AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ ಜಿ ಪರಮೇಶ್ವರ್​​ ಮೇಲೆ ಕಿಡಿಗೇಡಿಯಿಂದ ಕಲ್ಲೆಸೆತ; ತಪ್ಪಿತಸ್ಥರನ್ನ ಬಂಧಿಸುವಂತೆ ಕಾರ್ಯಕರ್ತರ ಆಕ್ರೋಶ

ರಾಜ್ಯ ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲೇಟು ಪ್ರಕರಣ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೇಲೆ ಕಿಡಿಗೇಡಿ ಕಲ್ಲೆಸೆದಿದ್ದಾರೆ. ಇದೀಗ ಕಲ್ಲೆಸೆತ ಪ್ರಕರಣ ಕಾರ್ಯಕರ್ತರ ಆಕ್ರೋಷಕ್ಕೆ ಕಾರಣವಾಗಿದೆ.

ಡಾ ಜಿ ಪರಮೇಶ್ವರ್​​ ಮೇಲೆ ಕಿಡಿಗೇಡಿಯಿಂದ ಕಲ್ಲೆಸೆತ; ತಪ್ಪಿತಸ್ಥರನ್ನ ಬಂಧಿಸುವಂತೆ ಕಾರ್ಯಕರ್ತರ ಆಕ್ರೋಶ
ಜಿ. ಪರಮೇಶ್ವರ
ಕಿರಣ್ ಹನುಮಂತ್​ ಮಾದಾರ್
|

Updated on: Apr 29, 2023 | 10:09 AM

Share

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ(Karnataka Assembly Election)ಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಮತಬೇಟೆಯಲ್ಲಿ ನಿರತರಾಗಿದ್ದಾರೆ. ಈ ಹೊತ್ತಿನಲ್ಲಿ ಜಿಲ್ಲೆಯ ಕೊರಟಗೆರೆ(Koratagere)ವಿಧಾನಸಭಾ ಕ್ಷೇತ್ರದಲ್ಲಿ ಕಲ್ಲೆಸೆತ ಪ್ರಕರಣ ಕಾನೂನು ಸುವ್ಯವಸ್ಥೆಯನ್ನ ಭಂಗವುಂಟು ಮಾಡಿದಂತಾಗಿದೆ. ಹೌದು, ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ನಿನ್ನೆ(ಏ.28) ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ(G Parameshwara) ಮೇಲೆ ಕಿಡಿಗೇಡಿ ಕಲ್ಲೆಸೆದಿದ್ದು, ಗಾಯಗೊಂಡಿದ್ದಾರೆ. ಮುಂಜಾನೆಯಿಂದಲೂ ಕ್ಷೇತ್ರದಲ್ಲಿ ತಮ್ಮ ಅಪಾರ ಕಾರ್ಯಕರ್ತರೊಟ್ಟಿಗೆ ಪ್ರಚಾರ ನಡೆಸುತ್ತಿದ್ದ ಪರಮೇಶ್ವರ್, ಮಧ್ಯಾಹ್ನದ ವೇಳೆಗೆ ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಜೆಸಿಬಿ ಮೂಲಕ ಹೂ ಸುರಿಯಲು, ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಹಾಕಲು ಅಣಿಯಾಗಿದ್ದ ಕಾರ್ಯಕರ್ತರು, ಪರಮೇಶ್ವರ್ ಆಗಮಿಸಿದ ಕೂಡಲೇ ಅವರನ್ನ ಹೆಗಲ ಮೇಲೆ ಎತ್ತಿ ಕುಣಿಸಿದ್ದಾರೆ. ಹೂ ಸುರಿಯೋ ವೇಳೆಗೆ ದಿಢೀರನೇ ಕಲ್ಲೊಂದು ಪರಮೇಶ್ವರ್ ತಲೆಗೆ ತಾಗಿ ರಕ್ತಸ್ರಾವವಾಗಿತ್ತು. ಕೂಡಲೇ ಪರಮೇಶ್ವರ್ ಅವರನ್ನ ಕೆಳಗಿಳಿಸಿದ ಕಾರ್ಯಕರ್ತರು, ಹತ್ತಿರದ ಅಕ್ಕಿರಾಂಪುರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ತುಮಕೂರಿನ ಸಿದ್ದಾರ್ಥನಗರದ ತಮ್ಮ ನಿವಾಸಕ್ಕೆ ರವಾನಿಸಿ ವೈದ್ಯರ ತಂಡ ಚಿಕಿತ್ಸೆ ನೀಡಿದೆ.

ಪರಮೇಶ್ವರ್ ನಿವಾಸಕ್ಕೆ ಕಾರ್ಯಕರ್ತರ, ಅಭಿಮಾನಿಗಳ ದಂಡು

ಇನ್ನು ಕಲ್ಲೆಸೆತ ವಿಚಾರ ತಿಳಿಯುತ್ತಿದ್ದಂತೆ ಸಿದ್ದಾರ್ಥನಗರದ ಪರಮೇಶ್ವರ್ ನಿವಾಸಕ್ಕೆ ಕಾರ್ಯಕರ್ತರ, ಅಭಿಮಾನಿಗಳ ದಂಡೇ ಹರಿದುಬಂದಿದೆ. ಬೆಂಗಳೂರಿನಲ್ಲಿದ್ದ ಪರಮೇಶ್ವರ್ ಪತ್ನಿ ಕನ್ನಿಕಾ, ತಂಗನಹಳ್ಳಿಮಠದಶ್ರೀಗಳು, ಖಾರದಮಠದಶ್ರೀಗಳು ದೌಡಾಯಿಸಿ ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದರು. ಎಸ್ಪಿ ರಾಹುಲ್ ಕುಮಾರ್ ಶಹಾಪೂರ್ ವಾಡ್ ಆಗಮಿಸಿ ಘಟನೆ ಬಗ್ಗೆ ಮಾಹಿತಿ ಪಡೆದರು. ಇನ್ನು ಘಟನೆಯನ್ನ ಖಂಡಿಸಿದ ಪರಮೇಶ್ವರ್ ಬೆಂಬಲಿಗರು ಪೊಲೀಸರ ವಿರುದ್ದ ಧಿಕ್ಕಾರ ಕೂಗಿ, ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ರಕ್ತ ರಾಜಕೀಯ: 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ತಾರೆ, ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ಟಾಂಗ್

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕೂಡ ಘಟನೆ ಖಂಡಿಸಿದ್ದು, ಚುನಾವಣೆಗಳಲ್ಲಿ ಕಲ್ಲು ಎಸೆಯುವುದು, ಹೆದರಿಸುವುದು ಸರಿಯಲ್ಲ. ಒಬ್ಬ ಅಭ್ಯರ್ಥಿಗೆ ಕಲ್ಲು ಎಸೆಯುವುದು ಭಾಷಣಕ್ಕೆ ಅಡ್ಡಿ ಪಡಿಸುವುದನ್ನ ನಾನು ಖಂಡಿಸುತ್ತೇನೆ. ಹೀಗೆ ನಡೆದುಕೊಂಡರೇ ಅವರಿಗೆ ಮತದಾರರು ಒಲಿಯುವುದಿಲ್ಲ. ಪರಮೇಶ್ವರ್ ಬಾರಿ ಬಹುಮತದಿಂದ ಗೆಲ್ಲಿಸುತ್ತಾರೆ ಎಂದಿದ್ದಾರೆ. ಸದ್ಯ ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದ್ದು, ಕಲ್ಲೇಟಿನಿಂದ ತಲೆಯಲ್ಲಿ ಒಂದೂವರೆ ಇಂಚಿನಷ್ಟು ಆಳ ಗಾಯವಾಗಿದೆ ಎನ್ನಲಾಗಿದೆ. ನ್ಯೂರೋ ಸರ್ಜನ್​ಗಳು ಚಿಕಿತ್ಸೆ ನೀಡಿದ್ದು, ಇಂದು ಸಹ ಮತ್ತೊಮ್ಮೆ ತಪಾಸಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲುತೂರಾಟ

ಇದೇ ತಿಂಗಳ 19 ರಂದು ಡಾ.ಜಿ.ಪರಮೇಶ್ವರ್ ನಾಮಪತ್ರ ಸಲ್ಲಿಸಿದ್ದ ದಿನವೂ, ತಹಶೀಲ್ದಾರ್ ಕಚೇರಿ ಎದುರು ಕಲ್ಲೆಸೆತ ಪ್ರಕರಣ ನಡೆದಿತ್ತು. ಅಂದು ಸಹ ಕಿಡಿಗೇಡಿಯೋರ್ವ ಬೀಸಿದ್ದ ಕಲ್ಲು ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಬಿದ್ದು ಆಕೆಯ ತಲೆಗೆ ಗಾಯವಾಗಿತ್ತು. ಇದೀಗ ಪ್ರಚಾರ ನಿರತ ಪರಮೇಶ್ವರ್ ಮೇಲೆ ಕಲ್ಲು ಬೀಸಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಚುನಾವಣಾ ಹೊಸ್ತಿಲಲ್ಲಿ ಈ ರೀತಿಯ ಕಲ್ಲೆಸೆತ ಪ್ರಕರಣ ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದ್ದು, ಸದ್ಯ ಕೊರಟಗೆರೆ ಪೊಲೀಸರು ತನಿಖೆ ಮುಂದುವರೆಸಿ, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕಿದೆ.

ವರದಿ: ಮಹೇಶ್ ಟಿವಿ9 ತುಮಕೂರು

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ