AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Soraba Election 2023 Winner: ಸೊರಬದಲ್ಲಿ ಮಧು ಬಂಗಾರಪ್ಪ ಗೆಲುವು, ಕುಮಾರ್ ಬಂಗಾರಪ್ಪಗೆ ಹೀನಾಯ ಸೋಲು

Madhu Bangarappa: ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ.

Soraba Election 2023 Winner: ಸೊರಬದಲ್ಲಿ ಮಧು ಬಂಗಾರಪ್ಪ ಗೆಲುವು, ಕುಮಾರ್ ಬಂಗಾರಪ್ಪಗೆ ಹೀನಾಯ ಸೋಲು
ಮಧು ಬಂಗಾರಪ್ಪ
ನಯನಾ ರಾಜೀವ್
|

Updated on:May 13, 2023 | 11:57 AM

Share

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಹುಟ್ಟೂರು ಸೊರಬದಲ್ಲಿ ಸೋಲಿಲ್ಲದ ಸರದಾರನಂತೆ ಸತತ 7 ಬಾರಿ ಶಾಸಕರಾಗಿ ಎಸ್​. ಬಂಗಾರಪ್ಪ ಮೆರೆದಿದ್ದರು. ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿಂದು ಬಂಗಾರಪ್ಪರವರ ಮಕ್ಕಳಿಬ್ಬರ ದಾಯಾದಿ ಕಲಹ ನಡೆಯುತ್ತಿದೆ.

1994ರವರೆಗೆ ಸತತ ಏಳು ಬಾರಿ ಎಸ್ ಬಂಗಾರಪ್ಪ ಅವರು, ಸೊರಬವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 2008ರಲ್ಲಿ ಒಮ್ಮೆ ಬಂಗಾರಪ್ಪ ಕುಟುಂಬದ ಹೊರತಾಗಿ ಹಾಲಪ್ಪ ಈ ಕ್ಷೇತ್ರದ ಶಾಸಕರಾಗಿದ್ದರು.

ಉಳಿದಂತೆ ಈ ಕ್ಷೇತ್ರವು ಬಂಗಾರಪ್ಪ ಕುಟುಂಬದ ಕೈಯಲ್ಲಿಯೇ ಇದೆ. ಈಗ ಮೂರನೇ ಬಾರಿಗೆ ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದಾರೆ. ಈ ಹಿಂದಿನ ಅಣ್ಣ-ತಮ್ಮಂದಿರ ನಡುವಿನ ಎರಡೂ ಚುನಾವಣೆಯಲ್ಲಿ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರು. ಹಾಗೆಯೇ ಈಗಾಗಲೇ ಮೂರು ಬಾರಿ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಸುಮಾರು 13 ಸಾವಿರ ಮತಗಳಿಂದ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರೆ, 2004ರಲ್ಲಿ ಸುಮಾರು 12 ಸಾವಿರ ಮತಗಳಿಂದ ವಿಜಯಿಯಾಗಿದ್ದರು.

ಈ ಕ್ಷೇತ್ರದಲ್ಲಿ ಬಂಗಾರಪ್ಪ ಕುಟುಂಬದ ಪ್ರಭಾವ ಹೆಚ್ಚಿದ್ದು, ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದಾಗ, ಕ್ಷೇತ್ರದ ನಾಮಪತ್ರ ಸಲ್ಲಿಕೆ ಹಾಗೂ ಮತದಾನ ಬಿಟ್ಟರೆ ಅವರಿಗೆ ಪ್ರಚಾರದ ಅಗತ್ಯವಿರಲಿಲ್ಲ ಎನ್ನುವಷ್ಟು ಜನಪ್ರಿಯತೆ ಇತ್ತು. ಈ ಬಾರಿ ಅಣ್ಣ ತಮಗಮದಿರ ಜತೆಗೆ ಜೆಡಿಎಸ್​ನಿಂದ ಬಿ. ಚಂದ್ರೇಗೌಡ ಹಾಗೂ ಆಪ್​ನಿಂದ ಚಂದ್ರಶೇಖರ್ ಸ್ಪರ್ಧಿಸಿದ್ದರು.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sat, 13 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ