AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ನಿಷೇಧ ಪ್ರಸ್ತಾವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ; ವೀರಪ್ಪ ಮೊಯ್ಲಿ

ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬಜರಂಗದಳ ನಿಷೇಧ ಪ್ರಸ್ತಾವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ; ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
Ganapathi Sharma
|

Updated on: May 04, 2023 | 5:19 PM

Share

ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಹೇಳಿದ್ದಾರೆ. ಚುನಾವಣಾ ಪ್ರಣಾಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಪಿಎಫ್​ಐ ಮತ್ತು ಬಜರಂಗದಳ (Bajrang Dal) ಎರಡರ ಹೆಸರನ್ನೂ ಉಲ್ಲೇಖಿಸಿದ್ದೇವೆ. ಇದರಲ್ಲಿ ಎಲ್ಲಾ ಮೂಲಭೂತವಾದಿ ಸಂಘಟನೆಗಳು ಸೇರಿವೆ. ಕೇವಲ ಒಂದು ಸಂಘಟನೆಯನ್ನು ನಿಷೇಧಿಸಲು ಸಾಧ್ಯವಾಗದು. ಬಜರಂಗದಳವನ್ನು ಕರ್ನಾಟಕ ಸರ್ಕಾರವು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಣಾಳಿಕೆ ವಿಚಾರ ತೀವ್ರ ವಿವಾದಕ್ಕೀಡಾದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇನ್ನಷ್ಟು ಸ್ಪಷ್ಟನೆ ನೀಡಲಿದ್ದಾರೆ. ದ್ವೇಷದ ರಾಜಕಾರಣವನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ಕೂಡ ಹೇಳಿದೆ. ಭಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ. ನಾಯಕನಾಗಿ ನಾನು ಈ ಬಗ್ಗೆ ನಿಮಗೆ ಭರವಸೆ ನೀಡಬಲ್ಲೆ ಎಂದು ಅವರು ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ಕಾಂಗ್ರೆಸ್ ಪ್ರಣಾಳಿಕೆಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಭಜರಂಗದಳವು ದೇಶಭಕ್ತಿಯ ಸಂಘಟನೆಯಾಗಿದ್ದು, ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಕೇಂದ್ರವು ನಿಷೇಧಿಸಿರುವ ಪಿಎಫ್‌ಐ ಸಂಘಟನೆಯನ್ನು ಬೆಂಬಲಿಸಲು ಕಾಂಗ್ರೆಸ್‌ನ ಪ್ರಯತ್ನ ಇದಾಗಿದೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಮಂಡ್ಯದಲ್ಲಿಯೂ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆ ಸುಟ್ಟುಹಾಕಿದ್ದಾರೆ.

ಇದನ್ನೂ ಓದಿ: Mandya: ಬಜರಂಗದಳ ನಿಷೇಧ ವಿಚಾರ: ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಬಜರಂಗದಳ ಕಾರ್ಯಕರ್ತರು

ಈ ಎಲ್ಲ ಬೆಳವಣಿಗೆಗಳ ನಡುವೆ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಬಜರಂಗದಳ, ಪಿಎಫ್​ಐ ಮತ್ತಿತರ ಸಂಘಟನೆಗಳು ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಅವುಗಳನ್ನು ನಿಷೇಧಿಸುವುದಾಗಿ ಉಲ್ಲೇಖಿಸಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ನಾಯಕರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ