AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧ ಪಕ್ಷದಲ್ಲಿ ಸಿಎಂ ರೇಸ್​ನಲ್ಲಿರುವ ಹೆಸರುಗಳನ್ನು ತೇಲಿಬಿಟ್ಟ ಶೋಭಾ ಕರಂದ್ಲಾಜೆ

ಕಾಂಗ್ರೆಸ್​ನವರು 2 ಸಾವಿರ ರೂಪಾಯಿ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ, ಅದು ಕೇವಲ ಭರವಸೆ ಆಗಿರುತ್ತದೆ. ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೊಟ್ಟಿರುವ ಭರವಸೆ ಏನಾಯ್ತು? ಹಲವಾರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಭರವಸೆ ಈಡೇರಿಸಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದ್ದಾರೆ.

ವಿರೋಧ ಪಕ್ಷದಲ್ಲಿ ಸಿಎಂ ರೇಸ್​ನಲ್ಲಿರುವ ಹೆಸರುಗಳನ್ನು ತೇಲಿಬಿಟ್ಟ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 11, 2023 | 12:32 PM

Share

ಮುಖ್ಯಾಂಶಗಳು

  • ಕಾಂಗ್ರೆಸ್​ನವರು 2 ಸಾವಿರ ರೂಪಾಯಿ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ, ಅದು ಕೇವಲ ಭರವಸೆ ಆಗಿರುತ್ತದೆ.
  • ಸ್ವಚ್ಚ ಭಾರತ್ ಕಾರ್ಯಕ್ರಮ ಮಾಡಲು ಮೋದಿ ಪೊರಕೆ ಹಿಡಿದರು. ಇದಕ್ಕೆ ವಿಪಕ್ಷಗಳು ನಕ್ಕಿದ್ದವು. ಸೌದೆಯಲ್ಲಿ ಅಡುಗೆ ಮಾಡುವ ಪರಿಸ್ಥಿತಿ ಇತ್ತು, ಗ್ಯಾಸ್ ಇಲ್ಲದ ಮನೆಗೆ ಗ್ಯಾಸ್ ಕೊಡುವ ಕೆಲಸ ಮಾಡಲಾಗಿದೆ.
  • ದೇಶ ಮೂಲಭೂತ ಸೌಕರ್ಯ, ಸಂಪರ್ಕ ವಿಚಾರದಲ್ಲಿ ಸಮಸ್ಯೆ ಎದುರಿಸುತ್ತಿತ್ತು, ಇದರ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ದೊಡ್ಡ ಹೆಜ್ಜೆ ಇಟ್ಟರು.

ಬೆಂಗಳೂರು: ನನ್ನ ಪ್ರಕಾರ ಕಾಂಗ್ರೆಸ್​​ನಲ್ಲಿ (Congress) ನಾಲ್ಕು ಜನರು ಮುಖ್ಯಮಂತ್ರಿ ರೇಸ್​​ನಲ್ಲಿದ್ದಾರೆ. ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramiah) ಇಬ್ಬರೇ ಇದ್ದರು. ಆದರೆ ಅವರ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಮಾಜಿ ಸಚಿವ ಎಂ.ಬಿ. ಪಾಟೀಲ್ (MB Patil) ಕೂಡ ಸಿಎಂ ರೇಸ್​ನಲ್ಲಿದ್ದಾರೆ ಅಂತ ಅನ್ನಿಸುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್​ನವರು 2 ಸಾವಿರ ರೂಪಾಯಿ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ, ಅದು ಕೇವಲ ಭರವಸೆ ಆಗಿರುತ್ತದೆ. ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೊಟ್ಟಿರುವ ಭರವಸೆಯ ಏನಾಯ್ತು? ಹಲವಾರು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ ಭರವಸೆ ಈಡೇರಿಸಿಲ್ಲ. ನಾವು ಗ್ಯಾರಂಟಿ ಅಂತ ಹೇಳಿಲ್ಲ, ಭರವಸೆ ಕೊಡುತ್ತಿಲ್ಲ. ಬಿಜೆಪಿ ಅಭಿವೃದ್ಧಿ ಆಧಾರದ ಮೇಲೆ ಪಾಸಿಟಿವ್ ಪ್ರಚಾರದ ಮೇಲೆ ಹೋಗಲು ನಿರ್ಧರಿಸಿದೆ ಎಂದರು.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿಯ ಅತಿರಥ ಲಕ್ಷಣ್ ಸವದಿಗೆ ಕಾಂಗ್ರೆಸ್ ಗಾಳ

ದೇಶ ಮೂಲಭೂತ ಸೌಕರ್ಯ, ಸಂಪರ್ಕ ವಿಚಾರದಲ್ಲಿ ಸಮಸ್ಯೆ ಎದುರಿಸುತ್ತಿತ್ತು, ಇದರ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ದೊಡ್ಡ ಹೆಜ್ಜೆ ಇಟ್ಟರು. ಸ್ವಚ್ಚತೆಯ ಮೂಲ ಆದ್ಯತೆ ಎನ್ನುತ್ತಿದ್ದರು, ಆದರೆ ಶೌಚಾಲಯವೇ ಇರಲಿಲ್ಲ. ಮಹಿಳೆಯರು ಶೌಚಕ್ಕೆ ಹೋಗಬೇಕಾದರೇ ಕತ್ತಲಾಗುವವರೆಗೆ ಕಾಯಬೇಕಿತ್ತು. ಉತ್ತರ ಕರ್ನಾಟಕದ ಹಲವು ಕಡೆ ಹಗಲು ಹೊತ್ತಲ್ಲಿ ಶೌಚಾಲಯಕ್ಕೆ ಹೋಗುವ ಪರಿಸ್ಥಿತಿ ಇರಲಿಲ್ಲ. ಕಾರಿನ ಬೆಳಕು ಬಿದ್ದರೆ ಎದ್ದು ನಿಲ್ಲುವ ಪರಿಸ್ಥಿತಿ ಇತ್ತು ಎಂದು ಹೇಳಿದರು.

ಸ್ವಚ್ಚ ಭಾರತ್ ಕಾರ್ಯಕ್ರಮ ಮಾಡಲು ಮೋದಿ ಪೊರಕೆ ಹಿಡಿದರು. ಇದಕ್ಕೆ ವಿಪಕ್ಷಗಳು ನಕ್ಕಿದ್ದವು. ಸೌದೆಯಲ್ಲಿ ಅಡುಗೆ ಮಾಡುವ ಪರಿಸ್ಥಿತಿ ಇತ್ತು, ಗ್ಯಾಸ್ ಇಲ್ಲದ ಮನೆಗೆ ಗ್ಯಾಸ್ ಕೊಡುವ ಕೆಲಸ ಮಾಡಲಾಗಿದೆ. ಮಹಿಳೆಯರ ದೃಷ್ಟಿಯಿಂದ ಚಿಂತನೆ ಮಾಡಿ ಉಜ್ವಲ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಸಂಧ್ಯಾ ಸುರಕ್ಷಾ ಯೋಜನೆ ಘೋಷಣೆ ಮಾಡಿದ್ದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪನವರು ಎಂದು ತಿಳಸಿದರು.

CRPF ನೇಮಕಾತಿ ಪರೀಕ್ಷೆ ಬರೆಯಲು ಕನ್ನಡದಲ್ಲಿ ಅವಕಾಶ ನೀಡುವ ವಿಚಾರವಾಗಿ ಮಾತನಾಡಿದ ಅವರು  ಈ ಸಂಬಂಧ ಕೇಂದ್ರ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ ಚರ್ಚಿಸುವೆ ಎಂದರು.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:14 pm, Tue, 11 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ