AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ ಮನವಿ ಮೇರೆಗೆ ಹೋರಾಟ ಕೈ ಬಿಟ್ಟ ಒಕ್ಕಲಿಗರ ಸಂಘ: ಜಾಥಾ ಮಾಡೇ ಮಾಡುತ್ತೇವೆ ಎಂದ ಅಧ್ಯಕ್ಷ ಉಮಾಪತಿ

ಡಿಕೆ ಶಿವಕುಮಾರ್​ ಸಿಎಂ ಆಗಬೇಕು ಎಂಬ ಉದ್ಧೆಶದಿಂದ ನಾಳೆ ಒಕ್ಕಲಿಗರ ಸಂಘದಿಂದ ಫ್ರೀಡಂ ಪಾರ್ಕ್​ ವರೆಗೂ ಹಮ್ಮಿಕೊಂಡಿದ್ದ ಜಾಥಾವನ್ನು ರದ್ದು ಮಾಡಲಾಗಿದೆ ಎಂದು ಕಿಮ್ಸ್ ಹಾಸ್ಪಿಟಲ್ ಮತ್ತು ಸಂಶೋಧನ ಕೇಂದ್ರದ ಅಧ್ಯಕ್ಷ ಉಮಾಪತಿ ತಿಳಿಸಿದರು.

ಡಿಕೆ ಶಿವಕುಮಾರ್​ ಮನವಿ ಮೇರೆಗೆ ಹೋರಾಟ ಕೈ ಬಿಟ್ಟ ಒಕ್ಕಲಿಗರ ಸಂಘ: ಜಾಥಾ ಮಾಡೇ ಮಾಡುತ್ತೇವೆ ಎಂದ ಅಧ್ಯಕ್ಷ ಉಮಾಪತಿ
ಡಿಕೆ ಶಿವಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on: May 15, 2023 | 4:54 PM

Share

ಬೆಂಗಳೂರು: ಡಿಕೆ ಶಿವಕುಮಾರ್​ ಸಿಎಂ ಆಗಬೇಕು ಎಂಬ ಉದ್ಧೆಶದಿಂದ ನಾಳೆ ಒಕ್ಕಲಿಗರ ಸಂಘದಿಂದ (Vokkaliga Association) ಫ್ರೀಡಂ ಪಾರ್ಕ್​ ವರೆಗೂ ಹಮ್ಮಿಕೊಂಡಿದ್ದ ಜಾಥಾವನ್ನು ರದ್ದು ಮಾಡಲಾಗಿದೆ ಎಂದು ಕಿಮ್ಸ್ ಹಾಸ್ಪಿಟಲ್ ಮತ್ತು ಸಂಶೋಧನ ಕೇಂದ್ರದ ಅಧ್ಯಕ್ಷ ಉಮಾಪತಿ ತಿಳಿಸಿದರು. ಡಿಕೆ ಶಿವಕುಮಾರ್​​ ಅವರು ಈ ರೀತಿ ಮಾಡಬಾರದು. ಇದು ಪಕ್ಷ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ರಿಕ್ವೆಸ್ಟ್ ಮಾಡಿದ್ದಾರೆ. ನನ್ನ ಗಮನಕ್ಕೆ ಬಾರದೆ ಯಾವುದೇ ಹೋರಾಟ ಮಾಡಬಾರದು. ಪಕ್ಷದಲ್ಲಿ ನಮ್ಮದೇ ಆದಂತಹ ತತ್ವ ಸಿದ್ದಾಂತಗಳು ಇರುತ್ತವೆ. ಅದಕ್ಕೆ ವಿರುದ್ದವಾಗಿ ನಡೆಯೋಕೆ ಸಾಧ್ಯ ಇಲ್ಲ ಅಂತ ಒಕ್ಕಲಿಗರ ಸಂಘಕ್ಕೆ ಡಿಕೆ‌ ಶಿವಕುಮಾರ್​ ಮನವಿ ಮಾಡಿದ್ದಾರೆ ಎಂದರು.

ಹೋರಾಟ ಕೈ ಬಿಟ್ಟ ಒಕ್ಕಲಿಗರ ಸಂಘ 

ಈ ಹಿನ್ನೆಲೆ ಹೋರಾಟ ರೂಪು ರೇಷೆಗಳನ್ನ ಒಕ್ಕಲಿಗರ ಸಂಘ ಕೈ ಬಿಟ್ಟಿದೆ. ಆದರೆ ನಿರ್ಮಾಲಾನಂದ ಹಾಗೂ ನಂಜಾವಧೂತ ಸ್ವಾಮೀಜಿಗಳ ತೀರ್ಮಾನದಂತೆ ಮಾಡುತ್ತೇವೆ. ಜಾಥಾ ಕೈ ಬಿಟ್ಟಿಲ್ಲ, ಆದರೆ ಮುಂದೂಡಿದ್ದೇವೆ ಅಷ್ಟೇ. ಮಾಡಬೇಡಿ ಅಂದ್ರು, ನಾವು ಮಾಡೇ ಮಾಡುತ್ತೇವೆ. ಸ್ವಾಮೀಜಿ ಹೇಳಲಿ ಅಂತ ಕಾಯುತ್ತಿದ್ದೇವೆ. ಅವರು ಹೇಳಿದ ಹಾಗೇ ನಾವು ಜಾಥಾ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಂದುವರಿದ ಸಿಎಂ ಫೈಟ್; ನನ್ನ ಬಳಿ 135 ಶಾಸಕರು ಇದ್ದಾರೆಂದ ಡಿಕೆ ಶಿವಕುಮಾರ್

ಜಾಥಾ ಮಾಡೆ ಮಾಡುತ್ತೇವೆ: ಉಮಾಪತಿ

ಇವತ್ತು ಸಂಜೆ ನಾವು ಸ್ವಾಮಿಜಿಗಳೊಂದಿಗೆ ಚರ್ಚೆ ನಡೆಸಲಿದ್ದೇವೆ. ನಾಳೆ ಸಂಜೆ ಅಥವಾ ನಾಡಿದ್ದು ಜಾಥಾ ನಡೆಸೆ ನಡೆಸುತ್ತೇವೆ. ಸಮಯದ ಬಗ್ಗೆ ತಿಳಿಸುತ್ತೇವೆ ಎಂದರು. ಫ್ರೀಡಂ ಪಾರ್ಕ್ ಬಳಿ ಸಮಾವೇಶ ಮಾಡಲು ಈ ಮುಂಚೆ ತಿರ್ಮಾನಿಸಲಾಗಿತ್ತು. ಜಾಥಾ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಭಾಗಿ ಆಗುತ್ತಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಗೆ ಕಟೀಲ್, ಬಿಎಲ್​ ಸಂತೋಷ್ ಹೊಣೆಗಾರರಲ್ಲ: ಬಿವೈ ವಿಜಯೇಂದ್ರ

ಸಿದ್ದರಾಮಯ್ಯ ಕೊಡುಗೆ ದೊಡ್ಡದಿದೆ. ಅವಗರಿಗೆ ಅವಕಾಶ ಸಿಕ್ಕಿದೆ ಡಿಕೆ ಶಿವಕುಮಾರ್​ ಅವರಿಗೆ ಸಿಗಲಿ. ನಮ್ಮ ಸಂಘದಿಂದ ಡಿಕೆ ಶಿವಕುಮಾರ್​ ಪರ ಧ್ವನಿ ಎತ್ತುತ್ತೇವೆ. ಇವತ್ತು ಡಿಕೆ ಶಿವಕುಮಾರ್​ ಇಡಿ ಬಲೆಯಲ್ಲಿ ಸಿಲುಕಿದ್ದಾರೆ, ತುಂಬಾ ಕಷ್ಟ ಪಟ್ಟಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ