Sign In

By signing in or creating an account, you agree with Associated Broadcasting Company's Terms & Conditions and Privacy Policy.

Virajpet Election 2023 Winner: ವಿರಾಜಪೇಟೆಯಲ್ಲಿ ಬಿಜೆಪಿಗೆ ಅನಿರೀಕ್ಷಿತ ಸೋಲು; ಗೆದ್ದುಬೀಗಿದ ಪೊನ್ನಣ್ಣ- ಹ್ಯಾಟ್ರಿಕ್ ಸರದಾರನಿಗೆ ಮುಖಭಂಗ

AS Ponnanna Wins: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ವಿರುದ್ಧ ಕಾಂಗ್ರೆಸ್​ನ ಎಎಸ್ ಪೊನ್ನಣ್ಣ ಅಲ್ಪ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Virajpet Election 2023 Winner: ವಿರಾಜಪೇಟೆಯಲ್ಲಿ ಬಿಜೆಪಿಗೆ ಅನಿರೀಕ್ಷಿತ ಸೋಲು; ಗೆದ್ದುಬೀಗಿದ ಪೊನ್ನಣ್ಣ- ಹ್ಯಾಟ್ರಿಕ್ ಸರದಾರನಿಗೆ ಮುಖಭಂಗ
ಎಎಸ್ ಪೊನ್ನಣ್ಣ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 4:24 PM

Virajpet Assembly Election Results 2023: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಗೆಲುವಿನ ನಗೆ ಕಂಡಿದೆ. ಬಿಜೆಪಿ ಅಭ್ಯರ್ಥಿ ಹಾಗು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ವಿರುದ್ಧ ಕಾಂಗ್ರೆಸ್​ನ ಎ.ಎಸ್. ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ. ಸತತ 3 ಚುನಾವಣೆಗಳಿಂದಲೂ ಗೆಲ್ಲುತ್ತಾ ಬಂದಿದ್ದ ಬೋಪಯ್ಯಗೆ ಮುಖಭಂಗವಾಗಿದೆ. ಈ ಕ್ಷೇತ್ರದಲ್ಲಿ ನಿರೀಕ್ಷಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ನಡೆದಿದೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಚುನಾವಣೆ 2023 ಫಲಿತಾಂಶ ವಿವರ

  • ಕಾಂಗ್ರೆಸ್: .ಎಸ್. ಪೊನ್ನಣ್ಣ– 83,791 ಮತಗಳು
  • ಬಿಜೆಪಿ: ಕೆ.ಜಿ. ಬೋಪಯ್ಯ– 79,500 ಮತಗಳು
  • ಜೆಡಿಎಸ್: ಮಂಜೂರ್ ಅಲಿ– 1,121 ಮತಗಳು

ಜನಸಂಘದ ಮುಖಂಡನಾಗಿ ಬಳಿಕ ಕಾಂಗ್ರೆಸ್​ಗೆ ಹೋಗಿ ಕಟ್ಟರ್ ಆರೆಸ್ಸೆಸ್ ವಿರೋಧಿಯಾಗಿ ಗುರುತಿಸಿಕೊಂಡು, ತಮ್ಮ ಪ್ರಖರ ಹೇಳಿಕೆಗಳಿಂದ ಬಿಜೆಪಿಗರಿಗೆ ತಲೆನೋವಾಗಿದ್ದ ಎ.ಕೆ. ಸುಬ್ಬಯ್ಯ ಅವರ ಮಗ ಎಎಸ್ ಪೊನ್ನಣ್ಣ ಈಗ ವಿರಾಜಪೇಟೆಯಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದಾರೆ. ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ನಿಲ್ಲಿಸಲಾಗಿದ್ದರೂ ಕಾಂಗ್ರೆಸ್ ಗೆಲುವಿಗೆ ಹಿನ್ನಡೆಯಾಗಲಿಲ್ಲ. ಜೆಡಿಎಸ್ ಅಭ್ಯರ್ಥಿ ಮಂಜೂರ್ ಅಲಿ ಗಳಿಸಿದ ಮತಗಳ ಸಂಖ್ಯೆ ಒಂದು ಸಾವಿರದ ಆಸುಪಾಸಿನಲ್ಲಿದೆ.

ಇದನ್ನೂ ಓದಿ: Madikeri Election 2023 Winner: ಮಡಿಕೇರಿ ಕ್ಷೇತ್ರದಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್​ಗೆ ಸೋಲುನುಣಿಸಿದ ಕಾಂಗ್ರೆಸ್​ನ ಡಾ. ಮಂಥರ್ ಗೌಡ

2008ರವರೆಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಮಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿತ್ತು. 2008ರಿಂದ ಮೈಸೂರುಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರ ಬಿಜೆಪಿಗೆ ಭದ್ರಕೋಟೆಯಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯ ಪ್ರತಾಪ್ ಸಿಂಹಗೆ ಈ ಕ್ಷೇತ್ರದಿಂದ ಒಳ್ಳೆಯ ಲೀಡ್ ಸಿಕ್ಕಿತ್ತು. ಬಿಜೆಪಿ ಇಲ್ಲಿ ಸತತ 4 ಬಾರಿ ಗೆದ್ದಿತ್ತು. ಕೆ.ಜಿ. ಬೋಪಯ್ಯ ಹ್ಯಾಟ್ರಿಕ್ ಭಾರಿಸಿದ್ದರು. ಇದಕ್ಕೂ ಮುಂಚಿನ 6 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ 5 ಬಾರಿ ಗೆದ್ದಿತ್ತು. 1990ಕ್ಕೆ ಮುನ್ನ ಇಲ್ಲಿ ಕಾಂಗ್ರೆಸ್​ನ ಹವಾ ಹೆಚ್ಚಿತ್ತು. ಬಳಿಕ ಕೇಸರಿ ಪಾಳಯ ಬಲಯುತವಾಗಿ ಬೆಳೆದಿತ್ತು. ಈಗ ಕೈ ಪಾಳಯ ಮತ್ತೆ ಇಲ್ಲಿ ಚಿಗುರಿದೆ.

ಇದೇ ವೇಳೆ ಕೊಡಗಿನಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದೆ. ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳು ಕೈ ಪಾಲಾಗಿವೆ. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲನುಭವಿಸಿದ್ದಾರೆ.

ಇದನ್ನೂ ಓದಿ: BSY Reaction: ಮನೆಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಈಡೇರಿಸಿ: ಕಾಂಗ್ರೆಸ್​ಗೆ ಯಡಿಯೂರಪ್ಪ ಒತ್ತಾಯ

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ