AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಸಿ ಪಾಟೀಲ್ ವಿರುದ್ಧ ಬಣಕಾರ್​ ಆಪರೇಷನ್​ ಹಸ್ತ ಸಕ್ಸಸ್​ ಬೆನ್ನಲ್ಲೇ ಶಿವರಾಮ್ ಹೆಬ್ಬಾರ್​ ವಿರುದ್ಧವೂ ಕಾಂಗ್ರೆಸ್​ ರಿವರ್ಸ್ ಆಪರೇಷನ್

ಸಚಿವ ಬಿ.ಸಿ ಪಾಟೀಲ್ ವಿರುದ್ಧ ಬಣಕಾರ್​ ಆಪರೇಷನ್​ ಹಸ್ತ ಸಕ್ಸಸ್​ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಿವರಾಮ್ ಹೆಬ್ಬಾರ್​ ವಿರುದ್ಧವೂ ರಿವರ್ಸ್ ಆಪರೇಷನ್​ಗೆ ಕಾಂಗ್ರೆಸ್​ ಮುಂದಾಗಿದೆ.

ಬಿ.ಸಿ ಪಾಟೀಲ್ ವಿರುದ್ಧ ಬಣಕಾರ್​ ಆಪರೇಷನ್​ ಹಸ್ತ ಸಕ್ಸಸ್​ ಬೆನ್ನಲ್ಲೇ ಶಿವರಾಮ್ ಹೆಬ್ಬಾರ್​ ವಿರುದ್ಧವೂ ಕಾಂಗ್ರೆಸ್​ ರಿವರ್ಸ್ ಆಪರೇಷನ್
Shivaram Hebbar
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 14, 2022 | 6:17 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023)  ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್​ನಿಂದ ಆಪರೇಷನ್ ಹಸ್ತ (Congress Operation Hasta)  ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್​ನಿಂದ ಗೆದ್ದು ಆಪರೇಷನ್ ಕಮಲದಿಂದ ಬಿಜೆಪಿಗೆ ಹೋದವರ ವಿರುದ್ಧ ಕೈ ನಾಯಕರು ತೊಡೆತಟ್ಟಿದ್ದಾರೆ. ಇದರಕ್ಕೆ ಪೂರಕವೆಂಬಂತೆ ಬಿ.ಸಿ.ಪಾಟೀಲ್ ವಿರುದ್ಧ U.B.ಬಣಕಾರ್​ ಆಪರೇಷನ್​ ಹಸ್ತ ಸಕ್ಸಸ್​ ಬೆನ್ನಲ್ಲೇ ಇದೀಗ ಮತ್ತೋರ್ವ ಸಚಿವ ಅರೆಬೈಲ್ ಶಿವರಾಮ್ ಹೆಬ್ಬಾರ್​(Shivaram Hebbar) ವಿರುದ್ಧವೂ ರಿವರ್ಸ್ ಆಪರೇಷನ್​ಗೆ ಕಾಂಗ್ರೆಸ್ ಮುಂದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಗೆ 2 ಕಾರಣ ಕೊಟ್ಟ ದತ್ತ, ದೇವೇಗೌಡ್ರ ಹತ್ತಿರ ಹೇಳಿಕೊಳ್ಳಲಾಗದೇ ತೊಳಲಾಟಕ್ಕೆ ಒಳಗಾದ ಮೇಷ್ಟ್ರು

ಹೌದು…ಮಾಜಿ ಶಾಸಕ V.S.ಪಾಟೀಲ್​ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ(ಡಿಸೆಂಬರ್ 15) ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆ ಶಿವರಾಮ್ ವಿರುದ್ಧ ನಿಂತು ಸೋಲುಕಂಡಿದ್ದ ವಿ‌ಎಸ್ ಪಾಟೀಲ್ ಯಲ್ಲಾಪುರ ಕ್ಷೇತ್ರದಲ್ಲಿ ಸಾಕಷ್ಟು ಹಿಡಿತ ಹೊಂದಿದ್ದಾರೆ. ಇದರಿಂದ ಕಾಂಗ್ರೆಸ್​ ಶಿವರಾಮ್ ವಿರುದ್ಧ ಮತ್ತೆ ವಿ‌ಎಸ್ ಪಾಟೀಲ್ ಅವರನ್ನೇ ಕಣಕ್ಕಿಳಿಸಲು ಪ್ಲಾನ್ ಮಾಡಿದೆ.

ಯಲ್ಲಾಪುರ ಕ್ಷೇತ್ರದಿಂದ ವಿ.ಎಸ್.ಪಾಟೀಲ್ ಒಮ್ಮೆ ಶಾಸಕರಾಗಿದ್ದರು​. ಈ ಹಿಂದೆ ಕಾಂಗ್ರೆಸ್​ನಿಂದ ಶಿವರಾಂ ಹೆಬ್ಬಾರ್ ಸ್ಪರ್ಧೆ ಮಾಡಿದ್ದರೆ ಬಿಜೆಪಿಯಿಂದ ವಿ.ಎಸ್.ಪಾಟೀಲ್ ಎದುರಾಳಿಯಾಗಿದ್ದರು. ಇದೀಗ ಶಿವರಾಮ್ ಹೆಬ್ಬಾರ್ ಬಿಜೆಪಿ ಸೇರಿದ್ದರಿಂದ ವಿ.ಎಸ್.ಪಾಟೀಲ್ ಅವರಿಗೆ ಈ ಬಾರಿ ಚುನಾವಣೆ ಟಿಕೆಟ್ ಕೈತಪ್ಪಲಿದೆ. ಈ ಹಿನ್ನೆಲೆಯಲ್ಲಿ ​ವಿ.ಎಸ್.ಪಾಟೀಲ್ ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದು, ಮತ್ತೆ ಶಿವರಾಮ್​ ಹೆಬ್ಬಾರ್​ ವಿರುದ್ಧವೇ ಅಖಾಡಕ್ಕಿಳಿಯುವುದು ಪಕ್ಕಾ ಆಗಿದೆ. ಆದ್ರೆ, ಪಕ್ಷದ ಚಿಹ್ನೆ ಮಾತ್ರ ಬೇರೆಯಾಗಿರಲಿದೆ.

ಇದನ್ನೂ ಓದಿ: ಕಾರ್ಕಳ ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​ಗೆ ಮನವಿಯೊಂದಿಗೆ ಸವಾಲ್ ಹಾಕಿದ ಮುತಾಲಿಕ್

ಕಾಂಗ್ರೆಸ್​ನಿಂದ ಇದು 2ನೇ ಬೇಟೆ

ರಿವರ್ಸ್ ಆಪರೇಷನ್​ಗೆ ಮುಂದಾದ ಕಾಂಗ್ರೆಸ್​ನಿಂದ ಇದು 2ನೇ ಬೇಟೆಯಾಗಿದೆ. ಇತ್ತೀಚೆಗಷ್ಟೇ ಬಿ.ಸಿ.ಪಾಟೀಲ್ ಹಣೆಯಲು ಬಿಜೆಪಿ ಮಾಜಿ ಶಾಸಕ ಯುಬಿ ಬಣಕಾರ್ ಅವರ ಆಪರೇಷನ್ ಹಸ್ತ ಸಕ್ಸನ್ ಆಗಿತ್ತು. ಇದೀಗ ಶಿವರಾಮ್ ಹೆಬ್ಬಾರ್ ವಿರುದ್ಧ ಬಿಜೆಪಿಯ ವಿ.ಎಸ್.ಪಾಟೀಲ್ ಅವರನ್ನು ಸೆಳೆಯಲು ಕಾಂಗ್ರೆಸ್ ಯಶಸ್ವಿಯಾಗಿದ್ದು, ಈ ಮೂಲಕ ಕಾಂಗ್ರೆಸ್​ ಬಿಟ್ಟು ಹೋದ ನಾಯಕರನ್ನು ಕಟ್ಟಿಹಾಕಲು ಕಾಂಗ್ರೆಸ್ ಇನ್ನಷ್ಟು ಆಪರೇಷನ್ ಹಸ್ತ ಮುಂದುವರಿಸುವ ಸಾಧ್ಯತೆಗಳಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:57 pm, Wed, 14 December 22

ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ