AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವಾನಿ ರೇವಣ್ಣಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಪುತ್ರ ಪ್ರಜ್ವಲ್ ಹೇಳಿದ್ದೇನು?

ಭವಾನಿ ರೇವಣ್ಣ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಜೆಡಿಎಸ್​ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪುತ್ರ ಪ್ರಜ್ವಲ್​ ರೇವಣ್ಣ ಮಹತ್ವದ ಅಂಶವೊಂದು ಬಿಟ್ಟುಕೊಟ್ಟಿದ್ದಾರೆ.

ಭವಾನಿ ರೇವಣ್ಣಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಪುತ್ರ ಪ್ರಜ್ವಲ್ ಹೇಳಿದ್ದೇನು?
ಪ್ರಜ್ವಲ್​ ರೇವಣ್ಣ (ಬಲಚಿತ್ರ) ಭವಾನಿ ರೇವಣ್ಣ (ಎಡಚಿತ್ರ)
ವಿವೇಕ ಬಿರಾದಾರ
|

Updated on: May 16, 2023 | 3:36 PM

Share

ಚಿಕ್ಕಮಗಳೂರು: ಭವಾನಿ ರೇವಣ್ಣ (Bhavani Revanna) ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಚರ್ಚೆ ಆಗಿಲ್ಲ. ಕುಟುಂಬ, ಪಕ್ಷದ ನಿರ್ಣಯಕ್ಕೆ ಬದ್ಧವಾಗಿರುತ್ತದೆ. ಹಾಸನದಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ಪಕ್ಷ, ದೊಡ್ಡವರು ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇವೆ. ಭವಾನಿ ಅವರಿಗೆ ಯಾವ ಜವಾಬ್ದಾರಿ ಕೊಟ್ಟರೂ ಕೆಲಸ ಮಾಡುತ್ತೇವೆ, ನಿಭಾಯಿಸುತ್ತೇವೆ. ರಾಜ್ಯ ಸುತ್ತಿ ಮಹಿಳಾ ಸಂಘಟನೆ, ಯುವ ಸಂಘಟನೆ ಮಾಡುವ ಶಕ್ತಿ ಪಕ್ಷಕ್ಕಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೇಳಿದ್ದಾರೆ.

ಕಡೂರು ತಾಲೂಕು ಯಗಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸಿಗರು ಕಾಂಗ್ರೆಸ್ ಅಲೆಯಲ್ಲಿ ಗೆದ್ದಿಲ್ಲ. ಬಿಜೆಪಿ ವಿರೋಧಿ ಅಲೆಯಿಂದ ಕಾಂಗ್ರೆಸ್​​ ಗೆದ್ದಿದೆ ಅಷ್ಟೆ. ಚುನಾವಣೆಯಿಂದ ರಾಜ್ಯದಲ್ಲಿ ಅಂತಹ ಯಾವುದೇ ಬದಲಾವಣೆ ಆಗಿಲ್ಲ. ಬಿಜೆಪಿಯ ಮೀಸಲಾತಿ, ಹಿಜಾಬ್​ನಂತಹ ನಿರ್ಧಾರದಿಂದ ಗೆದ್ದಿದೆ ಅಷ್ಟೆ. ಈಗ ಏನೇ ಮಾತನಾಡಿದರು ಹತಾಶೆಯ ಮಾತು ಅಂತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಕೋಮುವಾದಿಗಳನ್ನು ದೂರವಿಟ್ಟು ಜನ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದಾರೆ: ಹೆಚ್​ಡಿ ರೇವಣ್ಣ

ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆಗಳು, ಅದರ ಹಿಂದೆ ಅವರಿಗೆ ದೊಡ್ಡ ಜಬಾವ್ದಾರಿ ಇದೆ. ಮಹಿಳೆಯರಿಗೆ 2000 ರೂ. ಹಣ, ಫ್ರೀ ಬಸ್, ಯುವಕರಿಗೆ ಸ್ಟೇ ಫಂಡ್, ವಿದ್ಯುತ್ ಫ್ರೀ ಎಲ್ಲಾ ಜಾರಿಗೆ ಬರಲಿ. ನಂಬಿಕೆ ಇಟ್ಟು ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ, ಜನ ಕಾಯುತ್ತಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಂಡು ಹೇಗೆ ನಿಭಾಯಿಸುತ್ತಾರೆ ನೋಡೋಣ ಎಂದರು.

ಸರ್ಕಾರ ಬಂದು 48 ಗಂಟೆಯೂ ಕಳೆದಿಲ್ಲ, ಹರಿಪ್ರಸಾದ್ ಈಗಲೇ ಯೂಟರ್ನ್ ಹೊಡೀತಿದ್ದಾರೆ. ಉಚಿತ ವಿದ್ಯುತ್ ಎಪಿಎಲ್ ಕಾರ್ಡ್​ನವರಿಗೆ, ಟ್ಯಾಕ್ಸ್ ಕಟ್ಟೋರಿಗೆ ಇಲ್ಲ, ಬಿಪಿಎಲ್​ನವರಿಗೆ ಮಾತ್ರ ಅಂತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಬರಲಿ ಎಂದು ಹಾರೈಸೋಣ ಎಂದು ಹಾರೈಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ