AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್

ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ ಎನ್ನುವ ಮೂಲಕ ಹೆಚ್​ಡಿ ರೇವಣ್ಣ ಟಾಂಗ್​ ಕೊಟ್ಟಿದ್ದಾರೆ.

ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್
ಹೆಚ್​.ಡಿ ರೇವಣ್ಣ
ಕಿರಣ್ ಹನುಮಂತ್​ ಮಾದಾರ್
|

Updated on: Apr 24, 2023 | 9:05 AM

Share

ಹಾಸನ:ವಿಧಾನಸಭೆ ಚುನಾವಣಾ(Karnataka Assembly Election) ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ. ಜನರ ಆಶೀರ್ವಾದ ಇರುವವರೆಗೂ ನಮಗೇನು ತೊಂದರೆ ಇಲ್ಲ ಎನ್ನುವ ಮೂಲಕ ಮಾಜಿ ಸಚಿವ H.D.ರೇವಣ್ಣ(H.D Revanna) ಟಾಂಗ್ ಕೊಟ್ಟಿದ್ದಾರೆ.

ಜಿಲ್ಲೆಯ ಬೇಲೂರಿನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ H.D.ರೇವಣ್ಣ ‘ಜನ ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತವನ್ನು ನೋಡಿದ್ದಾರೆ. ರಾಷ್ಟ್ರೀಯ ಪಕ್ಷಗಳನ್ನು ಸ್ವಲ್ಪ ದಿನ ರೆಸ್ಟ್​​ಗೆ ಕಳಿಸಲು ತೀರ್ಮಾನಿಸಿದ್ದಾರೆ. ನಮಗೆ ಜನ ಉಳಿಯಬೇಕು, ರಾಜ್ಯ ಉಳಿಯಬೇಕು ಎಂದರು. ನಾವು 123 ಟಾರ್ಗೆಟ್ ಇಟ್ಟಿದ್ದೀವಿ, ಒಂದು ಭಾರಿ ಬಹುಮತ ಕೊಡಿ. ದೇವೇಗೌಡರು ಸಾಮಾನ್ಯ ರೈತನ ಮಗ, ಕುಮಾರಣ್ಣನ ಶಿಕ್ಷಣ, ಆರೋಗ್ಯ ಕ್ಷೇತ್ರ, ಗ್ರಾಮಗಳ ಅಭಿವೃದ್ಧಿ ಸೇರಿ ಐದು ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ ಎಂದರು.

ಇದನ್ನೂ ಓದಿ:Karnataka Legislative Council: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಭರಾಟೆಯಲ್ಲಿ ಖಾಲಿಯಾಗುತ್ತಿದೆ ಕರ್ನಾಟಕದ ಮೇಲ್ಮನೆ!

ಹಾಸನದಲ್ಲಿ ದಿವಂಗತ ಎಚ್.ಎಸ್.ಪ್ರಕಾಶ್ ಅವರ ಮಗ ಸ್ವರೂಪ್​ನನ್ನ ನಿಲ್ಲಿಸಿದ್ದೇವೆ. ಭವಾನಿ ಅವರೇ ಕೈ ಎತ್ತಿ ಹೇಳಿದ್ದಾರಲ್ಲ, ಇನ್ನೇನು ಬೇಕು. ನಮಗೆ ಬೇಕಿರುವುದು ಪಕ್ಷ, ಜನ ಉಳಿಯಬೇಕು, ರಾಜ್ಯ ಉಳಿಯಬೇಕು. ಇದೇ ವೇಳೆ ಪ್ರೀತಂಗೌಡ ಸೈಲೆಂಟ್ ಆಗಿರುವ ವಿಚಾರ ‘ಅವರು ದೊಡ್ಡವರಿದ್ದಾರೆ, ಅವರ ಬಗ್ಗೆ ನನಗೆ ಮಾತನಾಡುವ ಶಕ್ತಿ ಇಲ್ಲ. ಅವರು ದೊಡ್ಡವರಿರುವಾಗ ಆ ಲೆವೆಲ್‌ಗೆ ನಾವು ಬೆಳೆದಿಲ್ಲ ಎಂದು ಪರೋಕ್ಷವಾಗಿ ಟೀಕೆ ಮಾಡಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು