AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Soraba Election 2023 Winner: ಸೊರಬದಲ್ಲಿ ಮಧು ಬಂಗಾರಪ್ಪ ಗೆಲುವು, ಕುಮಾರ್ ಬಂಗಾರಪ್ಪಗೆ ಹೀನಾಯ ಸೋಲು

Madhu Bangarappa: ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ.

Soraba Election 2023 Winner: ಸೊರಬದಲ್ಲಿ ಮಧು ಬಂಗಾರಪ್ಪ ಗೆಲುವು, ಕುಮಾರ್ ಬಂಗಾರಪ್ಪಗೆ ಹೀನಾಯ ಸೋಲು
ಮಧು ಬಂಗಾರಪ್ಪ
ನಯನಾ ರಾಜೀವ್
|

Updated on:May 13, 2023 | 11:57 AM

Share

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಹುಟ್ಟೂರು ಸೊರಬದಲ್ಲಿ ಸೋಲಿಲ್ಲದ ಸರದಾರನಂತೆ ಸತತ 7 ಬಾರಿ ಶಾಸಕರಾಗಿ ಎಸ್​. ಬಂಗಾರಪ್ಪ ಮೆರೆದಿದ್ದರು. ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿಂದು ಬಂಗಾರಪ್ಪರವರ ಮಕ್ಕಳಿಬ್ಬರ ದಾಯಾದಿ ಕಲಹ ನಡೆಯುತ್ತಿದೆ.

1994ರವರೆಗೆ ಸತತ ಏಳು ಬಾರಿ ಎಸ್ ಬಂಗಾರಪ್ಪ ಅವರು, ಸೊರಬವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 2008ರಲ್ಲಿ ಒಮ್ಮೆ ಬಂಗಾರಪ್ಪ ಕುಟುಂಬದ ಹೊರತಾಗಿ ಹಾಲಪ್ಪ ಈ ಕ್ಷೇತ್ರದ ಶಾಸಕರಾಗಿದ್ದರು.

ಉಳಿದಂತೆ ಈ ಕ್ಷೇತ್ರವು ಬಂಗಾರಪ್ಪ ಕುಟುಂಬದ ಕೈಯಲ್ಲಿಯೇ ಇದೆ. ಈಗ ಮೂರನೇ ಬಾರಿಗೆ ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದಾರೆ. ಈ ಹಿಂದಿನ ಅಣ್ಣ-ತಮ್ಮಂದಿರ ನಡುವಿನ ಎರಡೂ ಚುನಾವಣೆಯಲ್ಲಿ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರು. ಹಾಗೆಯೇ ಈಗಾಗಲೇ ಮೂರು ಬಾರಿ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಸುಮಾರು 13 ಸಾವಿರ ಮತಗಳಿಂದ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರೆ, 2004ರಲ್ಲಿ ಸುಮಾರು 12 ಸಾವಿರ ಮತಗಳಿಂದ ವಿಜಯಿಯಾಗಿದ್ದರು.

ಈ ಕ್ಷೇತ್ರದಲ್ಲಿ ಬಂಗಾರಪ್ಪ ಕುಟುಂಬದ ಪ್ರಭಾವ ಹೆಚ್ಚಿದ್ದು, ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದಾಗ, ಕ್ಷೇತ್ರದ ನಾಮಪತ್ರ ಸಲ್ಲಿಕೆ ಹಾಗೂ ಮತದಾನ ಬಿಟ್ಟರೆ ಅವರಿಗೆ ಪ್ರಚಾರದ ಅಗತ್ಯವಿರಲಿಲ್ಲ ಎನ್ನುವಷ್ಟು ಜನಪ್ರಿಯತೆ ಇತ್ತು. ಈ ಬಾರಿ ಅಣ್ಣ ತಮಗಮದಿರ ಜತೆಗೆ ಜೆಡಿಎಸ್​ನಿಂದ ಬಿ. ಚಂದ್ರೇಗೌಡ ಹಾಗೂ ಆಪ್​ನಿಂದ ಚಂದ್ರಶೇಖರ್ ಸ್ಪರ್ಧಿಸಿದ್ದರು.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sat, 13 May 23

Follow Us
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್