AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವಾನಿ ರೇವಣ್ಣಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಪುತ್ರ ಪ್ರಜ್ವಲ್ ಹೇಳಿದ್ದೇನು?

ಭವಾನಿ ರೇವಣ್ಣ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಜೆಡಿಎಸ್​ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪುತ್ರ ಪ್ರಜ್ವಲ್​ ರೇವಣ್ಣ ಮಹತ್ವದ ಅಂಶವೊಂದು ಬಿಟ್ಟುಕೊಟ್ಟಿದ್ದಾರೆ.

ಭವಾನಿ ರೇವಣ್ಣಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಪುತ್ರ ಪ್ರಜ್ವಲ್ ಹೇಳಿದ್ದೇನು?
ಪ್ರಜ್ವಲ್​ ರೇವಣ್ಣ (ಬಲಚಿತ್ರ) ಭವಾನಿ ರೇವಣ್ಣ (ಎಡಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 16, 2023 | 3:36 PM

Share

ಚಿಕ್ಕಮಗಳೂರು: ಭವಾನಿ ರೇವಣ್ಣ (Bhavani Revanna) ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಚರ್ಚೆ ಆಗಿಲ್ಲ. ಕುಟುಂಬ, ಪಕ್ಷದ ನಿರ್ಣಯಕ್ಕೆ ಬದ್ಧವಾಗಿರುತ್ತದೆ. ಹಾಸನದಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ಪಕ್ಷ, ದೊಡ್ಡವರು ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇವೆ. ಭವಾನಿ ಅವರಿಗೆ ಯಾವ ಜವಾಬ್ದಾರಿ ಕೊಟ್ಟರೂ ಕೆಲಸ ಮಾಡುತ್ತೇವೆ, ನಿಭಾಯಿಸುತ್ತೇವೆ. ರಾಜ್ಯ ಸುತ್ತಿ ಮಹಿಳಾ ಸಂಘಟನೆ, ಯುವ ಸಂಘಟನೆ ಮಾಡುವ ಶಕ್ತಿ ಪಕ್ಷಕ್ಕಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೇಳಿದ್ದಾರೆ.

ಕಡೂರು ತಾಲೂಕು ಯಗಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸಿಗರು ಕಾಂಗ್ರೆಸ್ ಅಲೆಯಲ್ಲಿ ಗೆದ್ದಿಲ್ಲ. ಬಿಜೆಪಿ ವಿರೋಧಿ ಅಲೆಯಿಂದ ಕಾಂಗ್ರೆಸ್​​ ಗೆದ್ದಿದೆ ಅಷ್ಟೆ. ಚುನಾವಣೆಯಿಂದ ರಾಜ್ಯದಲ್ಲಿ ಅಂತಹ ಯಾವುದೇ ಬದಲಾವಣೆ ಆಗಿಲ್ಲ. ಬಿಜೆಪಿಯ ಮೀಸಲಾತಿ, ಹಿಜಾಬ್​ನಂತಹ ನಿರ್ಧಾರದಿಂದ ಗೆದ್ದಿದೆ ಅಷ್ಟೆ. ಈಗ ಏನೇ ಮಾತನಾಡಿದರು ಹತಾಶೆಯ ಮಾತು ಅಂತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಕೋಮುವಾದಿಗಳನ್ನು ದೂರವಿಟ್ಟು ಜನ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದಾರೆ: ಹೆಚ್​ಡಿ ರೇವಣ್ಣ

ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆಗಳು, ಅದರ ಹಿಂದೆ ಅವರಿಗೆ ದೊಡ್ಡ ಜಬಾವ್ದಾರಿ ಇದೆ. ಮಹಿಳೆಯರಿಗೆ 2000 ರೂ. ಹಣ, ಫ್ರೀ ಬಸ್, ಯುವಕರಿಗೆ ಸ್ಟೇ ಫಂಡ್, ವಿದ್ಯುತ್ ಫ್ರೀ ಎಲ್ಲಾ ಜಾರಿಗೆ ಬರಲಿ. ನಂಬಿಕೆ ಇಟ್ಟು ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ, ಜನ ಕಾಯುತ್ತಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಂಡು ಹೇಗೆ ನಿಭಾಯಿಸುತ್ತಾರೆ ನೋಡೋಣ ಎಂದರು.

ಸರ್ಕಾರ ಬಂದು 48 ಗಂಟೆಯೂ ಕಳೆದಿಲ್ಲ, ಹರಿಪ್ರಸಾದ್ ಈಗಲೇ ಯೂಟರ್ನ್ ಹೊಡೀತಿದ್ದಾರೆ. ಉಚಿತ ವಿದ್ಯುತ್ ಎಪಿಎಲ್ ಕಾರ್ಡ್​ನವರಿಗೆ, ಟ್ಯಾಕ್ಸ್ ಕಟ್ಟೋರಿಗೆ ಇಲ್ಲ, ಬಿಪಿಎಲ್​ನವರಿಗೆ ಮಾತ್ರ ಅಂತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಬರಲಿ ಎಂದು ಹಾರೈಸೋಣ ಎಂದು ಹಾರೈಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​