AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ದತ್ತಾ, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ

ಟಿಕೆಟ್​ ಕೈತಪ್ಪಿದ್ದರಿಂದ ಅಸಮಧಾನಗೊಂಡಿರುವ ವೈಎಸ್​ವಿ ದತ್ತಾ ಅವರು ಅಸಮಧಾನಗೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸ್ವಾಭಿಮಾನ ಕಹಳೆ ಮೊಳಗಿಸಿದ್ದಾರೆ.

ಕಾಂಗ್ರೆಸ್​ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ದತ್ತಾ, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ
ವೈಎಸ್‌ವಿ ದತ್ತಾ
ರಮೇಶ್ ಬಿ. ಜವಳಗೇರಾ
|

Updated on: Apr 09, 2023 | 3:42 PM

Share

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ (Congress) ಸೇರಿದ್ದ ಮಾಜಿ ಶಾಸಕ ವೈಎಸ್‌ವಿ ದತ್ತಾಗೆ (YSV Datta) ಕಡೂರು ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಪಕ್ಷೇತರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಟಿಕೆಟ್​ ಕೈತಪ್ಪಿದ್ದರಿಂದ ಇಂದು(ಏಪ್ರಿಲ್​ 09) ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ತಮ್ಮ ಅಭಿಮಾನಿಗಳ ಜೊತೆ ಚರ್ಚಿಸಿದರು. ಅಭಿಮಾನಿಗಳ ಅಭಿಪ್ರಾಯದಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು. ಈ ಮೂಲಕ ಕಾಂಗ್ರೆಸ್​ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಸ್ವಾಭಿಮಾನಿ ಕಹಳೆ ಮೊಳಗಿಸಿದ್ದಾರೆ.

ಕಡೂರಿನ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ಚುನಾವಣಾ ಸ್ಪರ್ಧೆ ಬಗ್ಗೆ ಅಭಿಮಾನಿಗಳ ಸಮ್ಮುಖದಲ್ಲಿ ಕಡೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಚುನಾವಣಾ ಖರ್ಚಿಗೆ ಹಣ ಸಂಗ್ರಹಕ್ಕೆ ಮುಂದಾಗಿದ್ದು, ಸಮಾವೇಶದಲ್ಲೇ ಟವಲ್ ಹಾಸಿ ಹಣ ಸಂಗ್ರಹಿಸಿದರು.

ಈ ವೇಳೆ ಮಾತನಾಡಿದ ದತ್ತಾ, ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದು ಮುಗಿದ ಕಥೆ. ಹಣ ಮತ್ತು ಜಾತಿ ಮೇಲೆ ಅಭ್ಯರ್ಥಿ ಅಯ್ಕೆ ಮಾಡುತ್ತಾರೆ. ಜಾತಿ ಬಲವಿಲ್ಲ, ಮೈ ತುಂಬಾ ಸಾಲ ಮಾಡಿದವನು ನಾನು. ನನಗೆ ಕಾಂಗ್ರೆಸ್ ಟಿಕೆಟ್ ತಪ್ಪಿದ್ರೆ ಕಡೂರು ಬಿಜೆಪಿ ಕಚೇರಿ ಮುಂದೆ ಪಟಾಕಿ ಹೊಡೆದರು. ಇದರ ಇಂದಿನ ಅರ್ಥ ಕ್ಷೇತ್ರದ ಜನತೆಗೆ ಅರ್ಥವಾಗಿದೆ ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಕಡೂರಿಗೊಬ್ಬ ಅಭ್ಯರ್ಥಿ ಹುಡುಕು ಎಂದು ದೇವೇಗೌಡರು ಹೇಳಿದ್ದರು. ಅದರಂತೆ ಟಿಕೆಟ್ ಕೊಡುತ್ತೇವೆ ಎಲೆಕ್ಷನ್​ಗೆ ನಿಲ್ಲಿ ಎಂದು ಮುಖಂಡರ ಮನೆ ಬಾಗಿಲಿಗೆ ಹೋದೆ. ನಮ್ಮ ಮನೆ ಹಾಳು ಮಾಡಲು ಟಿಕೆಟ್ ಬಂದಿದ್ದೀರಾ ಎಂದು ಕೇಳಿದ್ದರು. ಬಸ್ ಕಂಡಕ್ಟರ್ ತರ ಮನೆಮನೆ ಬಾಗಿಲಿಗೆ ಹೋಗಿ ಟಿಕೆಟ್ ಕೊಡುತ್ತೀನಿ ಅಂತ ಕೇಳಿದ್ದೆ. ಕೊನೆಗೆ ನನ್ನ ಜಾತಿ ಬೆಂಬಲ ಇಲ್ಲದ ಕ್ಷೇತ್ರದಲ್ಲಿ ನಾನೇ ಜೆ.ಡಿ.ಎಸ್ ಅಭ್ಯರ್ಥಿಯಾದೆ‌. ಜಾತಿ ರಾಜಕಾರಣ ಸಾಕು, ಪ್ರೀತಿ ರಾಜಕಾರಣ ಮಾಡೋಣ ಎಂದು ಕರೆ ನೀಡಿದೆ. ಪ್ರೀತಿ ರಾಜಕಾರಣಕ್ಕೆ ಮನಸೋತು ಕ್ಷೇತ್ರದ ಜನ ನನ್ನನ್ನ ಗೆಲ್ಲಿಸಿದ್ದರು ಎಂದು ಆ ದಿನಗಳನ್ನು ಮೆಲುಕು ಹಾಕಿದರು.

ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿದ್ದು, ಕಾಂಗ್ರೆಸ್ ಹೈಕಮಾಂಡ್​ ಆನಂದ್ ಕೆಎಸ್ (Anand KS) ಅವರಿಗೆ ಟಿಕೆಟ್ ನೀಡಿದೆ. ಇದರಿಂದ ದತ್ತಾ ಭಾರೀ ನಿರಾಸೆಯಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ. ಆದರೆ ಕನಿಷ್ಠ ದತ್ತಾ ಅವರ ಜೊತೆಗೆ ಮಾತುಕತೆ ನಡೆಸುವ ಸೌಜನ್ಯವನ್ನೂ ಕಾಂಗ್ರೆಸ್ ನಾಯಕರು‌ ತೋರಿಸಿಲ್ಲ ಎಂಬ ಆಕ್ರೋಶಗಳು ವ್ಯಕ್ತವಾಗಿವೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ವೈಎಸ್‌ವಿ ದತ್ತಾ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋ ವೈರಲ್‌ ಆಗಿತ್ತು. ಆ ಆಡಿಯೋದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್‌ ಹೊರೆ, ಅವರನ್ನು ಸಮರ್ಥನೆ ಮಾಡಲು ಆಗಲ್ಲ ಎಂದು ವೈಎಸ್‌ವಿ ದತ್ತಾ ಹೇಳಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿದೆ ಎನ್ನಲಾಗಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ