AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thirthahalli Election 2023 Winner: ಸಹ್ಯಾದ್ರಿ ತಪ್ಪಲು ತೀರ್ಥಹಳ್ಳಿಯಲ್ಲಿ ಬದ್ಧ ವೈರಿಗಳ ಹಣಾಹಣಿಯಲ್ಲಿ ಆರಗ ಜ್ಞಾನೇಂದ್ರಗೆ ಗೆಲುವು

Araga Jnanendra: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ(Araga Jnanendra) ಗೆಲುವು ಸಾಧಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ

Thirthahalli Election 2023 Winner: ಸಹ್ಯಾದ್ರಿ ತಪ್ಪಲು ತೀರ್ಥಹಳ್ಳಿಯಲ್ಲಿ ಬದ್ಧ ವೈರಿಗಳ ಹಣಾಹಣಿಯಲ್ಲಿ ಆರಗ ಜ್ಞಾನೇಂದ್ರಗೆ ಗೆಲುವು
ಆರಗ ಜ್ಞಾನೇಂದ್ರ
ನಯನಾ ರಾಜೀವ್
|

Updated on: May 13, 2023 | 1:00 PM

Share

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ(Araga Jnanendra) ಗೆಲುವು ಸಾಧಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದರು.

2018ರಲ್ಲಿ ಸುಮಾರು 22 ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು. 2013 ಹಾಗೂ 2008ರಲ್ಲಿ ಕಿಮ್ಮನೆ 2 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಇನ್ನು 1999ರಲ್ಲಿ 4 ಸಾವಿರ ಹಾಗೂ 2004ರಲ್ಲಿ ಒಂದೂವರೆ ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು.

ಕೃಷಿಭೂಮಿ ಹೋರಾಟಗಳಿಂದ ಹೆಸರುವಾಸಿಯಾಗಿರುವ ಸಹ್ಯಾದ್ರಿ ಬೆಟ್ಟಗಳ ತಪ್ಪಲು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಸಾಕಷ್ಟು ಪ್ರತಿಷ್ಠಿತವಾಗಿದೆ.

ಹೋರಾಟದ ಹಿನ್ನೆಲೆಯಿಂದ ಬಂದಿದ್ದ ಜಿಜಿ ಶಾಂತವೇರಿ ಗೌಡ, ಎಸ್​ ಗೋಪಾಲಗೌಡ, ಡಿವಿ ಚಂದ್ರೇಗೌಡ ಕೂಡ ತೀರ್ಥಹಳ್ಳಿಯ ಶಾಸಕರಾಗಿದ್ದಿದ್ದು ವಿಶೇಷವಾಗಿದೆ.

ಈ ಬಾರಿ ಕಣದಲ್ಲಿ ಆರಗ ಜ್ಞಾನೇಂದ್ರ ಹಾಗೂ ಕಿಮ್ಮನೆ ರತ್ನಾಕರ ಜತೆಗೆ ಎಎಪಿಯಿಂದ ಶಿವಕುಮಾರ್, ಜೆಡಿಎಸ್​ನಿಂದ ರಾಜಾರಾಮ್ ಕಣದಲ್ಲಿದ್ದಾರೆ. ಕಳೆದ ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿ 40 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಮಂಜುನಾಥ ಗೌಡ ಈ ಬಾರಿ ಕಾಂಗ್ರೆಸ್ ಸೇರಿದ್ದಾರೆ.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು