AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪಕ್ಷ ಅಧಿಕಾರವಿದ್ದಾಗ ಹಲವು ಭಾಗ್ಯಗಳನ್ನ ಜನರಿಗೆ ನೀಡಿದೆ. ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ: ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ (ಸಂಗ್ರಹ ಚಿತ್ರ)
Rakesh Nayak Manchi
|

Updated on: May 07, 2023 | 9:26 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರವಿದ್ದಾಗ ಹಲವು ಭಾಗ್ಯಗಳನ್ನ ಜನರಿಗೆ ನೀಡಿದ್ದು, ಇನ್ನೂ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ. ಎರಡೂವರೆ ಲಕ್ಷ ಸರ್ಕಾರಿ ನೌಕರಿಯನ್ನು ಒಂದು ವರ್ಷದಲ್ಲಿ ಕಾಂಗ್ರೆಸ್ (Congress) ಸರ್ಕಾರ ತುಂಬಲಿದೆ. ನಿಮ್ಮ ಅಗತ್ಯ ವಸ್ತುಗಳನ್ನು ನಿಮ್ಮ ಮನೆಗೆ ತಲುಪಿಸುವ ಹಲವು ಉದ್ಯೋಗಿಗಳನ್ನ ಯೋಜನೆ ಜಾರಿಗೆ ತರಲಿದ್ದೇವೆ ಎಂದರು.

ಟ್ಯಾಕ್ಸಿ, ಆಟೋ ಚಾಲಕರಿಗೆ 50 ಜನರ ಗುಂಪು ಮಾಡಿ ಆರ್ಥಿಕ ಸಬಲರನ್ನಾಗಿ ಮಾಡಲು ಯೋಜನೆ ರೂಪಿಸಲಾಗುವುದು, ರಾಜ್ಯದಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುವ ನೌಕರರಿಗೆ ಕನಿಷ್ಟ ಸಂಬಳ ಸಿಗುವಂತೆ ಯೋಜನೆ ರೂಪಿಸುತ್ತೇವೆ, ಹೊಸ ಹೊಸ ಯೋಜನೆಗಳ ಜಾರಿಗೆ ತರಲು ಉತ್ಸುಕರಾಗಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಸಣ್ಣ ಪ್ರಮಾಣದ ಉದ್ಯಮಿ, ಉದ್ಯಮಗಳಿಗೆ ಸಹಕಾರ ನೀಡಬೇಕಿದೆ. ಗುಡಿಕೈಗಾರಿಕೆಗಳನ್ನ, ಮಧ್ಯಮ ಸ್ಥರದ ಉದ್ಯೋಗಗಳನ್ನ, ಅಭಿವೃದ್ಧಿ ಯತ್ತ ಕೊಂಡ್ಯೋಯ್ಯಬೇಕಿದೆ. ಭಾರತದಲ್ಲಿ ಸಣ್ಣ, ಮಧ್ಯಮ ಉದ್ಯಮಗಳ ಬೆನ್ನು ಮೂಳೆ ಸರ್ಕಾರ ಮುರಿದಿದೆ. ಈ ನೀತಿ ಕಾರಣದಿಂದ ನಿರುದ್ಯೋಗ ಹೆಚ್ಚಾಗಿದೆ. ಸಣ್ಣ, ಮಧ್ಯಮ ಸ್ಥರ ಉದ್ಯೋಗ ಬಲಗೊಳಿಸಲು ಆರ್ಥಿಕ ಬಲ ತುಂಬುವುದು ನಮ್ಮ ಆದ್ಯತೆಯಾಗಿದೆ ಎಂದರು.

ಇದನ್ನೂ ಓದಿ: ಗಾಂಧಿ ವಂಶಕ್ಕೆ ರಾಮನ ಬಗ್ಗೆ ಅಲರ್ಜಿ ಇದೆ ಎಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಬೀದರ್​ನಿಂದ ಚಾಮರಾಜನಗರದವರೆಗೆ, ಮೈಸೂರು, ಬಳ್ಳಾರಿ, ಹುಬ್ಬಳ್ಳಿಯಿಂದ ಐಟಿ ಕಾರಿಡರ್ ನಿರ್ಮಾಣವಾಗಬೇಕು. ಕರ್ನಾಟಕದಲ್ಲಿ ಆಟೋಮೊಬೈಲ್, ಎಲೆಕ್ಟ್ರಾನಿಕ್ ಉದ್ಯಮಿ ನಿರ್ಮಣಕ್ಕೆ ಆದ್ಯತೆ ನೀಡುವ ಉದ್ದೇಶ ನಮ್ಮದಾಗಿದೆ. ನಮ್ಮ ಸರ್ಕಾರ ಎಂದು ಹೆಮ್ಮೆ ಪಡುವ ಸರ್ಕಾರ ನೀಡುವ ಇರಾದೆ ಹೊಂದಿದ್ದೇವೆ. ಮುಂದೆ ಕರ್ನಾಟಕದ ಸರ್ಕಾರ ನಿಮಗೆ ಬದ್ಧವಾಗಿರಲಿದೆ, ನಿಮ್ಮೊಟ್ಟಿಗೆ ಇರಲಿದೆ ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಆರ್ ಕೆ ರಮೇಶ್ ಹಾಗೂ ಬೊಮ್ಮನಹಳ್ಳಿ ಕ್ಷೇತ್ರದ ಉಮಾಪತಿ ಗೌಡಗೆ ಮತ ನೀಡುವಂತೆ ವಿನಂತಿ ಮಾಡಿದ ಪ್ರಿಯಾಂಕಾ ಗಾಂಧಿ, 40 ಪರ್ಸೆಂಟ್ ಸರ್ಕಾರದ ಬದಲಾಗಿ ಜನಪರ ಸರ್ಕಾರಕ್ಕೆ ಕಾಂಗ್ರೆಸ್ ಗೆವಮತ ನೀಡುವಂತೆ ಮನವಿ ಮಾಡಿದರು.

ಅನ್ನಭಾಗ್ಯ, ಕ್ಷೀರ ಭಾಗ್ಯ, ವಿದ್ಯಾ ಭಾಗ್ಯ, ಇಂದಿರಾ ಕ್ಯಾಂಟೀನ್ ನಂತ ಹಲವು ಜನಪರ ಯೋಜನೆಗಳು ನಿಮ್ಮ ಮುಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನ ಹೊಂದಿದೆ ಎಂದು ಹೇಳಿದ ಪ್ರಿಯಾಂಕಾ ಗಾಂಧಿ, ತಮ್ಮ ಪಕ್ಷದ ಉಚಿತ ಘೋಷಣೆಗಳ ಬಗ್ಗೆ ಮುಂದಿಟ್ಟರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ