AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sullia Election 2023 Winner: ಸುಳ್ಳದಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾಗೀರಥಿ ಮುರುಳ್ಯ​

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಟ್​ ನಡೆಯದಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ​ ಭಾರೀ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರು ಆದಿದ್ರಾವಿಡ ಸಮುದಾಯದವರು.

Sullia Election 2023 Winner: ಸುಳ್ಳದಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾಗೀರಥಿ ಮುರುಳ್ಯ​
ಭಾಗೀರಥಿ ಮುರುಳ್ಯ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 5:00 PM

ಸುಳ್ಳ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ (Sullia Assembly Constituency) ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಟ್​ ನಡೆಯದಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ​ ಭಾರೀ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರು ಆದಿದ್ರಾವಿಡ ಸಮುದಾಯದವರು. ಈ ಪ್ರದೇಶದಲ್ಲಿ ಆದಿದ್ರಾವಿಡ ಸಮುದಾಯದವರು ಹೆಚ್ಚು, ಜತೆಗೆ ಇಲ್ಲಿ ಬಿಜೆಪಿಯ ಮೇಲೆ ಹೆಚ್ಚು ಒಲವು ಇತ್ತು. ಈ ಕಾರಣಕ್ಕೆ ಈ ಭಾಗದಲ್ಲಿ ಹಿಂದುಳಿದ ಸಮುದಾಯ ಅಭ್ಯರ್ಥಿಗೆ ಗೆಲುವಾಗಿದೆ. ಈ ಹಿಂದೆ ಮಾಜಿ ಸಚಿವರಾಗಿದ್ದ ಎಸ್​​.ಅಂಗಾರ ಅವರು 6 ಬಾರಿ ಸುಳ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದರು, ಆದರೆ ಈ ಬಾರಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಿಂದ ಅವರು ವಿರುದ್ಧ ಅನೇಕ ವಿರೋಧಗಳು ವ್ಯಕ್ತವಾಗಿತ್ತು. ಆ ಕಾರಣಕ್ಕೆ ಈ ಬಾರಿ ಅವರಿಗೆ ಟಿಕೇಟ್​​ ಕೈತಪ್ಪಿತ್ತು. ಎಸ್​​, ಅಂಗಾರ ಅವರು ಕೂಡ ಬಿಜೆಪಿ ನಾಯಕರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದರು, ನಂತರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಹೇಳಿಕೊಂಡಿದ್ದರು, ಇದೀಗ ಬಿಜೆಪಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ​ ಗೆಲುವು ಸಾಧಿಸಿದ್ದಾರೆ. ಶಿಕ್ಷಕಿಯಾಗಿ, ಟೈಲರಿಂಗ್ ಮತ್ತು ಹೈನುಗಾರಿಕೆ ಉದ್ಯಮವನ್ನು ಮಾಡಿಕೊಂಡಿದ್ದ ಭಾಜಪದ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿದ ಭಾಗೀರಥಿ ಮುರುಳ್ಯಗೆ ಸುಳ್ಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ಇನ್ನೂ ಭಾಗೀರಥಿ ಮುರುಳ್ಯ ಅವರಿಗೆ ಪೈಪೋಟಿ ನೀಡಿದ್ದು, ಕಾಂಗ್ರೆಸ್​​ ಅಭ್ಯರ್ಥಿ ಜಿ.ಕೃಷ್ಣಪ್ಪ, ಇವರು ಭಾಗೀರಥಿ ಮುರುಳ್ಯ ಪ್ರಬಲ ಪೈಪೋಟಿ ಅಲ್ಲ, ಆದರೆ ಜಿ.ಕೃಷ್ಣಪ್ಪ ಅವರ ಬಗ್ಗೆ ಸುಳ್ಯದಲ್ಲಿ ಒಂದು ರೀತಿಯ ಒಲವು ಇತ್ತು. ಆದರೆ ಇಲ್ಲಿ ಅಭ್ಯರ್ಥಿ ಬದಲಾದರೂ ಬಿಜೆಪಿ ಪಕ್ಷಕ್ಕೆ ಹಿಂದಿನ ಬೆಂಬಲವೇ ಇದೆ. ಜಿ.ಕೃಷ್ಣಪ್ಪ ಅವರ ಬಗ್ಗೆ ಸ್ವಪಕ್ಷದ ಕಾರ್ಯಕರ್ತರಲ್ಲೇ ವಿರೋಧ ಇತ್ತು. ಇದೀಗ ಅವರು ಸೋಲು ಅನುಭವಿಸಿದ್ದಾರೆ.

ಇದನ್ನೂ ಓದಿ: Bantwala Election 2023 Winner: ಮಾಜಿ ಸಚಿವನಿಗೆ ಮತ್ತೆ ಸೋಲಿನ ರುಚಿ ತೋರಿಸಿದ ರಾಜೇಶ್​​ ನಾಯಕ್​​

ಇನ್ನೂ ಸುಳ್ಯದಲ್ಲಿ ಜೆಡಿಎಸ್​ ಅಭ್ಯರ್ಥಿ ವೆಂಕಟೇಶ್ ಎಚ್​​.ಎನ್ ಅವರು ಸೋಲು ಅನುಭವಿಸಿದ್ದು. ಬಿಜೆಪಿ ಮತ್ತು ಕಾಂಗ್ರೆಸ್​ ಮತಗಳು ಹಂಚಿ ಹೋಗಬಹುದು. ಇನ್ನೂ ಎಎಪಿಯಿಂದ ಸುಮನ ಅವರು ಸ್ಪರ್ಧಿಸಿದ್ದು. ಇದರ ಜತೆಗೆ ಇತರೇ ಅಭ್ಯರ್ಥಿಗಳು ಪೈಪೋಟಿ ನೀಡಿದ್ದರು.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ