AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ನಿಷೇಧ ಪ್ರಸ್ತಾಪಿಸಿರುವ ಕಾಂಗ್ರೆಸ್​ ವಿರುದ್ಧ ವ್ಯಾಪಕ ಆಕ್ರೋಶ: ಈ ಬಗ್ಗೆ ಅಧ್ಯಕ್ಷ ಖರ್ಗೆ ಹೇಳಿದ್ದಿಷ್ಟು

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖ ಬಗ್ಗೆ, ಬಿಜೆಪಿ ಹೇಳಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದು‘ ಪ್ರತಿ ಪಕ್ಷದವರು ಸಹಜವಾಗಿ ಒಬ್ಬರ ಮೇಲೆ ಒಬ್ಬರು ಹೇಳ್ತಾರೆ, ಅದೇ ರೀತಿ ಕಾಂಗ್ರೆಸ್ ಪ್ರಣಾಳಿಕೆ ಜಾರಿಮಾಡಲು ಆಗಲ್ಲವೆಂದು ಹೇಳುತ್ತಿದ್ದಾರೆ. ಆದ್ರೆ, ಕಳೆದ ಬಾರಿ ನಾವು ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿದ್ದೆವೆ ಎಂದರು.

ಬಜರಂಗದಳ ನಿಷೇಧ ಪ್ರಸ್ತಾಪಿಸಿರುವ ಕಾಂಗ್ರೆಸ್​ ವಿರುದ್ಧ ವ್ಯಾಪಕ ಆಕ್ರೋಶ: ಈ ಬಗ್ಗೆ ಅಧ್ಯಕ್ಷ ಖರ್ಗೆ ಹೇಳಿದ್ದಿಷ್ಟು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಿರಣ್ ಹನುಮಂತ್​ ಮಾದಾರ್
|

Updated on: May 03, 2023 | 12:47 PM

Share

ಕಲಬುರಗಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ (Bajrang Dal) ನಿಷೇಧ ಉಲ್ಲೇಖ, ಈ ಬಗ್ಗೆ ಬಿಜೆಪಿ ಹೇಳಿಕೆ ವಿಚಾರವಾಗಿ ಕಲಬುರಗಿ ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಮಾತನಾಡಿದ್ದು‘ ಪ್ರತಿ ಪಕ್ಷದವರು ಸಹಜವಾಗಿ ಒಬ್ಬರ ಮೇಲೆ ಒಬ್ಬರು ಹೇಳುತ್ತಾರೆ, ಅದೇ ರೀತಿ ಕಾಂಗ್ರೆಸ್ ಪ್ರಣಾಳಿಕೆ ಜಾರಿಮಾಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಕಳೆದ ಬಾರಿ ಕೂಡ ಇದೇ ರೀತಿ ಹೇಳಿದ್ದರು. ಆದ್ರೆ, ಕಳೆದ ಬಾರಿ ನಾವು ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿದ್ದೆವು. ಬಜೆಟ್ ಅನುದಾನ, ಆದಾಯ ನೋಡಿಯೇ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಅವರು ಹೇಳುತ್ತಾ ಹೋಗ್ತಾರೆ, ಆದ್ರೆ, ನಾವು ಮಾಡಿ ತೋರಿಸುತ್ತಿದ್ದೇವೆ ಎಂದರು.

ಇನ್ನು ಬಜರಂಗದಳ ಬ್ಯಾನ್ ವಿಚಾರ ‘ ಅದರ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಪನೆ ನೀಡಿದ್ದಾರೆ. ಹೀಗಾಗಿ ಅದರ ಬಗ್ಗೆ ಚರ್ಚೆ ಮಾಡಲು ಹೋಗಲ್ಲ. ರಾತ್ರಿ ಎಲ್ಲರೂ ಮಟನ್ ತಿಂತಾರೆ, ಹಗಲೊತ್ತಿನಲ್ಲಿ ನಾನ್ ವೆಜಟರಿಯನ್​ಗೆ ಬೈಯ್ತಾರೆ. ಈ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಾರೆ. ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡಿದ್ರೆ ಅಭಿವೃದ್ಧಿ ಆಗಲ್ಲ. ಬಿಜೆಪಿ ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟು ಪ್ರಚಾರ ಮಾಡುತ್ತೆ, ಜಗಳ ಹಚ್ಚಿಯೇ ಓಟ್ ತೆಗದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿಗೆ ​ಹೇಳಿದರು.

ಇದನ್ನೂ ಓದಿ:ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಚುನಾವಣಾ ಆಯೋಗ ಕೆಂಡ; ರಾಜಕೀಯ ಮುಖಂಡರಿಗೆ ನೀಡಿತು ಖಡಕ್ ಎಚ್ಚರಿಕೆ

ಅವಕಾಶ ಕೊಟ್ಟು ನೋಡಿ ಹೇಗೆ ಪ್ರಣಾಳಿಕೆ ಜಾರಿ ಮಾಡ್ತೇವೆ

ಕಾಂಗ್ರೆಸ್​​ ಪ್ರಣಾಳಿಕೆಯಲ್ಲಿ ಜನಪರ ಘೋಷಣೆಗಳ ಕುರಿತು ‘ಪರೀಕ್ಷೆಗೆ ಮೊದಲೇ ಪರೀಕ್ಷೆ ಹೇಗೆ ಬರೆಯುತ್ತೀರಾ ಅಂದ್ರೆ ಹೇಗೆ? ಅವಕಾಶ ಕೊಟ್ಟು ನೋಡಿ ಹೇಗೆ ಪ್ರಣಾಳಿಕೆ ಜಾರಿ ಮಾಡ್ತೇವೆ ಅಂತ ಗೊತ್ತಾಗುತ್ತೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಬಿಜೆಪಿ ಏನು ಮಾಡಿಲ್ಲ. ಆದರೆ ಈಗ ಪ್ರಚಾರಕ್ಕೆ ಬರುತ್ತಿದ್ದಾರೆ. ನಾವು ಮಂಜೂರು ಮಾಡಿದ್ದ ರೈಲಿಗೆ ಬಣ್ಣ ಬಳಿದು ಹೊಸ ರೈಲು ಅಂದ್ರು,ಕೆಲವರು ಪ್ರಚಾರದಿಂದಲೇ ಎಲ್ಲ ಸಿಗುತ್ತೆ ಅಂದುಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ