AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಫ್ರಂ ಹೋಮ್ ಯಶಸ್ವಿ; ಎಷ್ಟು ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ? ಇಲ್ಲಿದೆ ಮಾಹಿತಿ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಅವಕಾಶ ಬಹುತೇಕ ಯಶಸ್ವಿಯಾಗಿದೆ.

ವೋಟ್ ಫ್ರಂ ಹೋಮ್ ಯಶಸ್ವಿ; ಎಷ್ಟು ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ? ಇಲ್ಲಿದೆ ಮಾಹಿತಿ
ಮನೆಯಿಂದಲೇ ಮತದಾನ
ಗಣಪತಿ ಶರ್ಮಾ
|

Updated on: May 06, 2023 | 11:11 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು (vote-from-home) ಚುನಾವಣಾ ಆಯೋಗ (Election Commission) ನೀಡಿರುವ ಅವಕಾಶ ಬಹುತೇಕ ಯಶಸ್ವಿಯಾಗಿದೆ. ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಮೇ 4ರ ವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರ ಪೈಕಿ ಶೇ 92ರಷ್ಟು ಮಂದಿ ಮತದಾನ ಮಾಡಿದ್ದಾರೆ. ಒಟ್ಟು 80,250 ಮಂದಿ ಮನೆಯಿಂದಲೇ ಮತದಾನ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದರು ಎಂದು ಆಯೋಗ ಹೇಳಿದೆ.

80 ವರ್ಷ ಮೇಲ್ಪಟ್ಟ 80,250 ಮಂದಿ ಹಾಗೂ 19,279 ಅಂಗವಿಕಲರು ಮನೆಯಿಂದಲೇ ಮತದಾನ ಆಯ್ಕೆ ಮಾಡಿಕೊಂಡಿದ್ದರು.

ಏಪ್ರಿಲ್ 29ರಿಂದ ಮನೆಯಿಂದಲೇ ಮತದಾನ ಆರಂಭವಾಗಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಮತ ಪಡೆದುಕೊಂಡು ವಾಪಸಾಗುತ್ತಿದ್ದಾರೆ. 80 ವರ್ಷ ಮೇಲ್ಪಟ್ಟ 80,250 ಮಂದಿ ಪೈಕಿ ಈವರೆಗೆ 73,743 ಮಂದಿ ಮತ ಚಲಾಯಿಸಿದ್ದಾರೆ. ಇದರೊಂದಿಗೆ ಶೇ 91.89ರಷ್ಟು ಜನ ಮತದಾನ ಮಾಡಿದಂತಾಗಿದೆ.

ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿಕೊಂಡಿದ್ದ 19,279 ಅಂಗವಿಕಲರ ಪೈಕಿ 17,943 ಮಂದಿ ಮೇ 4ರ ವರೆಗೆ ಮತ ಚಲಾಯಿಸಿದ್ದಾರೆ. ಇದರೊಂದಿಗೆ ಶೇ 93.7ರಷ್ಟು ಮತದಾನವಾದಂತಾಗಿದೆ.

ಒಟ್ಟಾರೆಯಾಗಿ ಶೇ 92.12ರಷ್ಟು ಮತದಾನವಾದಂತಾಗಿದೆ. ಮನೆಯಿಂದಲೇ ಮತದಾನ ಇಂದು (ಮೇ 6) ಸಂಜೆಗೆ ಕೊನೆಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: Vote From Home: ರಾಯಚೂರು; ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಮೃತಪಟ್ಟ 82ರ ವೃದ್ಧೆ

ಮನೆಯಿಂದಲೇ ಮತದಾನದ ಮೂಲಕ ಪಡೆಯಲಾಗಿರುವ ಮತಗಳನ್ನು ಸ್ಟ್ರಾಂಗ್​ ರೂಮ್​​ಗಳಲ್ಲಿ ಭದ್ರವಾಗಿ ಇರಿಸಲಾಗಿದ್ದು, ಮೇ 13ರಂದು ಮತ ಎಣಿಕೆ ದಿನ ತೆರೆಯಲಾಗುವುದು ಎಂದು ಆಯೋಗ ಹೇಳಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ಅಯೋಗದ ಸಿಬ್ಬಂದಿ ಅವರ ಮನೆ ಬಾಗಿಲಿಗೆ ತೆರಳಿ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಮತದಾನದ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಗುತ್ತದೆ. ಮತದಾನದ ನಂತರ ಮತ ಪೆಟ್ಟಿಗೆಗಳನ್ನು ಈಗಾಗಲೇ ಮೀಸಲಿಟ್ಟಿರುವ ಸ್ಟ್ರಾಂಗ್ ರೂಮ್​​ಗೆ ಶಿಪ್ಟ್ ಮಾಡಲಾಗುತ್ತದೆ. ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಲಾಗುತ್ತದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ