AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಫ್‌ಐ, ಎಸ್‌ಡಿಪಿಐ ಮೆಚ್ಚಿಸಲು ಬಜರಂಗದಳ ನಿಷೇಧಿಸಲು ಹೊರಟ ಕಾಂಗ್ರೆಸ್; ಉಡುಪಿಯಲ್ಲಿ ಅನಿಲ್ ಆ್ಯಂಟನಿ

ಪಿಎಫ್‌ಐ ಮತ್ತು ಎಸ್‌ಡಿಪಿಐ ಮೆಚ್ಚಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವು ಬಜರಂಗದಳ ನಿಷೇಧಿಸಲು ಹೊರಟಿದೆ ಎಂದು ಕೇರಳ ಬಿಜೆಪಿ ನಾಯಕ ಅನಿಲ್ ಆ್ಯಂಟನಿ ಟೀಕಿಸಿದರು.

ಪಿಎಫ್‌ಐ, ಎಸ್‌ಡಿಪಿಐ ಮೆಚ್ಚಿಸಲು ಬಜರಂಗದಳ ನಿಷೇಧಿಸಲು ಹೊರಟ ಕಾಂಗ್ರೆಸ್; ಉಡುಪಿಯಲ್ಲಿ ಅನಿಲ್ ಆ್ಯಂಟನಿ
ಉಡುಪಿಯಲ್ಲಿ ಅನಿಲ್ ಆ್ಯಂಟನಿ
ಗಣಪತಿ ಶರ್ಮಾ
|

Updated on:May 05, 2023 | 7:20 PM

Share

ಉಡುಪಿ: ಪಿಎಫ್‌ಐ ಮತ್ತು ಎಸ್‌ಡಿಪಿಐ ಮೆಚ್ಚಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವು ಬಜರಂಗದಳ ನಿಷೇಧಿಸಲು ಹೊರಟಿದೆ ಎಂದು ಕೇರಳ ಬಿಜೆಪಿ (BJP) ನಾಯಕ ಅನಿಲ್ ಆ್ಯಂಟನಿ (Anil Antony) ಟೀಕಿಸಿದರು. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಅನಿಲ್ ಆ್ಯಂಟನಿ ಶುಕ್ರವಾರ ಉಡುಪಿಗೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಅಗವಹಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮತ್ತು ಕೋಮುವಾದ ಹೆಚ್ಚಾಗಲಿದೆ. ಹಿಗಾಗಿ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.

ಕರ್ನಾಟಕ ಚುನಾವಣೆಯು ಅಭಿವೃದ್ಧಿ ದೃಷ್ಟಿಯಿಂದ ಅತೀ ಮಹತ್ವ ಪಡೆದಿದೆ. ಕಾಂಗ್ರೆಸ್‌ನದ್ದು ರಿವರ್ಸ್‌ಗೇರ್ ಸರ್ಕಾರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದ ಎಟಿಎಂ ರೀತಿ ಬಳಕೆಯಾಗುವ ಸಾಧ್ಯತೆ ಇದೆ. ಡಬಲ್ ಇಂಜಿನ್ ಸರ್ಕಾರದ ಮಹತ್ವ ಜನರಿಗೆ ಅರಿವಾಗಿದೆ ಎಂದು ಅವರು ಹೇಳಿದರು.

‘ಕೇರಳ ಸ್ಟೋರಿ’ ಸಿನಿಮಾ ವಿವಾದ ವಿಚಾರ ಪ್ರಸ್ತಾಪಿಸಿದ ಅವರು, ಕೇರಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂ ನಾಯಕರ ಬಣ್ಣ ಬಯಲಾಗಿದೆ. ಸತ್ಯ ಘಟನೆ ಆಧರಿಸಿದ ಚಿತ್ರ ಪ್ರದರ್ಶನವನ್ನು ನಿಷೇಧಿಸಲು ಮುಂದಾಗಿದ್ದಾರೆ. ರಾಜಕೀಯ ಷಡ್ಯಂತ್ರಕ್ಕಾಗಿ ಧಾರ್ಮಿಕ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂಬುದು ಬಿಜೆಪಿ ನಿಲುವು ಎಂದು ಅವರು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಕರ್ನಾಟಕದ ಜನರನ್ನು ಲೂಟಿ ಮಾಡಿವೆ: ತುಮಕೂರಿನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕೊನೆಯ ಹಂತದಲ್ಲಿ ಪ್ರಚಾರಕ್ಕಾಗಿ ಕರ್ನಾಟಕ ತಲುಪಿದೆ. ಉಡುಪಿಯ ಬೈಂದೂರಿನ ಬಳಿ ಇರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನನ್ನ ಪ್ರಾರ್ಥನೆಯನ್ನು ಸಲ್ಲಿಸುತ್ತಾ ದಿನವನ್ನು ಪ್ರಾರಂಭಿಸಿದೆ. ಜೊತೆಯಲ್ಲಿ ಪಕ್ಷದ ಪಾಲಕ್ಕಾಡ್ ವಲಯದ ಉಸ್ತುವಾರಿ ಉನ್ನಿಕೃಷ್ಣನ್ ಮಾಸ್ಟರ್, ಕೇರಳ ಬಿಜೆಪಿ ಕಾರ್ಯದರ್ಶಿ ಸುರೇಶ ಮತ್ತು ಕೇರಳ ಬಿಜೆಪಿ ನಾಯಕ ಶ್ರೀಕುಮಾರ್ ಜಿ. ಇದ್ದಾರೆ ಎಂದು ಅನಿಲ್ ಆ್ಯಂಟನಿ ಟ್ವೀಟ್ ಮಾಡಿದ್ದಾರೆ.

ಅನಿಲ್ ಆ್ಯಂಟನಿ ಅವರು ಕಾಂಗ್ರೆಸ್​​ನ ಹಿರಿಯ ನಾಯಕ ಎಕೆ ಆ್ಯಂಟನಿ ಪುತ್ರ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Fri, 5 May 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್