AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lingayat: ಹುಬ್ಬಳ್ಳಿಯಲ್ಲಿ ಬಿಜೆಪಿ ಪರ ಲಿಂಗಾಯತ ಮುಖಂಡರ ಜೊತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿರುಸಿನ ಪ್ರಚಾರ

ಲಿಂಗಾಯತ ಮುಖಂಡರು ತಮ್ಮ ಪರ ಇದ್ದಾರೆ ಎಂದು ಹೇಳಿಕೊಳ್ಳುತ್ತಿದ್ದ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡುವ ನಿಟ್ಟಿನಲ್ಲಿಯೇ ಪ್ರಲ್ಹಾದ್ ಜೋಶಿ ಇಂದು ಸಂಕೇಶ್ವರ್ ಜೊತೆ ಸೇರಿ ಬಹಿರಂಗ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ರು.

Lingayat: ಹುಬ್ಬಳ್ಳಿಯಲ್ಲಿ ಬಿಜೆಪಿ ಪರ ಲಿಂಗಾಯತ ಮುಖಂಡರ ಜೊತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿರುಸಿನ ಪ್ರಚಾರ
ಹುಬ್ಬಳ್ಳಿಯಲ್ಲಿ ಬಿಜೆಪಿ ಪರ ಲಿಂಗಾಯತ ಮುಖಂಡರ ಜೊತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿರುಸಿನ ಪ್ರಚಾರ
TV9 Web
| Edited By: |

Updated on:May 08, 2023 | 3:01 PM

Share

ಹುಬ್ಬಳ್ಳಿ: ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆ (Karnataka Assembly Elections 2023) ನಾಳಿದ್ದು ನಡೆಯಲಿದೆ. ಹಾಗಾಗಿ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ತವರು ಹುಬ್ಬಳ್ಳಿ ಧಾರವಾಡದಲ್ಲಿ ಹೆಚ್ಚಿನ ಪ್ರಚಾರ ನಡೆಸಿದರು. ಈ ವೇಳೆ ಲಿಂಗಾಯತ (Lingayat) ಮುಖಂಡರು ಜೋಶಿ ಅವರಿಗೆ ಸಾಥ್ ನೀಡಿದ್ದು ವಿಶೇಷವಾಗಿತ್ತು.‌ ಉದ್ಯಮಿ ಹಾಗೂ ಸಮುದಾಯದ ಪ್ರಭಾವಿ ನಾಯಕ ವಿಜಯ್ ಸಂಕೇಶ್ವರ್ ಅವರು ಪ್ರಲ್ಹಾದ್ ಜೋಶಿ ಅವರ ಜೊತೆ ಇಂದು ಪ್ರಚಾರದಲ್ಲಿ ತೊಡಗಿದ್ರು.

ಹುಬ್ಬಳ್ಳಿ ಪೂರ್ವ ಕ್ಷೇತ್ರದಲ್ಲಿ (Hubli) ಬಿಜೆಪಿ ಅಭ್ಯರ್ಥಿ ಕ್ರಾಂತಿ ಕಿರಣ್ ಪರ ಜೋಶಿ ಹಾಗೂ ವಿಜಯ್ ಸಂಕೇಶ್ವರ್ ಮತಯಾಚಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆಯ ಮೂಲಕವೇ ಮೆರವಣಿಗೆ ನಡೆಸಿದ ಪ್ರಲ್ಹಾದ್ ಜೋಶಿ (Pralhad Joshi) ಹಾಗೂ ವಿಜಯ್ ಸಂಕೇಶ್ವರ್ ಬಿಜೆಪಿ ಅಭ್ಯರ್ಥಿಗಳ ಪರ ಜನರಲ್ಲಿ ಮತ ಯಾಚಿಸಿದರು.

ಲಿಂಗಾಯತ ಮುಖಂಡರು ತಮ್ಮ ಪರ ಇದ್ದಾರೆ ಎಂದು ಹೇಳಿಕೊಳ್ಳುತ್ತಿದ್ದ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡುವ ನಿಟ್ಟಿನಲ್ಲಿಯೇ ಪ್ರಲ್ಹಾದ್ ಜೋಶಿ ಇಂದು ಸಂಕೇಶ್ವರ್ ಜೊತೆ ಸೇರಿ ಬಹಿರಂಗ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ರು. ಪ್ರಚಾರ ಆರಂಭಕ್ಕೂ ಮೊದಲು ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಂಕೇಶ್ವರ್, ಬಜರಂಗಬಲಿಗೆ ಜೈಕಾರ ಹಾಕುವ ಮೂಲಕ ಕಾಂಗ್ರೆಸ್ ಗೆ ತಿರುಗೇಟು ನೀಡಿದರು.

Also Read:  ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ – ಲಿಂಗಾಯತರ ಮತ ಕೈ ತಪ್ಪದಂತೆ ನೋಡಿಕೊಳ್ಳಲು ಸಂಕೇಶ್ವರ್ ಸಹಕಾರ ಕೋರಿದ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು ಗೆಲುವು ಯಾರ ಮಡಿಲಿಗೆ ಎಂಬ ಕುತೂಹಲ ಎಲ್ಲರಲ್ಲಿದೆ. ಲಿಂಗಾಯತರು ಮತಗಳ ಜೊತೆ ಕಾಂಗ್ರೆಸ್ ಸಾಂಪ್ರದಾಯಿಕ ಮತಗಳನ್ನ ಶೆಟ್ಟರ್ ನಂಬಿಕೊಂಡಿದ್ರೆ, ಬಿಜೆಪಿ ಸಾಂಪ್ರದಾಯಿಕ ಮತಗಳು ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ. ಲಿಂಗಾಯತ ಮತಗಳು ಕೂಡ ಬಿಜೆಪಿಯ ಮತ ಬ್ಯಾಂಕ್ ನಲ್ಲಿ ಪ್ರಮಖವಾಗಿದ್ದು, ಲಿಂಗಾಯತರು ಬಿಜೆಪಿ ಪರ ನಿಲ್ಲಲಿದ್ದಾರೆ ಎಂಬ ವಿಶ್ವಾಸವನ್ನ ಪ್ರಲ್ಹಾದ ಜೋಶಿ ಹಾಗೂ ವಿಜಯ ಸಂಕೇಶ್ವರ್ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:38 pm, Mon, 8 May 23

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ