AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sowmya Reddy: ಸೌಮ್ಯಾ ರೆಡ್ಡಿಯಿಂದ ಮತದಾರರಿಗೆ ಆಮಿಷ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ ಸೇರಿದ ಕಾರಿನಲ್ಲಿ ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ವಸ್ತುಗಳು ಸಿಕ್ಕಿದ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

Sowmya Reddy: ಸೌಮ್ಯಾ ರೆಡ್ಡಿಯಿಂದ ಮತದಾರರಿಗೆ ಆಮಿಷ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಸೌಮ್ಯಾ ರೆಡ್ಡಿImage Credit source: Facebook
ಗಣಪತಿ ಶರ್ಮಾ
|

Updated on: Apr 07, 2023 | 2:44 PM

Share

ಮುಖ್ಯಾಂಶಗಳು

  • ಸೌಮ್ಯಾ ರೆಡ್ಡಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು.
  • ರಾಜಕೀಯ ಒತ್ತಡದಿಂದ ಕಾರಿನ ಮಾಲೀಕರ ವಿರುದ್ಧ ದೂರು ದಾಖಲಾಗಿಲ್ಲ ಎಂದು ಆರೋಪ.
  • ದೂರು ದಾಖಲಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟದ ಎಚ್ಚರಿಕೆ.

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಕಾರಿನಲ್ಲಿ ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ವಸ್ತುಗಳು ಸಿಕ್ಕಿದ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಬಿಜೆಪಿ ಮುಖಂಡರಾದ ಎನ್​ಆರ್ ರಮೇಶ್, ಭಾಸ್ಕರ್ ರಾವ್​ ದೂರು ನೀಡಿದ್ದಾರೆ. ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆ ಕಾರಿನಲ್ಲಿ ಮೊಬೈಲ್​​ಗಳು ಸೇರಿದಂತೆ ಇತರೆ ವಸ್ತುಗಳು ಸಿಕ್ಕಿವೆ. ಆದರೆ, ಕಾರು ಚಾಲಕ ರಾಮಚಂದ್ರ ವಿರುದ್ಧ ಮಾತ್ರ ದೂರು ಹಾಕಲಾಗಿದೆ. ರಾಜಕೀಯ ಒತ್ತಡದಿಂದ ಮಾಲೀಕರ ವಿರುದ್ಧ ದೂರು ದಾಖಲಾಗಿಲ್ಲ ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ಸೌಮ್ಯಾ ರೆಡ್ಡಿ ವಿರುದ್ಧ ಕೇಸ್​ ದಾಖಲಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದು ಆಯೋಗಕ್ಕೆ ದೂರು ನೀಡಿದ ಬಳಿಕ ಬಿಜೆಪಿ ಮುಖಂಡ ಎನ್​ಆರ್ ರಮೇಶ್ ಎಚ್ಚರಿಕೆ ನೀಡಿದ್ದಾರೆ.

ನಮ್ಮ ದೂರಿಗೆ ಚುನಾವಣಾ ಆಯೋಗ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ. ಒಂದು ವೇಳೆ ಸೌಮ್ಯ ರೆಡ್ಡಿ ವಿರುದ್ಧ ದೂರು ದಾಖಲಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Sowmya Reddy: ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಇನೋವಾ ಕಾರು ಜಪ್ತಿ; ಏನೇನು ಸಿಕ್ತು ನೋಡಿ

ಸೌಮ್ಯಾ ರೆಡ್ಡಿ ಅವರಿಗೆ ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದರು. ಅದರಲ್ಲಿ ಮತದಾರರಿಗೆ ಹಂಚಲು ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದು ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪೊಲೀಸರ ಗಮನಕ್ಕೆ ಬಂದಿತ್ತು. ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್, ಸ್ಯಾಮ್ಸಂಗ್, ನೋಕಿಯಾ ಆ್ಯಂಡ್ರಾಯ್ಡ್ ಮೊಬೈಲ್​ಗಳನ್ನು ಮತದಾರರಿಗೆ ಹಂಚಲು ಕಾರಿನಲ್ಲಿ ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದರು.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ಬೆಂಗಳೂರಿನ ಆರ್​ಟಿ ನಗರದಲ್ಲಿ ಚುನಾವಣಾಧಿಕಾರಿಗಳು ಬುಧವಾರ ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 231 ಕುಕ್ಕರ್​​ಗಳ ಜಪ್ತಿ ಮಾಡಿದ್ದರು. ಇವುಗಳನ್ನು ಮತದಾರರಿಗೆ ಹಂಚುವುದಕ್ಕಾಗಿ ಖಾಲಿ ಮನೆಯಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಪೈಕಿ ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭಾವಚಿತ್ರವಿರುವ 60 ಕುಕ್ಕರ್​​ಗಳನ್ನೂ​ ಜಪ್ತಿ ಮಾಡಲಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ