AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧ ಪಕ್ಷದಲ್ಲಿ ಸಿಎಂ ರೇಸ್​ನಲ್ಲಿರುವ ಹೆಸರುಗಳನ್ನು ತೇಲಿಬಿಟ್ಟ ಶೋಭಾ ಕರಂದ್ಲಾಜೆ

ಕಾಂಗ್ರೆಸ್​ನವರು 2 ಸಾವಿರ ರೂಪಾಯಿ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ, ಅದು ಕೇವಲ ಭರವಸೆ ಆಗಿರುತ್ತದೆ. ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೊಟ್ಟಿರುವ ಭರವಸೆ ಏನಾಯ್ತು? ಹಲವಾರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಭರವಸೆ ಈಡೇರಿಸಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದ್ದಾರೆ.

ವಿರೋಧ ಪಕ್ಷದಲ್ಲಿ ಸಿಎಂ ರೇಸ್​ನಲ್ಲಿರುವ ಹೆಸರುಗಳನ್ನು ತೇಲಿಬಿಟ್ಟ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ವಿವೇಕ ಬಿರಾದಾರ
|

Updated on:Apr 11, 2023 | 12:32 PM

Share

ಬೆಂಗಳೂರು: ನನ್ನ ಪ್ರಕಾರ ಕಾಂಗ್ರೆಸ್​​ನಲ್ಲಿ (Congress) ನಾಲ್ಕು ಜನರು ಮುಖ್ಯಮಂತ್ರಿ ರೇಸ್​​ನಲ್ಲಿದ್ದಾರೆ. ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramiah) ಇಬ್ಬರೇ ಇದ್ದರು. ಆದರೆ ಅವರ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಮಾಜಿ ಸಚಿವ ಎಂ.ಬಿ. ಪಾಟೀಲ್ (MB Patil) ಕೂಡ ಸಿಎಂ ರೇಸ್​ನಲ್ಲಿದ್ದಾರೆ ಅಂತ ಅನ್ನಿಸುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್​ನವರು 2 ಸಾವಿರ ರೂಪಾಯಿ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ, ಅದು ಕೇವಲ ಭರವಸೆ ಆಗಿರುತ್ತದೆ. ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೊಟ್ಟಿರುವ ಭರವಸೆಯ ಏನಾಯ್ತು? ಹಲವಾರು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ ಭರವಸೆ ಈಡೇರಿಸಿಲ್ಲ. ನಾವು ಗ್ಯಾರಂಟಿ ಅಂತ ಹೇಳಿಲ್ಲ, ಭರವಸೆ ಕೊಡುತ್ತಿಲ್ಲ. ಬಿಜೆಪಿ ಅಭಿವೃದ್ಧಿ ಆಧಾರದ ಮೇಲೆ ಪಾಸಿಟಿವ್ ಪ್ರಚಾರದ ಮೇಲೆ ಹೋಗಲು ನಿರ್ಧರಿಸಿದೆ ಎಂದರು.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿಯ ಅತಿರಥ ಲಕ್ಷಣ್ ಸವದಿಗೆ ಕಾಂಗ್ರೆಸ್ ಗಾಳ

ದೇಶ ಮೂಲಭೂತ ಸೌಕರ್ಯ, ಸಂಪರ್ಕ ವಿಚಾರದಲ್ಲಿ ಸಮಸ್ಯೆ ಎದುರಿಸುತ್ತಿತ್ತು, ಇದರ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ದೊಡ್ಡ ಹೆಜ್ಜೆ ಇಟ್ಟರು. ಸ್ವಚ್ಚತೆಯ ಮೂಲ ಆದ್ಯತೆ ಎನ್ನುತ್ತಿದ್ದರು, ಆದರೆ ಶೌಚಾಲಯವೇ ಇರಲಿಲ್ಲ. ಮಹಿಳೆಯರು ಶೌಚಕ್ಕೆ ಹೋಗಬೇಕಾದರೇ ಕತ್ತಲಾಗುವವರೆಗೆ ಕಾಯಬೇಕಿತ್ತು. ಉತ್ತರ ಕರ್ನಾಟಕದ ಹಲವು ಕಡೆ ಹಗಲು ಹೊತ್ತಲ್ಲಿ ಶೌಚಾಲಯಕ್ಕೆ ಹೋಗುವ ಪರಿಸ್ಥಿತಿ ಇರಲಿಲ್ಲ. ಕಾರಿನ ಬೆಳಕು ಬಿದ್ದರೆ ಎದ್ದು ನಿಲ್ಲುವ ಪರಿಸ್ಥಿತಿ ಇತ್ತು ಎಂದು ಹೇಳಿದರು.

ಸ್ವಚ್ಚ ಭಾರತ್ ಕಾರ್ಯಕ್ರಮ ಮಾಡಲು ಮೋದಿ ಪೊರಕೆ ಹಿಡಿದರು. ಇದಕ್ಕೆ ವಿಪಕ್ಷಗಳು ನಕ್ಕಿದ್ದವು. ಸೌದೆಯಲ್ಲಿ ಅಡುಗೆ ಮಾಡುವ ಪರಿಸ್ಥಿತಿ ಇತ್ತು, ಗ್ಯಾಸ್ ಇಲ್ಲದ ಮನೆಗೆ ಗ್ಯಾಸ್ ಕೊಡುವ ಕೆಲಸ ಮಾಡಲಾಗಿದೆ. ಮಹಿಳೆಯರ ದೃಷ್ಟಿಯಿಂದ ಚಿಂತನೆ ಮಾಡಿ ಉಜ್ವಲ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಸಂಧ್ಯಾ ಸುರಕ್ಷಾ ಯೋಜನೆ ಘೋಷಣೆ ಮಾಡಿದ್ದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪನವರು ಎಂದು ತಿಳಸಿದರು.

CRPF ನೇಮಕಾತಿ ಪರೀಕ್ಷೆ ಬರೆಯಲು ಕನ್ನಡದಲ್ಲಿ ಅವಕಾಶ ನೀಡುವ ವಿಚಾರವಾಗಿ ಮಾತನಾಡಿದ ಅವರು  ಈ ಸಂಬಂಧ ಕೇಂದ್ರ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ ಚರ್ಚಿಸುವೆ ಎಂದರು.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:14 pm, Tue, 11 April 23

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ