AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ನೋಡಿ ಮತ ಹಾಕಿ ಎನ್ನುವವರು ಆ ಪಕ್ಷ ಬಿಟ್ಟು ಬರ್ತಾರಾ? ಜಗದೀಶ್ ಶೆಟ್ಟರ್ ಹೇಳಿಕೆ ಪ್ರಲ್ಹಾದ್​​ ಜೋಶಿ ಟಾಂಗ್

ನಮ್ಮ ಭಾಗದಲ್ಲಿ ಈಗ ಹೊಸ ರೀತಿಯಲ್ಲಿ ವೋಟ್ ಕೇಳುತ್ತಿದ್ದಾರೆ. ಕಾಂಗ್ರೆಸ್ ನೋಡಿ ‌ಮತ ಹಾಕಬೇಡಿ, ನನ್ನನ್ನು ನೋಡಿ ವೋಟ್ ಹಾಕಿ ಎನ್ನುತ್ತಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿಕೆ ಸಚಿವ ಪ್ರಲ್ಹಾದ್​ ಜೋಶಿ ಟಾಂಗ್​​ ನೀಡಿದರು.

ನನ್ನ ನೋಡಿ ಮತ ಹಾಕಿ ಎನ್ನುವವರು ಆ ಪಕ್ಷ ಬಿಟ್ಟು ಬರ್ತಾರಾ? ಜಗದೀಶ್ ಶೆಟ್ಟರ್ ಹೇಳಿಕೆ ಪ್ರಲ್ಹಾದ್​​ ಜೋಶಿ ಟಾಂಗ್
ಪ್ರಲ್ಹಾದ್​ ಜೋಶಿ, ಜಗದೀಶ್ ಶೆಟ್ಟರ್
ಗಂಗಾಧರ​ ಬ. ಸಾಬೋಜಿ
|

Updated on: May 07, 2023 | 8:31 PM

Share

ಹುಬ್ಬಳ್ಳಿ: ನಮ್ಮ ಭಾಗದಲ್ಲಿ ಈಗ ಹೊಸ ರೀತಿಯಲ್ಲಿ ವೋಟ್ ಕೇಳುತ್ತಿದ್ದಾರೆ. ಕಾಂಗ್ರೆಸ್ ನೋಡಿ ‌ಮತ ಹಾಕಬೇಡಿ, ನನ್ನನ್ನು ನೋಡಿ ವೋಟ್ ಹಾಕಿ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ಪ್ರಸ್ತಾಪಿಸಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಟಾಂಗ್​​ ನೀಡಿದರು. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಲಿಂಗಾಯತ (Lingayat) ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನನ್ನ ನೋಡಿ ಮತ ಹಾಕಿ ಎನ್ನುವವರು ಆ ಪಕ್ಷ ಬಿಟ್ಟು ಬರ್ತಾರಾ ಎಂದು ಪ್ರಶ್ನಿಸಿದರು. ನಮ್ಮನ್ನು ನೋಡಿ ಮತ ಹಾಕಿ ಎನ್ನುವವರನ್ನು ನಾವು ಒಪ್ಪಿಕೊಳ್ಳಲ್ಲ ಎಂದು ವಾಗ್ದಾಳಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ಹಾಕಿ. ಕಾಶ್ಮೀರದ ಆರ್ಟಿಕಲ್ 370ಗೆ ವಿರೋಧ ಮಾಡಿದವರು ಕಾಂಗ್ರೆಸ್. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಾಪಸ್ ಜಾರಿ ಮಾಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲ್ಲ – ಮೋದಿ ನಾಯಕತ್ವಕ್ಕೆ ಹಿಂದುಳಿದ ವರ್ಗದವರು ಪ್ರಾಧಾನ್ಯತೆ ನೀಡುತ್ತಿದ್ದಾರೆ – ಪ್ರಲ್ಹಾದ್ ಜೋಶಿ

ಲಿಂಗಾಯತ ಮತಗಳ ಬಗ್ಗೆ ಎಚ್ಚರಿಕೆ ವಹಿಸಿದ ಜೋಶಿ

ಪ್ರಲ್ಹಾದ್ ಜೋಶಿ, ಹುಬ್ಬಳ್ಳಿ ಸೆಂಟ್ರಲ್​ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸಿದ್ದಾರೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯಿಂದ ಲಿಂಗಾಯತ ಮತಗಳು ಬೀಳದಂತೆ ನೋಡಿಕೊಳ್ಳಲು ಎಚ್ಚರಿಕೆ ವಹಿಸಿರುವ ಜೋಶಿ, ಇತ್ತೀಚೆಗೆ ವಿಜಯ್ ಸಂಕೇಶ್ವರ್ ಅವರ ಸಹಕಾರ ಪಡೆದಿದ್ದರು. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಲಿಂಗಾಯತ ಸಮುದಾಯದಲ್ಲಿ ಪ್ರಮುಖ ಮುಖಂಡರಲ್ಲೊಬ್ಬರಾಗಿ ಪ್ರಭಾವ ಹೊಂದಿರುವ, ಉದ್ಯಮಿಯೂ ಆಗಿರುವ ವಿಜಯ್ ಸಂಕೇಶ್ವರ್ ಬಿಜೆಪಿ ಬೆಂಬಲಿಸುವಂತೆ ಕರೆ ನೀಡಿದ್ದರು.

ಶೆಟ್ಟರ್‌ ಗೆಲುವಿಗೆ ಶ್ರಮಿಸುವುದಾಗಿ ಶಪಥ  

ಇತ್ತೀಚೆಗೆ ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ನಡೆಸಿದ ಬೆನ್ನಲ್ಲೇ ಜಗದೀಶ್​ ಶೆಟ್ಟರ್‌ ಕೂಡ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಸಿದ್ದರು. ಆ ಮೂಲಕ ಶೆಟ್ಟರ್‌ ಗೆಲುವಿಗೆ ಶ್ರಮಿಸುವುದಾಗಿ ಸಭೆಯಲ್ಲಿದ್ದ ಎಲ್ಲರೂ ಶಪಥ ಕೂಡ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: ಮುಸ್ಲಿಂ ಲೀಗ್ ಪ್ರಣಾಳಿಕೆಯಂತಿದೆ ಕಾಂಗ್ರೆಸ್ ಮ್ಯಾನಿಫೆಸ್ಟೋ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ

ತಮಗೆ ಬಿಜೆಪಿಯಲ್ಲಿ ಆದ ಅಪಮಾನ ಹಾಗೂ ಸ್ವಾಭಿಮಾನಕ್ಕೆ ಧಕ್ಕೆಯಾಗಿರುವುದರಿಂದ ಆ ಪಕ್ಷ ತೊರೆದಿದ್ದೇನೆ. ಇದೀಗ ಕಾಂಗ್ರೆಸ್‌ ಸೇರಿದ್ದೇನೆ. ಈ ಹಿಂದೆಯೂ ನೀವು ನನಗೆ ಬೆಂಬಲಿಸಿದ್ದೀರಿ. ಈಗಲೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸಭೆಯಲ್ಲಿದ್ದವರೆಲ್ಲರೂ ಕೈ ಎತ್ತುವ ಮೂಲಕ ಜಗದೀಶ್​ ಶೆಟ್ಟರ್‌ಗೆ ಬೆಂಬಲ ಸೂಚಿಸಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?