AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thirthahalli Election 2023 Winner: ಸಹ್ಯಾದ್ರಿ ತಪ್ಪಲು ತೀರ್ಥಹಳ್ಳಿಯಲ್ಲಿ ಬದ್ಧ ವೈರಿಗಳ ಹಣಾಹಣಿಯಲ್ಲಿ ಆರಗ ಜ್ಞಾನೇಂದ್ರಗೆ ಗೆಲುವು

Araga Jnanendra: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ(Araga Jnanendra) ಗೆಲುವು ಸಾಧಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ

Thirthahalli Election 2023 Winner: ಸಹ್ಯಾದ್ರಿ ತಪ್ಪಲು ತೀರ್ಥಹಳ್ಳಿಯಲ್ಲಿ ಬದ್ಧ ವೈರಿಗಳ ಹಣಾಹಣಿಯಲ್ಲಿ ಆರಗ ಜ್ಞಾನೇಂದ್ರಗೆ ಗೆಲುವು
ಆರಗ ಜ್ಞಾನೇಂದ್ರ
ನಯನಾ ರಾಜೀವ್
|

Updated on: May 13, 2023 | 1:00 PM

Share

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ(Araga Jnanendra) ಗೆಲುವು ಸಾಧಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದರು.

2018ರಲ್ಲಿ ಸುಮಾರು 22 ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು. 2013 ಹಾಗೂ 2008ರಲ್ಲಿ ಕಿಮ್ಮನೆ 2 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಇನ್ನು 1999ರಲ್ಲಿ 4 ಸಾವಿರ ಹಾಗೂ 2004ರಲ್ಲಿ ಒಂದೂವರೆ ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು.

ಕೃಷಿಭೂಮಿ ಹೋರಾಟಗಳಿಂದ ಹೆಸರುವಾಸಿಯಾಗಿರುವ ಸಹ್ಯಾದ್ರಿ ಬೆಟ್ಟಗಳ ತಪ್ಪಲು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಸಾಕಷ್ಟು ಪ್ರತಿಷ್ಠಿತವಾಗಿದೆ.

ಹೋರಾಟದ ಹಿನ್ನೆಲೆಯಿಂದ ಬಂದಿದ್ದ ಜಿಜಿ ಶಾಂತವೇರಿ ಗೌಡ, ಎಸ್​ ಗೋಪಾಲಗೌಡ, ಡಿವಿ ಚಂದ್ರೇಗೌಡ ಕೂಡ ತೀರ್ಥಹಳ್ಳಿಯ ಶಾಸಕರಾಗಿದ್ದಿದ್ದು ವಿಶೇಷವಾಗಿದೆ.

ಈ ಬಾರಿ ಕಣದಲ್ಲಿ ಆರಗ ಜ್ಞಾನೇಂದ್ರ ಹಾಗೂ ಕಿಮ್ಮನೆ ರತ್ನಾಕರ ಜತೆಗೆ ಎಎಪಿಯಿಂದ ಶಿವಕುಮಾರ್, ಜೆಡಿಎಸ್​ನಿಂದ ರಾಜಾರಾಮ್ ಕಣದಲ್ಲಿದ್ದಾರೆ. ಕಳೆದ ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿ 40 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಮಂಜುನಾಥ ಗೌಡ ಈ ಬಾರಿ ಕಾಂಗ್ರೆಸ್ ಸೇರಿದ್ದಾರೆ.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು