AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ನಿಷೇಧ ಪ್ರಸ್ತಾಪಿಸಿರುವ ಕಾಂಗ್ರೆಸ್​ ವಿರುದ್ಧ ವ್ಯಾಪಕ ಆಕ್ರೋಶ: ಈ ಬಗ್ಗೆ ಅಧ್ಯಕ್ಷ ಖರ್ಗೆ ಹೇಳಿದ್ದಿಷ್ಟು

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖ ಬಗ್ಗೆ, ಬಿಜೆಪಿ ಹೇಳಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದು‘ ಪ್ರತಿ ಪಕ್ಷದವರು ಸಹಜವಾಗಿ ಒಬ್ಬರ ಮೇಲೆ ಒಬ್ಬರು ಹೇಳ್ತಾರೆ, ಅದೇ ರೀತಿ ಕಾಂಗ್ರೆಸ್ ಪ್ರಣಾಳಿಕೆ ಜಾರಿಮಾಡಲು ಆಗಲ್ಲವೆಂದು ಹೇಳುತ್ತಿದ್ದಾರೆ. ಆದ್ರೆ, ಕಳೆದ ಬಾರಿ ನಾವು ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿದ್ದೆವೆ ಎಂದರು.

ಬಜರಂಗದಳ ನಿಷೇಧ ಪ್ರಸ್ತಾಪಿಸಿರುವ ಕಾಂಗ್ರೆಸ್​ ವಿರುದ್ಧ ವ್ಯಾಪಕ ಆಕ್ರೋಶ: ಈ ಬಗ್ಗೆ ಅಧ್ಯಕ್ಷ ಖರ್ಗೆ ಹೇಳಿದ್ದಿಷ್ಟು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 03, 2023 | 12:47 PM

Share

ಕಲಬುರಗಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ (Bajrang Dal) ನಿಷೇಧ ಉಲ್ಲೇಖ, ಈ ಬಗ್ಗೆ ಬಿಜೆಪಿ ಹೇಳಿಕೆ ವಿಚಾರವಾಗಿ ಕಲಬುರಗಿ ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಮಾತನಾಡಿದ್ದು‘ ಪ್ರತಿ ಪಕ್ಷದವರು ಸಹಜವಾಗಿ ಒಬ್ಬರ ಮೇಲೆ ಒಬ್ಬರು ಹೇಳುತ್ತಾರೆ, ಅದೇ ರೀತಿ ಕಾಂಗ್ರೆಸ್ ಪ್ರಣಾಳಿಕೆ ಜಾರಿಮಾಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಕಳೆದ ಬಾರಿ ಕೂಡ ಇದೇ ರೀತಿ ಹೇಳಿದ್ದರು. ಆದ್ರೆ, ಕಳೆದ ಬಾರಿ ನಾವು ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿದ್ದೆವು. ಬಜೆಟ್ ಅನುದಾನ, ಆದಾಯ ನೋಡಿಯೇ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಅವರು ಹೇಳುತ್ತಾ ಹೋಗ್ತಾರೆ, ಆದ್ರೆ, ನಾವು ಮಾಡಿ ತೋರಿಸುತ್ತಿದ್ದೇವೆ ಎಂದರು.

ಇನ್ನು ಬಜರಂಗದಳ ಬ್ಯಾನ್ ವಿಚಾರ ‘ ಅದರ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಪನೆ ನೀಡಿದ್ದಾರೆ. ಹೀಗಾಗಿ ಅದರ ಬಗ್ಗೆ ಚರ್ಚೆ ಮಾಡಲು ಹೋಗಲ್ಲ. ರಾತ್ರಿ ಎಲ್ಲರೂ ಮಟನ್ ತಿಂತಾರೆ, ಹಗಲೊತ್ತಿನಲ್ಲಿ ನಾನ್ ವೆಜಟರಿಯನ್​ಗೆ ಬೈಯ್ತಾರೆ. ಈ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಾರೆ. ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡಿದ್ರೆ ಅಭಿವೃದ್ಧಿ ಆಗಲ್ಲ. ಬಿಜೆಪಿ ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟು ಪ್ರಚಾರ ಮಾಡುತ್ತೆ, ಜಗಳ ಹಚ್ಚಿಯೇ ಓಟ್ ತೆಗದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿಗೆ ​ಹೇಳಿದರು.

ಇದನ್ನೂ ಓದಿ:ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಚುನಾವಣಾ ಆಯೋಗ ಕೆಂಡ; ರಾಜಕೀಯ ಮುಖಂಡರಿಗೆ ನೀಡಿತು ಖಡಕ್ ಎಚ್ಚರಿಕೆ

ಅವಕಾಶ ಕೊಟ್ಟು ನೋಡಿ ಹೇಗೆ ಪ್ರಣಾಳಿಕೆ ಜಾರಿ ಮಾಡ್ತೇವೆ

ಕಾಂಗ್ರೆಸ್​​ ಪ್ರಣಾಳಿಕೆಯಲ್ಲಿ ಜನಪರ ಘೋಷಣೆಗಳ ಕುರಿತು ‘ಪರೀಕ್ಷೆಗೆ ಮೊದಲೇ ಪರೀಕ್ಷೆ ಹೇಗೆ ಬರೆಯುತ್ತೀರಾ ಅಂದ್ರೆ ಹೇಗೆ? ಅವಕಾಶ ಕೊಟ್ಟು ನೋಡಿ ಹೇಗೆ ಪ್ರಣಾಳಿಕೆ ಜಾರಿ ಮಾಡ್ತೇವೆ ಅಂತ ಗೊತ್ತಾಗುತ್ತೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಬಿಜೆಪಿ ಏನು ಮಾಡಿಲ್ಲ. ಆದರೆ ಈಗ ಪ್ರಚಾರಕ್ಕೆ ಬರುತ್ತಿದ್ದಾರೆ. ನಾವು ಮಂಜೂರು ಮಾಡಿದ್ದ ರೈಲಿಗೆ ಬಣ್ಣ ಬಳಿದು ಹೊಸ ರೈಲು ಅಂದ್ರು,ಕೆಲವರು ಪ್ರಚಾರದಿಂದಲೇ ಎಲ್ಲ ಸಿಗುತ್ತೆ ಅಂದುಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ