AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐವರು ಮುಸ್ಲಿಂ ಶಾಸಕರಿಗೆ ಮಂತ್ರಿ ಹಾಗೂ ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ

ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಹುಮತ ಬಂದ ಹಿನ್ನೆಲೆ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಮುಸ್ಲಿಂ ಶಾಸಕರಿಗೆ ಮಂತ್ರಿಗಿರಿ ಹಾಗೂ ಡಿಸಿಎಂ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಒತ್ತಾಯಿಸಿದ್ದಾರೆ.

ಐವರು ಮುಸ್ಲಿಂ ಶಾಸಕರಿಗೆ ಮಂತ್ರಿ ಹಾಗೂ ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ
ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಶಾಫಿ ಸಅದಿ
Rakesh Nayak Manchi
Rakesh Nayak Manchi|

Updated on: May 14, 2023 | 4:25 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ (Karnataka Assembly Elections 2023) ಬಹುಮತ ಬಂದ ಹಿನ್ನೆಲೆ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಮುಸ್ಲಿಂ ಶಾಸಕರಿಗೆ ಮಂತ್ರಿಗಿರಿ ಹಾಗೂ ಡಿಸಿಎಂ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ (Shafi Saadi) ಬೇಡಿಕೆ ಮುಂದಿಟ್ಟಿದ್ದಾರೆ. ರಾಜ್ಯದಲ್ಲಿ ಶೇ 90 ರಷ್ಟು ಮುಸ್ಲಿಮರಿದ್ದಾರೆ. ಅದರಲ್ಲಿ ಶೇ 88 ರಷ್ಟು ಮುಸ್ಲಿಮರು ಕಾಂಗ್ರೆಸ್ (Congress) ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಹೇಳಿದರು.

224 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಮುಸ್ಲಿಮರು ಎಲೆಕ್ಷನ್​ಗೆ ನಿಂತಿದ್ದರು. ಅದರಲ್ಲಿ 9 ಜನರು ಗೆದ್ದಿದ್ದಾರೆ. ಮಾತ್ರವಲ್ಲದೆ, ರಾಜ್ಯದಲ್ಲಿ 73 ಶಾಸಕರು ಗೆಲ್ಲಲು ಮುಸ್ಲಿಮರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿದ ಶಾಫೀ ಸಅದಿ, ನಾವು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಲು ಎಲ್ಲಾ ಮಸೀದಿಗಳಲ್ಲಿ ಅಭಿಯಾನ, ಜಾಗೃತಿ ಮಾಡಿದ್ದೆವು ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಬಹುಮತ; ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು

ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐದು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹಾಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ನೀಡಬೇಕು. ನಾವು ಮುಖ್ಯಮಂತ್ರಿ ಸ್ಥಾನ ಕೇಳುತ್ತಿಲ್ಲ, ಕರ್ನಾಟಕ ಇತಿಹಾಸದಲ್ಲಿ ಮುಸ್ಲಿಂ ಮುಖ್ಯಮಂತ್ರಿ ಆಗಿಲ್ಲ ಎಂದರು.

ನಮ್ಮಲ್ಲಿ ಒಂಬತ್ತು ಜನ ಮುಸ್ಲಿಂ ಶಾಸಕರಿದ್ದಾರೆ ಅದರಲ್ಲಿ ಯಾರು ಸೂಕ್ತ ಎಂದು ನೋಡಿಕೊಂಡು ಕಾಂಗ್ರೆಸ್ ಪಾರ್ಟಿ ಡಿಸಿಎಂ ಸ್ಥಾನ ನೀಡಲಿ. ಒಂಬತ್ತು ಜನರಲ್ಲಿ ಯಾರಿಗಾದರೂ ಕೊಡಲಿ ಎಂದು ಆಗ್ರಹ ಮಾಡುತ್ತೇವೆ. ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಮುಸ್ಲಿಂ ಮುಖಂಡರು ಜೆಡಿಎಸ್​ ಪಕ್ಷಕ್ಕೆ ಹೋಗಿದ್ದರು. ಆದರೂ ಮುಸ್ಲಿಮರು ಶೇ 88 ರಷ್ಟು ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಹಾಕಿದ್ದಾರೆ ಎಂದರು. ಹಿಜಾಬ್ ಮತ್ತು ಸಾಕಷ್ಟು ವಿಚಾರದಲ್ಲಿ ಮುಸ್ಲಿಮರು ಭಯಬೀತರಾಗಿದ್ದರು. ಆ ಹಿನ್ನೆಲೆಯಲ್ಲಿ ಎಲ್ಲಾ ಮುಸ್ಲಿಮರು ಕಾಂಗ್ರೆಸ್ ಪಾರ್ಟಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್