AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ಬಿಜೆಪಿಗೆ ರಾಜೀನಾಮೆ ನೀಡುತ್ತೆನೆಂದ ಸೊಗಡು ಶಿವಣ್ಣ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ತುಮಕೂರು ನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಟಿಕೆಟ್ ಸಿಗದೆ ನಿರಾಶರಾಗಿರುವ ಸೊಗಡು ಶಿವಣ್ಣ ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದಾರೆ.

Ganapathi Sharma
|

Updated on:Apr 12, 2023 | 7:17 PM

Share

ತುಮಕೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ತುಮಕೂರು ನಗರ (Tumkur) ಬಿಜೆಪಿಯಲ್ಲಿ (BJP) ಭಿನ್ನಮತ ಸ್ಫೋಟಗೊಂಡಿದೆ. ಟಿಕೆಟ್ ಸಿಗದೆ ನಿರಾಶರಾಗಿರುವ ಸೊಗಡು ಶಿವಣ್ಣ ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದಾರೆ. ಇದರೊಂದಿಗೆ ಬಿಜೆಪಿಗೆ ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗತೊಡಗಿದೆ. ತುಮಕೂರಿನ ಮಾಕಂ ಕಲ್ಯಾಣ ಮಂಟಪದಲ್ಲಿ ಬುಧವಾರ ಬೆಂಬಲಿಗರ ಜತೆ ಸಭೆ ನಡೆಸಿರುವ ಶಿವಣ್ಣ, ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಬಳಿಕ ಮಾತನಾಡಿ, ನಾನು ಉಸಿರು ಇರೋವರೆಗೂ ನಿಮ್ಮ ಸೇವಕನಾಗಿರುತ್ತೇನೆ. ನಾನು ಟಿಕೆಟ್ ಕೊಡಿ ಎಂದು ಮನವಿ ಮಾಡಿದೆ. ಆದರೆ, ಅದಕ್ಕೆ ಬೆಲೆ ನೀಡಲಿಲ್ಲ. ಮುಂದೆ ಏನು ಮಾಡಲಿ ಎಂಬುದನ್ನು ನೀವೇ ತಿಳಿಸಿ ಎಂದು ಬೆಂಬಲಿಗರ ಬಳಿ ವಿನಂತಿಸಿದರು.

ಶಿವಣ್ಣ ಅಭಿಪ್ರಾಯ ಕೇಳುತ್ತಿದ್ದಂತೆಯೇ ಪ್ರತಿಕ್ರಿಯಿಸಿದ ಬೆಂಬಲಿಗರು, ಚುನಾವಣೆಗೆ ಸ್ಪರ್ಧೆ ಮಾಡಲೇಬೇಕು ಎಂದು ಆಗ್ರಹಿಸಿದರು.

ನನ್ನ ಮನೆಯೊಳಗೆ ಬಾವುಟಗಳಿವೆ. ಅವುಗಳನ್ನು ಮೊದಲು ಅದನ್ನ ಬೇರೆಡೆಗೆ ವರ್ಗಾವಣೆ ಮಾಡುತ್ತೇನೆ. ಆ ಬಳಿಕ ಮಾಧ್ಯಮಗಳನ್ನು ಕರೆಸಿ ರಾಜೀನಾಮೆ ನಿರ್ಧಾರ ಅಧಿಕೃತವಾಗಿ ಪ್ರಕಟಿಸುತ್ತೇನೆ ಎಂದು ಸೊಗಡು ಶಿವಣ್ಣ ಹೇಳಿದರು.

ಇದನ್ನೂ ಓದಿ: R Shankar: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ

ನಾಮಪತ್ರ ಸಲ್ಲಿಸಲು ದಿನಾಂಕ ತಿಳಿಸುತ್ತೇನೆ ಎಂದ ಅವರು, ಪರೋಕ್ಷವಾಗಿ ಜ್ಯೋತಿ ಗಣೇಶ್ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿಜೆಪಿ ಟಿಕೆಟ್ ದೊರೆಯದ ಬಗ್ಗೆ ಅಸಮಾಧಾನಗೊಂಡಿರುವ ಆರ್. ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಲಕ್ಷ್ಮಣ ಸವದಿ ಕೂಡ ಘೋಷಿಸಿದ್ದಾರೆ.

400ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಂದ ರಾಜೀನಾಮೆ

ಮಾಜಿ ಸಚಿವ ಸೊಗಡು ಶಿವಣ್ಣ ಬೆಂಬಲಿಸಿ 400ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಸೊಗಡು ಶಿವಣ್ಣಗೆ ತುಮಕೂರು ನಗರ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:54 pm, Wed, 12 April 23

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ