AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಐಟಿ ಅಧಿಕಾರಿಗಳ ದಾಳಿ, ಮನೆಯಾಂಗಳದ ಗಿಡದಲ್ಲಿಟ್ಟಿದ್ದ 1 ಕೋಟಿ ರೂ. ಹಣ ಪತ್ತೆ

ಕಾಂಗ್ರೆಸ್​ ಅಭ್ಯರ್ಥಿಯ ಸಹೋದರ ನಿವಾಸದಲ್ಲಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಗಿಡದಲ್ಲಿ ನೇತಾಡುತ್ತಿದ್ದ 1 ಕೋಟಿ ರೂ ಹಣದ ಬ್ಯಾಗ್​ ಅನ್ನು ಪತ್ತೆ ಮಾಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 03, 2023 | 1:19 PM

Share

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka assembly elections 2023) ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹೆಚ್ಚಿನ ಕಣ್ಗಾವಲು ಇರಿಸಿದೆ. ಅಕ್ರಮಗಳನ್ನು ತಡೆಗಟ್ಟಲು ಆದಾಯ ತೆರೆಗೆ ಅಧಿಕಾರಿಗಳು ಸಹ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಕಳ್ಳರು ಚಾಪೆ ಕೆಳಗೆ ನುಗ್ಗಿದ್ದರೆ, ಅಧಿಕಾರಿಗಳು ರಂಗೋಲಿ ಕೆಳಗೆ ನುಗ್ಗಿ ಇದುವರೆಗೆ ಕೋಟ್ಯಾಂತರ ರೂ. ಹಣ ಹಾಗೂ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅದರಂತೆ ಮೈಸೂರಿನಲ್ಲಿ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಬಚ್ಚಿಟ್ಟಿದ್ದ ಕಂತೆ ಕಂತೆ ಹಣವನ್ನು ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್ ಅವಘಡದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್, ​ಜ್ಯೋತಿಷಿ ಹೇಳಿದ್ದೇನು?

ಹೌದು….ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದು, ಈ ವೇಳೆ ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಬಚ್ಚಿಟ್ಟಿದ್ದ ಹಣವನ್ನು ಪತ್ತೆ ಹಚ್ಚಿದ್ದಾರೆ. ಗಿಡದಲ್ಲಿ ಬಚ್ಚಿಟ್ಟಿದ್ದ ಮಾವಿನ ಹಣ್ಣಿನ ಬಾಕ್ಸ್​ ಅದನ್ನು ತೆಗೆದು ಪರಿಶೀಲಿಸಿದ ಅಧಿಕಾರಿಗಳಿಗೆ ಕಂತೆ  ಕಂತೆ ಹಣ ನೋಡಿ ಶಾಕ್​ ಆಗಿದೆ. ಬಳಿಕ ಹಣ ಎಣಿಕೆ ಮಾಡಿದಾಗ ಬರೋಬ್ಬರಿ ಒಂದು ಕೋಟಿ ರೂಪಾಯಿ ಪತ್ತೆಯಾಗಿದ್ದು,  ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸಹೋದರ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಅಶೋಕ್ ರೈ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.ಈ ಮೊದಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದ್ರೆ, ಟಿಕೆಟ್​ ಕೈತಪ್ಪಿದ್ದರಿಂದ ಅಶೋಕ್​ ರೈ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಹಣವನ್ನು ಮನೆಯಲ್ಲಿಟ್ಟರೆ ಚುನಾವಣಾ ಅಧಿಕಾರಿಗಳು ದಾಳಿ  ಮಾಡಿದಾಗ ಸಿಗಬಹುದೆಂದು  ಮನೆಯಾಂಗಳದ ಗಿಡದಲ್ಲಿ ಇಟ್ಟಿದ್ದಾರೆ .  ಮೊದಲೇ ಅರಿತು ಯಾರಿಗೂ ಈ ಪ್ಲಾನ್ ಮಾಡಿ ಚಾಪೆ ಕೆಳಗೆ ತೂರಿದ್ದರು. ಆದ್ರೆ, ಐಟಿ ಅಧಿಕಾರಿಗಳು ರಂಗೋಲಿ ಕೆಳಗೆ ತೂರಿ ಬಚ್ಚಿಟ್ಟಿದ್ದ ಹಣವನ್ನು ವಶಕ್ಕೆ ಪಡೆದುಕೊಮಡಿದ್ದಾರೆ.  ಇನ್ನು ಮನೆಯಾಂಗಳದ ಗಿಡದಲ್ಲಿ ಬಚ್ಚಿಟ್ಟಿದ್ದ ಹಣ ಬ್ಯಾಗ್​ಅನ್ನು ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದು, ಹಣ ಎಣಿಕೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಬಾಕ್ಸ್​​ನಿಂದ ಅಧಿಕಾರಿಗಳು ಹಣ ತೆಗೆಯುತ್ತಿರುವ ವಿಡಿಯೋ ನೋಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ