AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ದತ್ತಾ, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ

ಟಿಕೆಟ್​ ಕೈತಪ್ಪಿದ್ದರಿಂದ ಅಸಮಧಾನಗೊಂಡಿರುವ ವೈಎಸ್​ವಿ ದತ್ತಾ ಅವರು ಅಸಮಧಾನಗೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸ್ವಾಭಿಮಾನ ಕಹಳೆ ಮೊಳಗಿಸಿದ್ದಾರೆ.

ಕಾಂಗ್ರೆಸ್​ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ದತ್ತಾ, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ
ವೈಎಸ್‌ವಿ ದತ್ತಾ
ರಮೇಶ್ ಬಿ. ಜವಳಗೇರಾ
|

Updated on: Apr 09, 2023 | 3:42 PM

Share

ಮುಖ್ಯಾಂಶಗಳು

  • ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ವೈಎಸ್ ವಿ ದತ್ತಾ
  • ಕಡೂರಿನ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ಘೋಷಣೆ
  • ಚುನಾವಣಾ ಖರ್ಚಿಗೆ ಹಣ ಸಂಗ್ರಹಕ್ಕೆ ಮುಂದಾದ ದತ್ತಾ‌

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ (Congress) ಸೇರಿದ್ದ ಮಾಜಿ ಶಾಸಕ ವೈಎಸ್‌ವಿ ದತ್ತಾಗೆ (YSV Datta) ಕಡೂರು ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಪಕ್ಷೇತರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಟಿಕೆಟ್​ ಕೈತಪ್ಪಿದ್ದರಿಂದ ಇಂದು(ಏಪ್ರಿಲ್​ 09) ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ತಮ್ಮ ಅಭಿಮಾನಿಗಳ ಜೊತೆ ಚರ್ಚಿಸಿದರು. ಅಭಿಮಾನಿಗಳ ಅಭಿಪ್ರಾಯದಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು. ಈ ಮೂಲಕ ಕಾಂಗ್ರೆಸ್​ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಸ್ವಾಭಿಮಾನಿ ಕಹಳೆ ಮೊಳಗಿಸಿದ್ದಾರೆ.

ಕಡೂರಿನ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ಚುನಾವಣಾ ಸ್ಪರ್ಧೆ ಬಗ್ಗೆ ಅಭಿಮಾನಿಗಳ ಸಮ್ಮುಖದಲ್ಲಿ ಕಡೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಚುನಾವಣಾ ಖರ್ಚಿಗೆ ಹಣ ಸಂಗ್ರಹಕ್ಕೆ ಮುಂದಾಗಿದ್ದು, ಸಮಾವೇಶದಲ್ಲೇ ಟವಲ್ ಹಾಸಿ ಹಣ ಸಂಗ್ರಹಿಸಿದರು.

ಈ ವೇಳೆ ಮಾತನಾಡಿದ ದತ್ತಾ, ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದು ಮುಗಿದ ಕಥೆ. ಹಣ ಮತ್ತು ಜಾತಿ ಮೇಲೆ ಅಭ್ಯರ್ಥಿ ಅಯ್ಕೆ ಮಾಡುತ್ತಾರೆ. ಜಾತಿ ಬಲವಿಲ್ಲ, ಮೈ ತುಂಬಾ ಸಾಲ ಮಾಡಿದವನು ನಾನು. ನನಗೆ ಕಾಂಗ್ರೆಸ್ ಟಿಕೆಟ್ ತಪ್ಪಿದ್ರೆ ಕಡೂರು ಬಿಜೆಪಿ ಕಚೇರಿ ಮುಂದೆ ಪಟಾಕಿ ಹೊಡೆದರು. ಇದರ ಇಂದಿನ ಅರ್ಥ ಕ್ಷೇತ್ರದ ಜನತೆಗೆ ಅರ್ಥವಾಗಿದೆ ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಕಡೂರಿಗೊಬ್ಬ ಅಭ್ಯರ್ಥಿ ಹುಡುಕು ಎಂದು ದೇವೇಗೌಡರು ಹೇಳಿದ್ದರು. ಅದರಂತೆ ಟಿಕೆಟ್ ಕೊಡುತ್ತೇವೆ ಎಲೆಕ್ಷನ್​ಗೆ ನಿಲ್ಲಿ ಎಂದು ಮುಖಂಡರ ಮನೆ ಬಾಗಿಲಿಗೆ ಹೋದೆ. ನಮ್ಮ ಮನೆ ಹಾಳು ಮಾಡಲು ಟಿಕೆಟ್ ಬಂದಿದ್ದೀರಾ ಎಂದು ಕೇಳಿದ್ದರು. ಬಸ್ ಕಂಡಕ್ಟರ್ ತರ ಮನೆಮನೆ ಬಾಗಿಲಿಗೆ ಹೋಗಿ ಟಿಕೆಟ್ ಕೊಡುತ್ತೀನಿ ಅಂತ ಕೇಳಿದ್ದೆ. ಕೊನೆಗೆ ನನ್ನ ಜಾತಿ ಬೆಂಬಲ ಇಲ್ಲದ ಕ್ಷೇತ್ರದಲ್ಲಿ ನಾನೇ ಜೆ.ಡಿ.ಎಸ್ ಅಭ್ಯರ್ಥಿಯಾದೆ‌. ಜಾತಿ ರಾಜಕಾರಣ ಸಾಕು, ಪ್ರೀತಿ ರಾಜಕಾರಣ ಮಾಡೋಣ ಎಂದು ಕರೆ ನೀಡಿದೆ. ಪ್ರೀತಿ ರಾಜಕಾರಣಕ್ಕೆ ಮನಸೋತು ಕ್ಷೇತ್ರದ ಜನ ನನ್ನನ್ನ ಗೆಲ್ಲಿಸಿದ್ದರು ಎಂದು ಆ ದಿನಗಳನ್ನು ಮೆಲುಕು ಹಾಕಿದರು.

ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿದ್ದು, ಕಾಂಗ್ರೆಸ್ ಹೈಕಮಾಂಡ್​ ಆನಂದ್ ಕೆಎಸ್ (Anand KS) ಅವರಿಗೆ ಟಿಕೆಟ್ ನೀಡಿದೆ. ಇದರಿಂದ ದತ್ತಾ ಭಾರೀ ನಿರಾಸೆಯಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ. ಆದರೆ ಕನಿಷ್ಠ ದತ್ತಾ ಅವರ ಜೊತೆಗೆ ಮಾತುಕತೆ ನಡೆಸುವ ಸೌಜನ್ಯವನ್ನೂ ಕಾಂಗ್ರೆಸ್ ನಾಯಕರು‌ ತೋರಿಸಿಲ್ಲ ಎಂಬ ಆಕ್ರೋಶಗಳು ವ್ಯಕ್ತವಾಗಿವೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ವೈಎಸ್‌ವಿ ದತ್ತಾ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋ ವೈರಲ್‌ ಆಗಿತ್ತು. ಆ ಆಡಿಯೋದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್‌ ಹೊರೆ, ಅವರನ್ನು ಸಮರ್ಥನೆ ಮಾಡಲು ಆಗಲ್ಲ ಎಂದು ವೈಎಸ್‌ವಿ ದತ್ತಾ ಹೇಳಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿದೆ ಎನ್ನಲಾಗಿದೆ.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!