AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಆರ್ ಪಾಟೀಲ್​ಗೆ ತಪ್ಪಿದ ಟಿಕೆಟ್: ಕಾಂಗ್ರೆಸ್ ನಾಯಕರಿಗೆ ಪಾಟೀಲ್ ಅಭಿಮಾನಿಯ ಬಹಿರಂಗ ಸವಾಲು

ಕಾಂಗ್ರೆಸ್ ಹಿರಿಯ ನಾಯಕ ಎಸ್​ಆರ್ ಪಾಟೀಲ್ ಅವರಿಗೆ ದೇವರ ಹಿಪ್ಪರಗಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಣ್ಣೀರು ಹಾಕಿದ ಅಭಿಮಾನಿಯೊಬ್ಬ ಬಾಗಲಕೋಟೆ ಜಿಲ್ಲೆಯಲ್ಲಿ ಪಾಟೀಲ್ ಇಲ್ಲದೇ ಒಂದೇ ಒಂದು ಕ್ಷೇತ್ರ ಗೆದ್ದು ತೋರಿಸುವಂತೆ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾನೆ.

ಎಸ್​ಆರ್ ಪಾಟೀಲ್​ಗೆ ತಪ್ಪಿದ ಟಿಕೆಟ್: ಕಾಂಗ್ರೆಸ್ ನಾಯಕರಿಗೆ ಪಾಟೀಲ್ ಅಭಿಮಾನಿಯ ಬಹಿರಂಗ ಸವಾಲು
ಎಸ್​ಆರ್ ಪಾಟೀಪ್​ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಣ್ಣೀರು ಹಾಕಿದ ಅಭಿಮಾನಿ
Rakesh Nayak Manchi
Rakesh Nayak Manchi|

Updated on: Apr 15, 2023 | 11:23 PM

Share

ಬಾಗಲಕೋಟೆ: ಕಾಂಗ್ರೆಸ್ ಹಿರಿಯ ನಾಯಕ ಎಸ್​ಆರ್ ಪಾಟೀಲ್ (SR Patil) ಅವರಿಗೆ ದೇವರ ಹಿಪ್ಪರಗಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಣ್ಣೀರು ಹಾಕಿದ ಅಭಿಮಾನಿಯೊಬ್ಬ ಬಾಗಲಕೋಟೆ ಜಿಲ್ಲೆಯಲ್ಲಿ ಪಾಟೀಲ್ ಇಲ್ಲದೇ ಒಂದೇ ಒಂದು ಕ್ಷೇತ್ರ ಗೆದ್ದು ತೋರಿಸುವಂತೆ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಜಿಲ್ಲೆ ಬಾಡಗಂಡಿಯಲ್ಲಿ ಎಸ್‌ಅರ್ ಪಾಟೀಲ್ ಎದುರೇ ಕಣ್ಣೀರು ಹಾಕಿದ ವೆಂಕಣ್ಣ ಬಿರಾದಾರ, ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕರು ನಿಮಗೆ ಅನ್ಯಾಯ ಮಾಡಿದ್ದಾರೆ. ಎಂಬಿ ಪಾಟೀಲ್‌ರಿಂದ (MB Patil) ಅನ್ಯಾಯ ಆಗಿದೆ ಎಂದು ಆಕ್ರೋಶದ ನುಡಿಗಳನ್ನಾಡಿದ್ದಾರೆ.

ನಿಮ್ಮನ್ನ ಬಿಟ್ಟು ನಾವಿಲ್ಲ, ದಯವಿಟ್ಟು ಒಂದು ತೀರ್ಮಾನಕ್ಕೆ ಬನ್ನಿ ಎಂದು ಎಸ್​ಆರ್ ಪಾಟೀಲರನ್ನು ಒತ್ತಾಯಿಸಿರುವ ವೆಂಕಣ್ಣ ಬಿರಾದಾರ, ತಾಕತ್ತಿದ್ದರೆ ನೀವಿಲ್ಲದೇ ಜಿಲ್ಲೆಯಲ್ಲಿ ಒಂದೇ ಒಂದು ಸೀಟ್ ತಗೊಂಡ ಬರಲಿ ಎಂದು ಜಿಲ್ಲೆಯ ಕೈ ನಾಯಕರಿಗೆ ಸವಾಲ್ ಹಾಕಿದ್ದಾರೆ. ಜಿಲ್ಲಾ ಪಂಚಾಯತ್​ನಲ್ಲಿ ಕಾಂಗ್ರೆಸ್​ಗೆ ಬಹುಮತ ಬರಬೇಕಾದರೆ ಎಸ್ ಆರ್ ಪಾಟೀಲ್ ಬೇಕು. ನೀವು ಮನಸ್ಸು ಮಾಡಿದರೆ ಜಿಲ್ಲೆಯಲ್ಲಿ ಒಂದೇ ಒಂದು ಸೀಟ್ ಬರಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್​ನಲ್ಲಿ ಕೊಪ್ಪಳಕ್ಕೆ ಬಂದ ಸಿದ್ದರಾಮಯ್ಯ ನೋಡಲು ಹೆಲಿಪ್ಯಾಡ್​ಗೆ ನುಗ್ಗಿದ ಜನ! ವಿಡಿಯೋ ಇಲ್ಲಿದೆ

ನಿಮ್ಮ ಶಾಂತ ಸ್ವಭಾವವನ್ನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅರ್ಥಮಾಡಿಕೊಳ್ಳದೇ ತುಳಿದಿದ್ದಾರೆ. ಶ್ಯಾಮನೂರು ಅವರಿಗೆ 92 ವರ್ಷ ವಯಸ್ಸಾದರೂ ಟಿಕೆಟ್ ಕೊಟ್ಟಿದ್ದಾರೆ. ಆದರೆ ನಿಮಗೆ ಕೊಡಲಿಲ್ಲ ಎಂದು ರಾಜ್ಯ ಕೈ ನಾಯಕರ ವಿರುದ್ಧ ವೆಂಕಣ್ಣ ಬಿರಾದಾರ ಅಸಮಾಧಾನ ಹೊರಹಾಕಿದ್ದಾರೆ.

ವಿಧಾನಸಭೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ