ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್

|

Updated on: Apr 24, 2023 | 9:05 AM

ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ ಎನ್ನುವ ಮೂಲಕ ಹೆಚ್​ಡಿ ರೇವಣ್ಣ ಟಾಂಗ್​ ಕೊಟ್ಟಿದ್ದಾರೆ.

ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ; ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ ಎಂದು H.D.ರೇವಣ್ಣ ಟಾಂಗ್
ಹೆಚ್​.ಡಿ ರೇವಣ್ಣ
Follow us on

ಹಾಸನ:ವಿಧಾನಸಭೆ ಚುನಾವಣಾ(Karnataka Assembly Election) ಕಣ ರಂಗೇರಿದ್ದು, ಅದರಂತೆ ಇಂದು(ಏ.24) ಮಧ್ಯಾಹ್ನ 2.25ಕ್ಕೆ ಜಿಲ್ಲೆಯ ಆಲೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರೋಡ್​ ಶೋ ನಡೆಸಲಿದ್ದಾರೆ. ಈ ವಿಚಾರವಾಗಿ ‘​ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ. ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಇನ್ಯಾರು ಬೇಡ. ಜನರೇ ನಮಗೆ ಚಾಣಕ್ಯ. ಜನರ ಆಶೀರ್ವಾದ ಇರುವವರೆಗೂ ನಮಗೇನು ತೊಂದರೆ ಇಲ್ಲ ಎನ್ನುವ ಮೂಲಕ ಮಾಜಿ ಸಚಿವ H.D.ರೇವಣ್ಣ(H.D Revanna) ಟಾಂಗ್ ಕೊಟ್ಟಿದ್ದಾರೆ.

ಜಿಲ್ಲೆಯ ಬೇಲೂರಿನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ H.D.ರೇವಣ್ಣ ‘ಜನ ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತವನ್ನು ನೋಡಿದ್ದಾರೆ. ರಾಷ್ಟ್ರೀಯ ಪಕ್ಷಗಳನ್ನು ಸ್ವಲ್ಪ ದಿನ ರೆಸ್ಟ್​​ಗೆ ಕಳಿಸಲು ತೀರ್ಮಾನಿಸಿದ್ದಾರೆ. ನಮಗೆ ಜನ ಉಳಿಯಬೇಕು, ರಾಜ್ಯ ಉಳಿಯಬೇಕು ಎಂದರು. ನಾವು 123 ಟಾರ್ಗೆಟ್ ಇಟ್ಟಿದ್ದೀವಿ, ಒಂದು ಭಾರಿ ಬಹುಮತ ಕೊಡಿ. ದೇವೇಗೌಡರು ಸಾಮಾನ್ಯ ರೈತನ ಮಗ, ಕುಮಾರಣ್ಣನ ಶಿಕ್ಷಣ, ಆರೋಗ್ಯ ಕ್ಷೇತ್ರ, ಗ್ರಾಮಗಳ ಅಭಿವೃದ್ಧಿ ಸೇರಿ ಐದು ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ ಎಂದರು.

ಇದನ್ನೂ ಓದಿ:Karnataka Legislative Council: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಭರಾಟೆಯಲ್ಲಿ ಖಾಲಿಯಾಗುತ್ತಿದೆ ಕರ್ನಾಟಕದ ಮೇಲ್ಮನೆ!

ಹಾಸನದಲ್ಲಿ ದಿವಂಗತ ಎಚ್.ಎಸ್.ಪ್ರಕಾಶ್ ಅವರ ಮಗ ಸ್ವರೂಪ್​ನನ್ನ ನಿಲ್ಲಿಸಿದ್ದೇವೆ. ಭವಾನಿ ಅವರೇ ಕೈ ಎತ್ತಿ ಹೇಳಿದ್ದಾರಲ್ಲ, ಇನ್ನೇನು ಬೇಕು. ನಮಗೆ ಬೇಕಿರುವುದು ಪಕ್ಷ, ಜನ ಉಳಿಯಬೇಕು, ರಾಜ್ಯ ಉಳಿಯಬೇಕು. ಇದೇ ವೇಳೆ ಪ್ರೀತಂಗೌಡ ಸೈಲೆಂಟ್ ಆಗಿರುವ ವಿಚಾರ ‘ಅವರು ದೊಡ್ಡವರಿದ್ದಾರೆ, ಅವರ ಬಗ್ಗೆ ನನಗೆ ಮಾತನಾಡುವ ಶಕ್ತಿ ಇಲ್ಲ. ಅವರು ದೊಡ್ಡವರಿರುವಾಗ ಆ ಲೆವೆಲ್‌ಗೆ ನಾವು ಬೆಳೆದಿಲ್ಲ ಎಂದು ಪರೋಕ್ಷವಾಗಿ ಟೀಕೆ ಮಾಡಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ