Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್

ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ ಎನ್ನುವ ಮೂಲಕ ಹೆಚ್​ಡಿ ರೇವಣ್ಣ ಟಾಂಗ್​ ಕೊಟ್ಟಿದ್ದಾರೆ.

ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್
ಹೆಚ್​.ಡಿ ರೇವಣ್ಣ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 24, 2023 | 9:05 AM

ಹಾಸನ:ವಿಧಾನಸಭೆ ಚುನಾವಣಾ(Karnataka Assembly Election) ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ. ಜನರ ಆಶೀರ್ವಾದ ಇರುವವರೆಗೂ ನಮಗೇನು ತೊಂದರೆ ಇಲ್ಲ ಎನ್ನುವ ಮೂಲಕ ಮಾಜಿ ಸಚಿವ H.D.ರೇವಣ್ಣ(H.D Revanna) ಟಾಂಗ್ ಕೊಟ್ಟಿದ್ದಾರೆ.

ಜಿಲ್ಲೆಯ ಬೇಲೂರಿನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ H.D.ರೇವಣ್ಣ ‘ಜನ ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತವನ್ನು ನೋಡಿದ್ದಾರೆ. ರಾಷ್ಟ್ರೀಯ ಪಕ್ಷಗಳನ್ನು ಸ್ವಲ್ಪ ದಿನ ರೆಸ್ಟ್​​ಗೆ ಕಳಿಸಲು ತೀರ್ಮಾನಿಸಿದ್ದಾರೆ. ನಮಗೆ ಜನ ಉಳಿಯಬೇಕು, ರಾಜ್ಯ ಉಳಿಯಬೇಕು ಎಂದರು. ನಾವು 123 ಟಾರ್ಗೆಟ್ ಇಟ್ಟಿದ್ದೀವಿ, ಒಂದು ಭಾರಿ ಬಹುಮತ ಕೊಡಿ. ದೇವೇಗೌಡರು ಸಾಮಾನ್ಯ ರೈತನ ಮಗ, ಕುಮಾರಣ್ಣನ ಶಿಕ್ಷಣ, ಆರೋಗ್ಯ ಕ್ಷೇತ್ರ, ಗ್ರಾಮಗಳ ಅಭಿವೃದ್ಧಿ ಸೇರಿ ಐದು ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ ಎಂದರು.

ಇದನ್ನೂ ಓದಿ:Karnataka Legislative Council: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಭರಾಟೆಯಲ್ಲಿ ಖಾಲಿಯಾಗುತ್ತಿದೆ ಕರ್ನಾಟಕದ ಮೇಲ್ಮನೆ!

ಹಾಸನದಲ್ಲಿ ದಿವಂಗತ ಎಚ್.ಎಸ್.ಪ್ರಕಾಶ್ ಅವರ ಮಗ ಸ್ವರೂಪ್​ನನ್ನ ನಿಲ್ಲಿಸಿದ್ದೇವೆ. ಭವಾನಿ ಅವರೇ ಕೈ ಎತ್ತಿ ಹೇಳಿದ್ದಾರಲ್ಲ, ಇನ್ನೇನು ಬೇಕು. ನಮಗೆ ಬೇಕಿರುವುದು ಪಕ್ಷ, ಜನ ಉಳಿಯಬೇಕು, ರಾಜ್ಯ ಉಳಿಯಬೇಕು. ಇದೇ ವೇಳೆ ಪ್ರೀತಂಗೌಡ ಸೈಲೆಂಟ್ ಆಗಿರುವ ವಿಚಾರ ‘ಅವರು ದೊಡ್ಡವರಿದ್ದಾರೆ, ಅವರ ಬಗ್ಗೆ ನನಗೆ ಮಾತನಾಡುವ ಶಕ್ತಿ ಇಲ್ಲ. ಅವರು ದೊಡ್ಡವರಿರುವಾಗ ಆ ಲೆವೆಲ್‌ಗೆ ನಾವು ಬೆಳೆದಿಲ್ಲ ಎಂದು ಪರೋಕ್ಷವಾಗಿ ಟೀಕೆ ಮಾಡಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್