ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ, ಹೇಗೆ ಪ್ರಕ್ರಿಯೆ?

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡಲು ಕೇಂದ್ರು ಚುನಾವಣಾ ಆಯೋಗ ಅವಕಾಶ ನೀಡಿದೆ. ಹಾಗಾದ್ರೆ, ಮನೆಯಲ್ಲಿ ಮತದಾನ ಪ್ರಕ್ರಿಯೆ ಹೇಗಿರಲಿದೆ ಎನ್ಜುವ ಮಾಹಿತಿ ಇಲ್ಲಿದೆ.

ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ, ಹೇಗೆ ಪ್ರಕ್ರಿಯೆ?
ಸಾಂದರ್ಭಿಕ ಚಿತ್ರ
Follow us
|

Updated on:Mar 29, 2023 | 12:41 PM

ನವದೆಹಲಿ/ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆರಯಲಿದ್ದು,  ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.  ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಮೂಲಕ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Karnataka Election 2023 Schedule: ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ, 10ರಂದು ಮತದಾನ, 13ಕ್ಕೆ ಫಲಿತಾಂಶ: ಚುನಾವಣಾ ಆಯೋಗ

ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದ ಮತದಾನ ಹೇಗೆ?

  •  ಚುನಾವಣೆ ಆಯೋಗದ ವೆಪ್‌ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಕಡ್ಡಾಯ.
  •  ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ
  •  ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ
  •  ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ
  •  ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ

ಕರ್ನಾಟಕ ಚುನಾವಣೆಯ ಪ್ರಮುಖ ದಿನಾಂಕಗಳು

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇನ್ನ ನಾಮಪತ್ರ ಸಲ್ಲಿಕೆ ಏಪ್ರಿಲ್‌ 13 ರಂದೇ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಏಪ್ರಿಲ್‌ 24 ಕಡೆ ದಿನವಾಗಿದೆ.

Published On - 12:14 pm, Wed, 29 March 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ