AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಪ್ರಕ್ರಿಯೆ ಬಿರುಸು: ಮೂವರ ಹೆಸರು ಎಐಸಿಸಿ ಚುನಾವಣಾ ಘಟಕಕ್ಕೆ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್​ನಲ್ಲಿ ಟಿಕೆಟ್​​ ಹಂಚಿಕೆ ಪ್ರಕ್ರಿಯೆ ಬಿರುಸುಗೊಂಡಿದ್ದು, ಇಂದು ಮಡಿಕೇರಿಯಲ್ಲಿ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ನಡೆಯಿತು.

ಕೊಡಗಿನಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಪ್ರಕ್ರಿಯೆ ಬಿರುಸು: ಮೂವರ ಹೆಸರು ಎಐಸಿಸಿ ಚುನಾವಣಾ ಘಟಕಕ್ಕೆ
Congress Flag
TV9 Web
| Edited By: |

Updated on: Dec 26, 2022 | 9:32 PM

Share

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ(Kodagu District)  ಈ ಬಾರಿ ಬಿಜೆಪಿ ಭದ್ರಕೋಟೆ ಭೇದಿಸಲು ಪಣತೊಟ್ಟಿರುವ ಕೈಪಾಳಯ ಈಗಾಗಲೇ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್ ಮತ್ತು ಮಾಜಿ ಸಚಿವ ಎಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಇಂದು(ಡಿಸೆಂಬರ್ 16) ಲ್ಲೆಯ ಎರಡು ಕ್ಷೇತ್ರಗಳಾದ ವಿರಾಜಪೇಟೆ ಮತ್ತು ಮಡಿಕೇರಿಯಲ್ಲಿ ಯಾರಿಗೆ ಟಿಕೆಟ್ ನಿಡಬೇಕೆಂಬ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ.

ಕೊಡಗು ಕಾಂಗ್ರೆಸ್ ಉಸ್ತುವಾರಿ ಆಗಿರುವ ಮಹದೇವಪ್ಪ ಮತ್ತು ಆರ್ ಧೃವನಾರಾಯಣ್ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ಬ್ಲಾಕ್ ಸಮಿತಿ ಮುಖಂಡರಿಂದ ಮಾಹಿತಿ ಸಂಗ್ರಹ ಮಾಡಿರುವ ನಾಯಕರು ಸೂಕ್ತ ಅಭ್ಯರ್ಥಿಗಳಿಗಾಗಿ ಕಸರತ್ತು ನಡೆಸಿದ್ದಾರೆ.

ಇದನ್ನೂ ಓದಿ: ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ಗಂಗಾವತಿ ಟಿಕೆಟ್‌ಗಾಗಿ ಕೂಗಾಟ…ಚೀರಾಟ: ಕಾಂಗ್ರೆಸ್ ನಾಯಕರು ಕಂಗಾಲು

ಮಡಿಕೇರಿ ಕ್ಷೇತ್ರದಿಂದ 7 ಆಕಾಂಕ್ಷಿಗಳು ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದರೆ, ವಿರಾಜಪೇಟೆ ಕ್ಷೇತ್ರದಿಂದ 3 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅಕಾಂಕ್ಷಿಗಳಾದ ಎಎಸ್. ಪೊನ್ನಣ್ಣ, ವೀಣಾ ಅಚ್ಚಯ್ಯ, ಜೀವಿಜಯ, ಮಂಥರ್ ಗೌಡ ಸೇರಿದಂತೆ ಪ್ರಮುಖರು ಸಭೆಯಲ್ಲಿ‌ಪಾಲ್ಗೊಂಡು ಅಭಿಪ್ರಾಯ ಮಂಡಿಸಿದ್ದಾರೆ.

ಪಕ್ಷಕ್ಕಾಗಿ ದುಡಿದಿರುವ, ಗೆಲ್ಲುವ ಅವಕಾಶ ಇರುವ ಮೂವರ ಹೆಸರು ಫೈನಲ್ ಮಾಡಲು ಅಭಿಪ್ರಾಯ ಸಂಗ್ರಹ ಮಾಡಲಾಗಿದೆ ಎನ್ನಲಾಗಿದೆ. ಪ್ರತೀ ಕ್ಷೇತ್ರದಿಂದ ಮೂವರ ಹೆಸರು ಫೈನಲ್ ಮಾಡಲಾಗುವುದು ಮತ್ತು ಆ ಮೂವರ ಹೆಸರನ್ನು ಎಐಸಿಸಿ ಚುನಾವಣಾ ಘಟಕಕ್ಕೆ ಕಳುಹಿಸಿಕೊಡಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ ಲಕ್ಷ್ಮಣ್ ತಿಳಿಸಿದ್ದಾರೆ.

ಇನ್ನು ಇಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆಗಾಗಿ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹ ಕಾರ್ಯ ನಡೆಯಿತು. ಸಭೆಯಲ್ಲಿ ಗಾಂಗಾವತಿ ಟಿಕೆಟ್​​ ಆಕಾಂಕ್ಷಿಗಳ ಬೆಂಬಲಿಗರು ಪರಸ್ಪರ ಘೋಷಣೆಗಳನ್ನು ಕೂಗುತ್ತ ಹೈಡ್ರಾಮಾವೇ ಸೃಷ್ಟಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​