Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಸಮುದಾಯದ ‘ಕೈ’ ನಾಯಕರ ಸಭೆ: 75 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ರೆಡಿ

ಪ್ರಾಬಲ್ಯವಿರುವ ಸಮುದಾಯ ಅಥವಾ ಜಾತಿಯ ಅಭ್ಯರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಣೆ ಹಾಕಲಾಗುತ್ತದೆ. ಇಂತಹದ್ದೇ ಲೆಕ್ಕಾಚಾರ ಈ ವಿಧಾನಸಭೆ ಚುನಾವಣೆಯಲ್ಲೂ ನಡೆದಿದ್ದು, ವೀರಶೈವ ಲಿಂಗಾಯತ ಸಮಾಜದ ‘ಕೈ’ ನಾಯಕರ ಸಭೆಯಲ್ಲಿ 68 ಅಭ್ಯರ್ಥಿಗಳ ಪಟ್ಟಿಯನ್ನು ರೆಡಿ ಮಾಡಿದೆ.

ವೀರಶೈವ ಲಿಂಗಾಯತ ಸಮುದಾಯದ ‘ಕೈ’ ನಾಯಕರ ಸಭೆ: 75 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ರೆಡಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 15, 2023 | 6:15 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ನಾನಾ ತಂತ್ರಗಳನ್ನು ರೂಪಿಸುತ್ತಿವೆ. ಜಾತಿವಾರು, ಸಮುದಾಯಗಳ ಅನುಸಾರವಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗಳು ನಡೆದಿವೆ. ಇನ್ನು ಇದರ ಮಧ್ಯೆ ವೀರಶೈವ ಲಿಂಗಾಯತ(veerashaiva lingayat) ಸಮಾಜದ ಕಾಂಗ್ರೆಸ್​ ನಾಯಕರು ಸಭೆ ಮಾಡಿದ್ದಾರೆ. ಇಂದು (ಫೆಬ್ರವರಿ 14) ಸಮುದಾಯದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(shamanur shivashankarappa) ಅವರ ಬೆಂಗಳೂರಿನ ನಿವಾಸದಲ್ಲಿ ಎರಡನೇ ಸುತ್ತಿನ ಸಭೆ ಮಾಡಿದ ನಾಯಕರು, ನಿನ್ನೆ(ಫೆ.13) ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಚರ್ಚೆ ನಡೆಸಿದ್ದು, ಈ ವೇಳೆ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 68 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ರೆಡಿ ಮಾಡಿದ್ದಾರೆ.

ಇದನ್ನೂ ಓದಿ: ಬೇಸರಗೊಂಡಿದ್ದ ಬಾಬುರಾವ್ ಚಿಂಚನಸೂರುಗೆ ಮಹತ್ವದ ಭರವಸೆ ನೀಡಿ ಮನವೊಲಿಸಿದ ಬಿಜೆಪಿ ನಾಯಕರು

ಹೌದು…ಟಿಕೆಟ್ ಆಕಾಂಕ್ಷಿಗಳ ಸಭೆ ಬಳಿಕ ಇಂದು ವೀರಶೈವ ಲಿಂಗಾಯತ ಸಮಾಜದ ಕಾಂಗ್ರೆಸ್ ನಾಯಕರು ಎರಡನೇ ಸುತ್ತಿನ ಸಭೆ ಮಾಡಿದರು. ಈ ಸಭೆಯಲ್ಲಿ 68 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದಾರೆ. ಈ ಶಾರ್ಟ್​ ಲಿಸ್ಟ್​ನೊಂದಿಗೆ ವೀರಶೈವ ಲಿಂಗಾಯತ ‘ಕೈ’ ನಾಯಕರು, ಸದ್ಯದಲ್ಲೇ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿ ಈ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದ್ರೆ, 75 ಕ್ಷೇತ್ರಗಳ ಈ ಶಾರ್ಟ್​ ಲಿಸ್ಟ್ ಯಾರದ್ದೆಲ್ಲ ಹೆಸರುಗಳಿವೆ ಎನ್ನುವುದು ಕುತೂಹಲ ಮೂಡಿಸಿದೆ.

ಇನ್ನು ರಾಜಕೀಯದಲ್ಲಿ ಜಾತಿ ಲೆಕ್ಕಾಚಾರ ಮಾಮೂಲು. ಹೀಗಾಗಿಯೇ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳು ಸಾಕಷ್ಟು ಅಳೆದು-ತೂಗಿ ಜಾತಿವಾರು ಆಧಾರದ ಮೇಲೆ ಟಿಕೆಟ್‌ಗಳನ್ನು ಹಂಚಿಕೆ ಮಾಡುತ್ತವೆ. ಜಾತ್ಯತೀತ, ಸಾಮಾಜಿಕ ನ್ಯಾಯ ಎಂಬ ಮಾತು ಎಲ್ಲ ಪಕ್ಷದಲ್ಲೂ ದೊಡ್ಡ ಪ್ರಮಾಣದಲ್ಲೇ ಕೇಳಿ ಬಂದರೂ, ಪ್ರಭಾವಿ ಸಮುದಾಯವನ್ನು ಕಡೆಗಣಿಸುವ ಧೈರ್ಯವನ್ನು ಯಾವ ಪಕ್ಷವೂ ಮಾಡಿಲ್ಲ. ಪ್ರಾಬಲ್ಯವಿರುವ ಸಮುದಾಯ ಅಥವಾ ಜಾತಿಯ ಅಭ್ಯರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಣೆ ಹಾಕಲಾಗುತ್ತದೆ. ಇಂತಹದ್ದೇ ಲೆಕ್ಕಾಚಾರ ಈ ವಿಧಾನಸಭೆ ಚುನಾವಣೆಯಲ್ಲೂ ನಡೆದಿದ್ದು, ಚುನಾವಣೆ ನಡೆಯುವುದು ಜಾತಿವಾರು ಲೆಕ್ಕಾಚಾರ ಎಂಬುದರಲ್ಲಿ ಎರಡು ಮಾತಿಲ್ಲ. ಅದಕ್ಕೆ ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಇದೆ. ಹೀಗಾಗಿ ಅಧಿಕ ಜನಸಂಖ್ಯೆ ಸಮುದಾಯದ ಅಭ್ಯರ್ಥಿಗಳಿಗೆ ಮಣೆ ಹಾಕುವ ಸಾಧ್ಯತೆಗಳಿವೆ.

Published On - 6:26 pm, Tue, 14 February 23

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!