AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ರಾಜಕೀಯದಿಂದ ವೈಎಸ್​ವಿ ದತ್ತ ನಿವೃತ್ತಿ; ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ

ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್​ನ ವೈಎಸ್​ವಿ ದತ್ತ ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.

ಚುನಾವಣಾ ರಾಜಕೀಯದಿಂದ ವೈಎಸ್​ವಿ ದತ್ತ ನಿವೃತ್ತಿ; ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ
ಚುನಾವಣಾ ರಾಜಕೀಯದಿಂದ ವೈಎಸ್​ವಿ ದತ್ತ ನಿವೃತ್ತಿ
Rakesh Nayak Manchi
|

Updated on: May 16, 2023 | 9:51 PM

Share

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್​ನ ವೈಎಸ್​ವಿ ದತ್ತ (YSV Datta) ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆಸರಿದಿದ್ದಾರೆ. ಮಾತ್ರವಲ್ಲದೆ, ಚನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ದತ್ತ ಅವರು, ಇದೀಗ ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಕಡೂರು ವಿಧಾನಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ನಿಮ್ಮ ದತ್ತಣ್ಣ ಮಾಡುವ ನಮಸ್ಕಾರಗಳು ಎಂದು ಹೇಳಿ ಸುದೀರ್ಘವಾದ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ, ಕ್ಷೇತ್ರದ ನೂತನ ಶಾಸಕರಿಗೆ ಮಂತ್ರಿಯಾಗಲೆಂದು ಶುಭ ಹಾರೈಸಿದರು. ಸದ್ಯ ನಾನೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ನಾನು ಎಲ್ಲಿ ಎಡವಿದೆ, ನನ್ನ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ನಾನು ಎಲ್ಲಿ ವಿಫಲನಾಗಿದ್ದೇನೆ ಎಂಬ ಬಗ್ಗೆ ಚಿಂತನ ಮಂಥನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

2023ರ ಚುನಾವಣೆ ನನ್ನ ಪಾಲಿಗೆ ಅವಿಸ್ಮರಣೀಯ ಚುನಾವಣೆ ಅಗಬಹುದೆಂಬ ಅಶಾಭಾವನೆ ಮೂಡಿತ್ತು. ಅದೂ ಅಲ್ಲದೇ ಇದೇ ನನ್ನ ಕಡೆಯ ಚುನಾವಣೆ ಎಂಬುದನ್ನೂ ತಮ್ಮಲ್ಲಿ ತಿಳಿಸಿದ್ದೆ. ಆದರೆ, ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಮೇಲೆ ನನಗೆ ವಾಸ್ತವ ದರ್ಶನವಾಯಿತು ಎಂದು ತಮ್ಮ ಸೋಲಿನ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬಂದಿದ್ದರೂ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ್ ​ರೈ

2006ರಲ್ಲಿ ಕಡೂರು ಕ್ಷೇತ್ರಕ್ಕೆ ನಾನು ಅನಿವಾರ್ಯವಾಗಿ ಕಾಲಿಟ್ಟ ದಿನದಿಂದ 2023ರವರೆಗಿನ ನನ್ನ ನಡೆವಳಿಕೆ, ನಿರ್ಧಾರಗಳು ಹಾಗೂ ಮತದಾರರೊಂದಿಗಿನ ನನ್ನ ಸಂಬಂಧದ ಬಗ್ಗೆ ನಾನೇ ಎಲ್ಲೋ ಎಡವಿದ್ದೇನೆ ಎಂಬ ಅನುಮಾನ ನನ್ನನ್ನು ಸದಾ ಕಾಡತೊಡಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ನಾನೆಂದೂ ತಲೆಕಡೆಸಿಕೊಂಡವನಲ್ಲ. ನನ್ನ ರಾಜಕೀಯ ಜೀವನದಲ್ಲಿ ಗೆಲುವಿಗಿಂತ ಸೋಲನ್ನೇ ಜಾಸ್ತಿ ನೋಡಿದವನು. ಸೋಲು ಗೆಲುವು ಎರಡನ್ನೂ ಸಮಚಿತ್ತದಿಂದ ಸಮಭಾವದಿಂದ ನೋಡುವ ಮನಸ್ಥಿತಿ ನನ್ನದು. ಹಾಗಾಗಿ ಬಂದ ಫಲಿತಾಂಶದ ಬಗ್ಗೆ ನನಗೆ ಎಳ್ಳಷ್ಟೂ ಬೇಸರವಿಲ್ಲ ಎಂದಿದ್ದಾರೆ.

ಕಳೆದ 17 ವರ್ಷಗಳಿಂದ ನೀವು ತೋರಿರುವ ಪ್ರೀತಿ, ಬೆಂಬಲ, ಅಭಿಮಾನದ ಕಾರಣದಿಂದ ನಿಮ್ಮ ಋಣ ತೀರಿಸುವ ಹಾಗೂ ನನ್ನ ಕೊನೆಯ ಉಸಿರು ಇರುವವರೆಗೂ ನಾನು ನಿಮ್ಮೊಂದಿಗೆ ಇದ್ದು ನಿಮ್ಮಲ್ಲಿಯೇ ಒಬ್ಬನಾಗಿ ಈ ನನ್ನ ನೆಲದಲ್ಲಿ ಮಣ್ಣಾಗಬೇಕೆಂಬ ದೃಢ ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು