AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಗೂಟದ ಕಾರು ಆಮಿಷ, ಆಡಿಯೋ ವೈರಲ್​ ಬಗ್ಗೆ ಸೋಮಣ್ಣ ಹೇಳಿದ್ದಿಷ್ಟು

ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಗೂಟದ ಕಾರು ಆಮಿಷದ ಆಡಿಯೋ ವೈರಲ್​ ಬಗ್ಗೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಸ್ಪಷ್ಟನೆ ಕೊಟ್ಟಿದ್ದಾರೆ. ಹಾಗಾದ್ರೆ, ಸೋಮಣ್ಣ ಆಡಿಯೋ ಬಗ್ಗೆ ಹೇಳಿದ್ದೇನು? ನೋಡಿ

ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಗೂಟದ ಕಾರು ಆಮಿಷ, ಆಡಿಯೋ ವೈರಲ್​ ಬಗ್ಗೆ ಸೋಮಣ್ಣ ಹೇಳಿದ್ದಿಷ್ಟು
ವಿ ಸೋಮಣ್ಣ
ರಮೇಶ್ ಬಿ. ಜವಳಗೇರಾ
|

Updated on:Apr 26, 2023 | 3:21 PM

Share

ಮೈಸೂರು: ಸಚಿವ ವಿ ಸೋಮಣ್ಣ (V Somanna) ಅವರು ಬೆಂಗಳೂರು ನಗರ ಜಿಲ್ಲೆಯ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಗೆ ಚಾಮರಾಜನಗರ ಕ್ಷೇತ್ರಕ್ಕೆ ವಲಸೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಮನಗರ ವಿಧಾನಸಭಾ ಕ್ಷೇತ್ರ ಜಿದ್ದಾಜಿದ್ದಿ ಹೋರಾಟದ ಅಖಾಡವಾಗಿ ಬದಲಾಗಿದೆ. ಇದರ ಮಧ್ಯೆ ಚಾಮರಾಜನಗರದ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್​ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇದರಿಂದ ಎಚ್ಚೆತ್ತ ಸೋಮಣ್ಣ ಅವರು ಆಡಿಯೋ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ ಹಾಕಿ ಎಂದ ಹೆಚ್​ಡಿ ಕುಮಾರಸ್ವಾಮಿ ಪರಮಾಪ್ತ: ವಿಡಿಯೋ ಬೆನ್ನಲ್ಲೇ ಫೋಟೋ ವೈರಲ್

ಈ ಬಗ್ಗೆ ಇಂದು(ಏಪ್ರಿಲ್ 26) ವರುಣಾ ಕ್ಷೇತ್ರದಲ್ಲಿ ಪ್ರಚಾರದ ಸಮಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ಆಡಿಯೋಗೂ ನನಗೂ ಸಂಬಂಧವಿಲ್ಲ. ನಾನು ಯಾವುದೋ ನಾಯಿ ನರಿಗಳಿಗೆ ಮಾತಿಗೆ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ನಾನೇನೂ ದಡ್ಡ ಅಲ್ಲ. 45 ವರ್ಷ ರಾಜಕಾರಣ ಮಾಡಿದ್ದೇನೆ. ಚುನಾವಣಾ ಮುಗಿದ ಮೇಲೆ ಆಡಿಯೋ ಬಗ್ಗೆ ಮಾತನಾಡುತ್ತೇನೆ. ನನಗೂ ಅದಕ್ಕೂ ಸಂಬಂಧ ಇಲ್ಲ. ಯಾರೋ ಹೊಟ್ಟೆ ಪಾಡಿಗಾಗಿ ಮಾಡಿರಬಹುದು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಆಡಿಯೋ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದರು.

ಆಡಿಯೋನಲ್ಲೇನಿದೆ?

ನಿನಗೆ ಗೂಟದ ಕಾರು ಕೋಡ್ತೀವಿ, ಮೊದಲು ನಾಮಪತ್ರ ವಾಪಸ್ ತಗೊ. ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ ಎಂದು ಸೋಮಣ್ಣ ಹೇಳಿರುವುದು ಆಡಿಯೋದಲ್ಲಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಇದು ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕ್ಷೇತ್ರದಲ್ಲಿ ಭಾರೀ ಚರ್ಚೆ

ಜೆಡಿಎಸ್​ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಚಾಮರಾಜನಗರದಲ್ಲಿ ಲಿಂಗಾಯತ ಸಮುದಾಯದ ಮತಗಳು ಸಹ ಅಧಿಕವಾಗಿವೆ. ಹೀಗಾಗಿ ಮಲ್ಲಿಕಾರ್ಜು ಸ್ವಾಮಿ ಅವರು ಸಹ ಲಿಂಗಾಯತ ಮತಗಳನ್ನು ಕಸಿದುಕೊಳ್ಳಬಹುದು. ಹೀಗಾಗಿ ಸೋಮಣ್ಣ ಅವರು ಮಲ್ಲಿಕಾರ್ಜುನ ಅವರಿಗೆ ನಾಮಪತ್ರ ವಾಪಸ್ ಪಡೆದುಕೊಳ್ಳಲು ಒತ್ತಡ ಹಾಕಿದ್ದಾರೆ ಎನ್ನುವ ಚರ್ಚೆಗಳು ನಡೆಯುತ್ತಿವೆ.

ಇನ್ನು ಈ ಆಡಿಯೋ ತುಣುಕನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿಯ ಹರಕೆಯ ಕುರಿಯಾಗಿರುವ ಸೋಮಣ್ಣ ಎರಡೂ ಕಡೆ ಬಲಿಯಾಗುವ ಭಯದಲ್ಲಿ ವಿಲವಿಲ ಒದ್ದಾಡುತ್ತಿದ್ದಾರೆ. ಜೆಡಿಎಸ್ ಅಭ್ಯರ್ಥಿಯಲ್ಲಿ ಕೈ ಮುಗಿಯುತ್ತೇನೆ ನಾಮಪತ್ರ ವಾಪಸ್ ತಗೊ. ಗೂಟದ ಕಾರು ಕೊಡಿಸುತ್ತೇನೆ ಎಂದು ಬೇಡುತ್ತಾ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ. ರಾಜ್ಯ ಬಿಜೆಪಿಗೆ ಅಡ್ಜೆಸ್ಟ್ಮೆಂಟ್ ರಾಜಕಾರಣವಿಲ್ಲದೆ ಗೆಲ್ಲುವ ಧೈರ್ಯ ಇಲ್ಲವೇಕೆ? ಎಂದು ಪ್ರಶ್ನಿಸಿದೆ. ಇದೀಗ ಸ್ವತಃ ಸೋಮಣ್ಣ ಆಡಿಯೋ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 26 April 23

ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?