AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್

ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ ಎನ್ನುವ ಮೂಲಕ ಹೆಚ್​ಡಿ ರೇವಣ್ಣ ಟಾಂಗ್​ ಕೊಟ್ಟಿದ್ದಾರೆ.

ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್
ಹೆಚ್​.ಡಿ ರೇವಣ್ಣ
ಕಿರಣ್ ಹನುಮಂತ್​ ಮಾದಾರ್
|

Updated on: Apr 24, 2023 | 9:05 AM

Share

ಹಾಸನ:ವಿಧಾನಸಭೆ ಚುನಾವಣಾ(Karnataka Assembly Election) ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ. ಜನರ ಆಶೀರ್ವಾದ ಇರುವವರೆಗೂ ನಮಗೇನು ತೊಂದರೆ ಇಲ್ಲ ಎನ್ನುವ ಮೂಲಕ ಮಾಜಿ ಸಚಿವ H.D.ರೇವಣ್ಣ(H.D Revanna) ಟಾಂಗ್ ಕೊಟ್ಟಿದ್ದಾರೆ.

ಜಿಲ್ಲೆಯ ಬೇಲೂರಿನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ H.D.ರೇವಣ್ಣ ‘ಜನ ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತವನ್ನು ನೋಡಿದ್ದಾರೆ. ರಾಷ್ಟ್ರೀಯ ಪಕ್ಷಗಳನ್ನು ಸ್ವಲ್ಪ ದಿನ ರೆಸ್ಟ್​​ಗೆ ಕಳಿಸಲು ತೀರ್ಮಾನಿಸಿದ್ದಾರೆ. ನಮಗೆ ಜನ ಉಳಿಯಬೇಕು, ರಾಜ್ಯ ಉಳಿಯಬೇಕು ಎಂದರು. ನಾವು 123 ಟಾರ್ಗೆಟ್ ಇಟ್ಟಿದ್ದೀವಿ, ಒಂದು ಭಾರಿ ಬಹುಮತ ಕೊಡಿ. ದೇವೇಗೌಡರು ಸಾಮಾನ್ಯ ರೈತನ ಮಗ, ಕುಮಾರಣ್ಣನ ಶಿಕ್ಷಣ, ಆರೋಗ್ಯ ಕ್ಷೇತ್ರ, ಗ್ರಾಮಗಳ ಅಭಿವೃದ್ಧಿ ಸೇರಿ ಐದು ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ ಎಂದರು.

ಇದನ್ನೂ ಓದಿ:Karnataka Legislative Council: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಭರಾಟೆಯಲ್ಲಿ ಖಾಲಿಯಾಗುತ್ತಿದೆ ಕರ್ನಾಟಕದ ಮೇಲ್ಮನೆ!

ಹಾಸನದಲ್ಲಿ ದಿವಂಗತ ಎಚ್.ಎಸ್.ಪ್ರಕಾಶ್ ಅವರ ಮಗ ಸ್ವರೂಪ್​ನನ್ನ ನಿಲ್ಲಿಸಿದ್ದೇವೆ. ಭವಾನಿ ಅವರೇ ಕೈ ಎತ್ತಿ ಹೇಳಿದ್ದಾರಲ್ಲ, ಇನ್ನೇನು ಬೇಕು. ನಮಗೆ ಬೇಕಿರುವುದು ಪಕ್ಷ, ಜನ ಉಳಿಯಬೇಕು, ರಾಜ್ಯ ಉಳಿಯಬೇಕು. ಇದೇ ವೇಳೆ ಪ್ರೀತಂಗೌಡ ಸೈಲೆಂಟ್ ಆಗಿರುವ ವಿಚಾರ ‘ಅವರು ದೊಡ್ಡವರಿದ್ದಾರೆ, ಅವರ ಬಗ್ಗೆ ನನಗೆ ಮಾತನಾಡುವ ಶಕ್ತಿ ಇಲ್ಲ. ಅವರು ದೊಡ್ಡವರಿರುವಾಗ ಆ ಲೆವೆಲ್‌ಗೆ ನಾವು ಬೆಳೆದಿಲ್ಲ ಎಂದು ಪರೋಕ್ಷವಾಗಿ ಟೀಕೆ ಮಾಡಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ