Turuvekere Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಸಾಲ ಜಯರಾಮ್ ಅವರು ಕಣದಲ್ಲಿದ್ದರೆ, ಕಾಂಗ್ರೆಸ್ನಿಂದ ಕಾಂತರಾಜ್ ಬಿಎಂ, ಜೆಡಿಎಸ್ನಿಂದ ಎಂಟಿ ಕೃಷ್ಣಪ್ಪ ಅವರು ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲೂ ಆಮ್ ಆದ್ಮಿ ಪಕ್ಷ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಕಣದಲ್ಲಿದ್ದಾರೆ.
1999ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಜೆಪಿಯ ಎಂಡಿ ಲಕ್ಷ್ಮೀನಾರಾಯಣ (ಅಣ್ಣಯ್ಯ) ಅವರು 2004ರಲ್ಲಿ ನಡೆದ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಆಯ್ಕೆಯಾಗಿದ್ದರು. 2008ರ ಚುನಾವಣೆಯಲ್ಲಿ ಇವರನ್ನು ಜೆಡಿಎಸ್ನ ಕೃಷ್ಣಪ್ಪ ಅವರು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2008ರ ಚುನಾವಣೆಯಲ್ಲಿ ಬಿಜೆಪಿಯ ಲಕ್ಷ್ಮೀನಾರಾಯಣ ಅವರು ಮತ್ತೊಮ್ಮೆ ಸೋತರು. ಈ ಚುನಾವಣೆಯಲ್ಲಿ ಕಾಂಗ್ರೆಸ್ನ ಜಗ್ಗೇಶ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
2013 ರ ಚುನಾವಣೆಯ ನಂತರ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹಾವು ಏಟಿ ಆಟ ನಡೆಯುತ್ತಿದೆ. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಸಾಲ ಜಯರಾಮ್ ಅವರು ಸೋಲು ಅನುಭವಿಸಿದ್ದರೆ, ಜೆಡಿಎಸ್ನ ಕೃಷ್ಣಪ್ಪ ಅವರು ಜಯಶಾಲಿಯಾಗಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಸಾಲ ಜಯರಾಮ್ ಅವರು ಶಾಸಕರಾಗಿ ಆಯ್ಕೆಯಾದರೆ ಕೃಷ್ಣಪ್ಪ ಅವರು ಸೋಲು ಅನುಭವಿಸಿದ್ದರು. 2023ರ ಚುನಾವಣೆಯಲ್ಲೂ ಈ ಇಬ್ಬರು ನಾಯಕರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.