AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ಕಲ್ಲೆಸೆತ ಆರೋಪ: ಸ್ವಲ್ಪದರಲ್ಲೇ ಪಾರಾದ ವಿ ಸೋಮಣ್ಣ, ಪ್ರತಾಪ್​ ಸಿಂಹ

ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಕಲ್ಲೆಸೆದ ಆರೋಪ ಮಾಡಲಾಗಿದೆ.

ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ಕಲ್ಲೆಸೆತ ಆರೋಪ: ಸ್ವಲ್ಪದರಲ್ಲೇ ಪಾರಾದ ವಿ ಸೋಮಣ್ಣ, ಪ್ರತಾಪ್​ ಸಿಂಹ
ಗಲಾಟೆ ವೇಳೆ ಕಾರ್ಯಕರ್ತರಿಗೆ ಗಾಯವಾಗಿರುವುದು
ಗಂಗಾಧರ​ ಬ. ಸಾಬೋಜಿ
|

Updated on:Apr 27, 2023 | 8:56 PM

Share

ಮೈಸೂರು: ಕಾಂಗ್ರೆಸ್ (Congress) ​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಕಲ್ಲೆಸೆದ ಆರೋಪ ಮಾಡಲಾಗಿದೆ. ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಘಟನೆ ನಡೆದಿದೆ. ಅಭ್ಯರ್ಥಿ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಪ್ರಚಾರ ರಥದಲ್ಲಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ನಾಗೇಶ್ ಕಾಲಿಗೆ ಪೆಟ್ಟಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲಾಗಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಚಿಕ್ಕಮಗಳೂರು: ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ ಇತ್ತೀಚೆಗೆ ನಡೆದಿತ್ತು. ಯಾರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡೋಣ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಸಂಯೋಜಕ ಪವನ್ ಮೇಲೆ ವಿರೋಧಿ ಬಣ ಹಲ್ಲೆ ನಡೆಸಿದ್ದಾರೆ ಎನ್ನಲಾಗಿತ್ತು. ಜೊತೆಗೆ ಎಲ್ಲರೂ ಒಗ್ಗಟ್ಟಾಗಿ ಇರುವಂತೆ ಹೇಳಿದ್ದಕ್ಕೆ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧವೂ ಕಿಡಿಕಾರಲಾಗಿತ್ತು.

ಇದನ್ನೂ ಓದಿ: Yadgir: ಆಪ್​ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ: ಚುನಾವಣಾ ಪ್ರಚಾರ ವೇಳೆ ಗಲಾಟೆ

ಅರ್ಜಿ ಸಲ್ಲಿಸಿರುವವರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದರು. ತಮ್ಮಯ್ಯಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಒತ್ತಾಯಸಿದ್ದು, ಈ ವೇಳೆ ಸಭೆಯಲ್ಲಿ ಕಾಂಗ್ರೆಸ್​ ಮುಖಂಡರು, ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ದಂಗಲ್ ಶುರುವಾಗಿದ್ದು, ಹೈಕಮಾಂಡ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದರು.

ವಲಸಿಗರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಪಟ್ಟು ಹಿಡಿದಿದ್ದು, 6 ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಮಾಡಲಾಗಿತ್ತು. ಎಚ್​ಡಿ ತಮ್ಮಯ್ಯನಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಿರಿಕ್​

ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ

ನೆಲಮಂಗಲ: ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ತಡರಾತ್ರಿವರೆಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ನಡೆಯಿತು. ಜೆಡಿಎಸ್ ಕಾರ್ಯಕರ್ತ ಮೋಹನ್​ಕಡೆಯವರಾದ ಅಭ್ಯರ್ಥಿ ಮುನೆಗೌಡ ಹಾಗೂ ಬೆಂಬಲಿಗರಿಂದ ಠಾಣೆಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಬಿಜೆಪಿ ಮುಖಂಡ ಕೊಳ್ಳಿಗಾನಹಳ್ಳಿ ವೆಂಕಟೇಶಪ್ಪ ಹಾಗೂ ಬೆಂಬಲಿಗರು ಠಾಣೆಗೆ ಆಗಮಿಸಿದ್ದಾರೆ.

ಮೊದಲು ನಮ್ಮ ದೂರು ತೆಗೆದುಕೊಳ್ಳಿ ಎಂದು ಗಲಾಟೆ ಮಾಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ ಮಾಡಲಾಗಿದೆ. ಪೊಲೀಸ್ ಠಾಣೆ ಎಂಬುದನ್ನು ಮರೆತು ಜೋರು ಧ್ವನಿಯಲ್ಲಿ ಗದ್ದಲ ಮಾಡಿದ್ದಾರೆ. ಗಲಾಟೆ ನಿಲ್ಲಿಸಲು ಇಬ್ಬರನ್ನು ಇನ್ಸ್ಪೆಕ್ಟರ್​ ಇಲ್ಲ ನಾಳೆ ಬನ್ನಿ ಎಂದು ಪೊಲೀಸರು ಹೇಳಿ ಕಳುಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Thu, 27 April 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?