AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹತೆ ಭೀತಿಯಲ್ಲಿ ಸಚಿವ: ಆಡಿಯೋ ವೈರಲ್​ ಬಗ್ಗೆ ಸ್ಪಷ್ಟನೆ ಕೊಟ್ಟ ವಿ ಸೋಮಣ್ಣ

ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಒಡ್ಡಿದ್ದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಅಭ್ಯರ್ಥಿ, ವಸತಿ ಸಚಿವ ವಿ. ಸೋಮಣ್ಣಗೆ ಸದ್ಯ ನಾಮಪತ್ರ ಅನರ್ಹಗೊಳ್ಳುವ ಭೀತಿ ಶುರುವಾಗಿದೆ.

ಅನರ್ಹತೆ ಭೀತಿಯಲ್ಲಿ ಸಚಿವ: ಆಡಿಯೋ ವೈರಲ್​ ಬಗ್ಗೆ ಸ್ಪಷ್ಟನೆ ಕೊಟ್ಟ ವಿ ಸೋಮಣ್ಣ
ಗಂಗಾಧರ​ ಬ. ಸಾಬೋಜಿ
|

Updated on: Apr 30, 2023 | 3:52 PM

Share

ಮೈಸೂರು: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಒಡ್ಡಿದ್ದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಅಭ್ಯರ್ಥಿ, ವಸತಿ ಸಚಿವ ವಿ. ಸೋಮಣ್ಣಗೆ (V Somanna) ಸದ್ಯ ಮತ್ತೊಂದು ಸಂಕಷ್ಟ ಎದುರಾಗಿದೆ. ನಾಮಪತ್ರ ಅನರ್ಹಗೊಳ್ಳುವ ಭೀತಿ ಸಚಿವ ವಿ. ಸೋಮಣ್ಣಗೆ ಎದುರಾಗಿದೆ. ಇತ್ತೀಚೆಗೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್​ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈ ಪ್ರಕರಣವನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದೆ.

ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಲಿ: ಸಚಿವ ವಿ.ಸೋಮಣ್ಣ

ಈ ಕುರಿತಾಗಿ ಭಾನುವಾರ ಮೈಸೂರಿನಲ್ಲಿ ಟಿವಿ9ಗೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು,ಈ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಲಿ. ಇದು ಕೀಳು ಮಟ್ಟದಲ್ಲಿ ಮಾಡಿದ್ದಾರೆ. ಕಾನೂನು ಪ್ರಕಾರ ತನಿಖೆಯಾಗಲಿ. ಸುಮ್ನೆ ಭಯ ಹುಟ್ಟಿಸಲು ಈ ರೀತಿ ಮಾಡುತ್ತಿದ್ದಾರೆ. ನನ್ನ ಸಹಿಸಲು ಸಾಧ್ಯವಾಗದಿದ್ದರು ಈ ರೀತಿ ಮಾಡಿದ್ದಾರೆ. ಜನಪ್ರಿಯತೆಯನ್ನ ಸಹಿಸಿಕೊಳ್ಳದವರು ಮಾಡುತ್ತಿದ್ದಾರೆ ಎಂದು ಯಾರ ಹೆಸರು ಹೇಳದೆ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಗೂಟದ ಕಾರು ಆಮಿಷ, ಆಡಿಯೋ ವೈರಲ್​ ಬಗ್ಗೆ ಸೋಮಣ್ಣ ಹೇಳಿದ್ದಿಷ್ಟು

ವಿ. ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್​

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಿ. ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಚಾಮರಾಜನಗರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ಹಿನ್ನೆಲೆ ವಿ.ಸೋಮಣ್ಣ, ನಟರಾಜ್, ಸುದೀಪ್ ವಿರುದ್ಧ ಐಪಿಸಿ ಸೆಕ್ಷನ್ 1860(u/s 171E, 171F)ರಡಿ ಎಫ್‌ಐಆರ್ ದಾಖಲಾಗಿದೆ. ಹಾಗಾಗಿ ಸೋಮಣ್ಣ ನಾಮಪತ್ರ ಅನರ್ಹಗೊಳ್ಳುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿಗೆ ಆಮಿಷ: ವಿ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ FIR

ಆಡಿಯೋನಲ್ಲೇನಿದೆ?

ನಿನಗೆ ಗೂಟದ ಕಾರು ಕೋಡ್ತೀವಿ, ಮೊದಲು ನಾಮಪತ್ರ ವಾಪಸ್ ತಗೊ. ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ ಎಂದು ಸೋಮಣ್ಣ ಹೇಳಿರುವುದು ಆಡಿಯೋದಲ್ಲಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಇದು ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ