Thirthahalli Election 2023 Winner: ಸಹ್ಯಾದ್ರಿ ತಪ್ಪಲು ತೀರ್ಥಹಳ್ಳಿಯಲ್ಲಿ ಬದ್ಧ ವೈರಿಗಳ ಹಣಾಹಣಿಯಲ್ಲಿ ಆರಗ ಜ್ಞಾನೇಂದ್ರಗೆ ಗೆಲುವು
Araga Jnanendra: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ(Araga Jnanendra) ಗೆಲುವು ಸಾಧಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ(Araga Jnanendra) ಗೆಲುವು ಸಾಧಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದರು.
2018ರಲ್ಲಿ ಸುಮಾರು 22 ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು. 2013 ಹಾಗೂ 2008ರಲ್ಲಿ ಕಿಮ್ಮನೆ 2 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಇನ್ನು 1999ರಲ್ಲಿ 4 ಸಾವಿರ ಹಾಗೂ 2004ರಲ್ಲಿ ಒಂದೂವರೆ ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು.
ಕೃಷಿಭೂಮಿ ಹೋರಾಟಗಳಿಂದ ಹೆಸರುವಾಸಿಯಾಗಿರುವ ಸಹ್ಯಾದ್ರಿ ಬೆಟ್ಟಗಳ ತಪ್ಪಲು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಸಾಕಷ್ಟು ಪ್ರತಿಷ್ಠಿತವಾಗಿದೆ.
ಹೋರಾಟದ ಹಿನ್ನೆಲೆಯಿಂದ ಬಂದಿದ್ದ ಜಿಜಿ ಶಾಂತವೇರಿ ಗೌಡ, ಎಸ್ ಗೋಪಾಲಗೌಡ, ಡಿವಿ ಚಂದ್ರೇಗೌಡ ಕೂಡ ತೀರ್ಥಹಳ್ಳಿಯ ಶಾಸಕರಾಗಿದ್ದಿದ್ದು ವಿಶೇಷವಾಗಿದೆ.
ಈ ಬಾರಿ ಕಣದಲ್ಲಿ ಆರಗ ಜ್ಞಾನೇಂದ್ರ ಹಾಗೂ ಕಿಮ್ಮನೆ ರತ್ನಾಕರ ಜತೆಗೆ ಎಎಪಿಯಿಂದ ಶಿವಕುಮಾರ್, ಜೆಡಿಎಸ್ನಿಂದ ರಾಜಾರಾಮ್ ಕಣದಲ್ಲಿದ್ದಾರೆ. ಕಳೆದ ಬಾರಿ ಜೆಡಿಎಸ್ನಿಂದ ಸ್ಪರ್ಧಿಸಿ 40 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಮಂಜುನಾಥ ಗೌಡ ಈ ಬಾರಿ ಕಾಂಗ್ರೆಸ್ ಸೇರಿದ್ದಾರೆ.
ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




