್ತು. 1999ರಲ್ಲಿ ಕಾಂಗ್ರೆಸ್​ನ ಪಿಎಂ ರಂಗನಾಥ್ ಅವರು ಜೆಡಿಎಸ್​ನ ಬಿ ಸತ್ಯನಾರಾಯಣ ಅವರನ್ನು 25ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು. 2004ರ ಚುನಾವಣೆಯಲ್ಲಿ ಸತ್ಯನಾರಾಯಣ ಅವರು ಕಾಂಗ್ರೆಸ್​ನ ಶ್ರೀನಿವಾಸಯ್ಯ ಅವರನ್ನು ಸೋಲಿಸಿದ್ದರು.

2008ರ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಟಿಬಿ ಜಯಚಂದ್ರ ಅವರು ಜೆಡಿಎಸ್​ನ ಸತ್ಯನಾರಾಯಣ ಅವರನ್ನು 26 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. 2013ರ ಚುನಾವಣೆಯಲ್ಲಿ ಟಿಬಿ ಜಯಚಂದ್ರ ಅವರು ಸತತ 2ನೇ ಬಾರಿ ಚುನಾಯಿತರಾಗಿದ್ದರು. ಸತ್ಯನಾರಾಯಣ ಅವರು ಸೋಲು ಅನುಭವಿಸಿದ್ದರು.

2018ರ ಚುನಾವಣೆಯಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಡಾ ಸಿ ಎಂ ರಾಜೇಶ್ ಗೌಡ ಅವರು ಕಾಂಗ್ರೆಸ್​ನ ಜಯಚಂದ್ರ ಅವರನ್ನು 10ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. ನಂತರ ಶಾಸಕ ಸ್ಥಾನಕ್ಕೆ ರಾಜೇಶ್ ಗೌಡ ಅವರು ರಾಜೀನಾಮೆ ನೀಡಿ ಬಿಜೆಪಿ ಸೇರಿದರು. ಅದರಂತೆ 2020ರಲ್ಲಿ ನಡೆದ ಉಪಚುನಾವಣೆಯಲ್ಲಿ ರಾಜೇಶ್ ಗೌಡ ಅವರು ಬಿಜೆಪಿಯಿಂದ ಆರಿಸಿಬಂದರು. ಕಾಂಗ್ರೆಸ್​ನ ಜಯಚಂದ್ರ ಅವರನ್ನು 13414 ಮತಗಳ ಅಂತರದಲ್ಲಿ ರಾಜೇಶ್ ಗೌಡ ಅವರು ಸೋಲಿಸಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು