AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪಕ್ಷ ಅಧಿಕಾರವಿದ್ದಾಗ ಹಲವು ಭಾಗ್ಯಗಳನ್ನ ಜನರಿಗೆ ನೀಡಿದೆ. ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ: ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ (ಸಂಗ್ರಹ ಚಿತ್ರ)
Rakesh Nayak Manchi
|

Updated on: May 07, 2023 | 9:26 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರವಿದ್ದಾಗ ಹಲವು ಭಾಗ್ಯಗಳನ್ನ ಜನರಿಗೆ ನೀಡಿದ್ದು, ಇನ್ನೂ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ. ಎರಡೂವರೆ ಲಕ್ಷ ಸರ್ಕಾರಿ ನೌಕರಿಯನ್ನು ಒಂದು ವರ್ಷದಲ್ಲಿ ಕಾಂಗ್ರೆಸ್ (Congress) ಸರ್ಕಾರ ತುಂಬಲಿದೆ. ನಿಮ್ಮ ಅಗತ್ಯ ವಸ್ತುಗಳನ್ನು ನಿಮ್ಮ ಮನೆಗೆ ತಲುಪಿಸುವ ಹಲವು ಉದ್ಯೋಗಿಗಳನ್ನ ಯೋಜನೆ ಜಾರಿಗೆ ತರಲಿದ್ದೇವೆ ಎಂದರು.

ಟ್ಯಾಕ್ಸಿ, ಆಟೋ ಚಾಲಕರಿಗೆ 50 ಜನರ ಗುಂಪು ಮಾಡಿ ಆರ್ಥಿಕ ಸಬಲರನ್ನಾಗಿ ಮಾಡಲು ಯೋಜನೆ ರೂಪಿಸಲಾಗುವುದು, ರಾಜ್ಯದಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುವ ನೌಕರರಿಗೆ ಕನಿಷ್ಟ ಸಂಬಳ ಸಿಗುವಂತೆ ಯೋಜನೆ ರೂಪಿಸುತ್ತೇವೆ, ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಸಣ್ಣ ಪ್ರಮಾಣದ ಉದ್ಯಮಿ, ಉದ್ಯಮಗಳಿಗೆ ಸಹಕಾರ ನೀಡಬೇಕಿದೆ. ಗುಡಿಕೈಗಾರಿಕೆಗಳನ್ನ, ಮಧ್ಯಮ ಸ್ಥರದ ಉದ್ಯೋಗಗಳನ್ನ, ಅಭಿವೃದ್ಧಿ ಯತ್ತ ಕೊಂಡ್ಯೋಯ್ಯಬೇಕಿದೆ. ಭಾರತದಲ್ಲಿ ಸಣ್ಣ, ಮಧ್ಯಮ ಉದ್ಯಮಗಳ ಬೆನ್ನು ಮೂಳೆ ಸರ್ಕಾರ ಮುರಿದಿದೆ. ಈ ನೀತಿ ಕಾರಣದಿಂದ ನಿರುದ್ಯೋಗ ಹೆಚ್ಚಾಗಿದೆ. ಸಣ್ಣ, ಮಧ್ಯಮ ಸ್ಥರ ಉದ್ಯೋಗ ಬಲಗೊಳಿಸಲು ಆರ್ಥಿಕ ಬಲ ತುಂಬುವುದು ನಮ್ಮ ಆದ್ಯತೆಯಾಗಿದೆ ಎಂದರು.

ಇದನ್ನೂ ಓದಿ: ಗಾಂಧಿ ವಂಶಕ್ಕೆ ರಾಮನ ಬಗ್ಗೆ ಅಲರ್ಜಿ ಇದೆ ಎಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಬೀದರ್​ನಿಂದ ಚಾಮರಾಜನಗರದವರೆಗೆ, ಮೈಸೂರು, ಬಳ್ಳಾರಿ, ಹುಬ್ಬಳ್ಳಿಯಿಂದ ಐಟಿ ಕಾರಿಡರ್ ನಿರ್ಮಾಣವಾಗಬೇಕು. ಕರ್ನಾಟಕದಲ್ಲಿ ಆಟೋಮೊಬೈಲ್, ಎಲೆಕ್ಟ್ರಾನಿಕ್ ಉದ್ಯಮಿ ನಿರ್ಮಣಕ್ಕೆ ಆದ್ಯತೆ ನೀಡುವ ಉದ್ದೇಶ ನಮ್ಮದಾಗಿದೆ. ನಮ್ಮ ಸರ್ಕಾರ ಎಂದು ಹೆಮ್ಮೆ ಪಡುವ ಸರ್ಕಾರ ನೀಡುವ ಇರಾದೆ ಹೊಂದಿದ್ದೇವೆ. ಮುಂದೆ ಕರ್ನಾಟಕದ ಸರ್ಕಾರ ನಿಮಗೆ ಬದ್ಧವಾಗಿರಲಿದೆ, ನಿಮ್ಮೊಟ್ಟಿಗೆ ಇರಲಿದೆ ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಆರ್ ಕೆ ರಮೇಶ್ ಹಾಗೂ ಬೊಮ್ಮನಹಳ್ಳಿ ಕ್ಷೇತ್ರದ ಉಮಾಪತಿ ಗೌಡಗೆ ಮತ ನೀಡುವಂತೆ ವಿನಂತಿ ಮಾಡಿದ ಪ್ರಿಯಾಂಕಾ ಗಾಂಧಿ, 40 ಪರ್ಸೆಂಟ್ ಸರ್ಕಾರದ ಬದಲಾಗಿ ಜನಪರ ಸರ್ಕಾರಕ್ಕೆ ಕಾಂಗ್ರೆಸ್ ಗೆವಮತ ನೀಡುವಂತೆ ಮನವಿ ಮಾಡಿದರು.

ಅನ್ನಭಾಗ್ಯ, ಕ್ಷೀರ ಭಾಗ್ಯ, ವಿದ್ಯಾ ಭಾಗ್ಯ, ಇಂದಿರಾ ಕ್ಯಾಂಟೀನ್ ನಂತ ಹಲವು ಜನಪರ ಯೋಜನೆಗಳು ನಿಮ್ಮ ಮುಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನ ಹೊಂದಿದೆ ಎಂದು ಹೇಳಿದ ಪ್ರಿಯಾಂಕಾ ಗಾಂಧಿ, ತಮ್ಮ ಪಕ್ಷದ ಉಚಿತ ಘೋಷಣೆಗಳ ಬಗ್ಗೆ ಮುಂದಿಟ್ಟರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ