AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Babu: ಮನೆ ಮನೆಗೆ ಕೆಜಿಎಫ್ ಬಾಬು ಕಳುಹಿಸಿದ್ದ 30 ಲಕ್ಷದ ಡಿಡಿ ಜಪ್ತಿ ಮಾಡಿದ ಪೊಲೀಸರು

ಕರ್ನಾಟಕ ಚುನಾವಣೆ ಹಿನ್ನೆಲೆ ಮತದಾರರ ಮನೆಮನೆಗೆ ಕೆಜಿಎಫ್ ಬಾಬು ಅವರು ಡಿಡಿ ಕಳುಹಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸಿದ್ದಾಪುರ ಪೊಲೀಸರು, ಕೆಜಿಎಫ್ ಬಾಬು ಕಳುಹಿಸಿದ್ದ ಡಿಡಿಗಳನ್ನು ಜಪ್ತಿ ಮಾಡಿದ್ದಾರೆ.

KGF Babu: ಮನೆ ಮನೆಗೆ ಕೆಜಿಎಫ್ ಬಾಬು ಕಳುಹಿಸಿದ್ದ 30 ಲಕ್ಷದ ಡಿಡಿ ಜಪ್ತಿ ಮಾಡಿದ ಪೊಲೀಸರು
ಕೆಜಿಎಫ್ ಬಾಬು
Rakesh Nayak Manchi
|

Updated on:Apr 03, 2023 | 11:14 PM

Share

ಬೆಂಗಳೂರು: ಕರ್ನಾಟಕ ಚುನಾವಣೆ (Karnataka Assembly Elections 2023) ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರ ಮನೆಮನೆಗೆ ಡಿಡಿ ಕಳುಹಿಸುತ್ತಿದ್ದ ಕೋಟಿ ಕುಬೇರ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು (KGF Babu) ಅವರಿಗೆ ಸಿದ್ದಾಪುರ ಠಾಣಾ ಪೊಲೀಸರು ಶಾಕ್ ನೀಡಿದ್ದಾರೆ. ಡಿಡಿ ಕಳುಹಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು, ಸುಮಾರು 30 ಲಕ್ಷದ ಡಿಡಿಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ಕೆ.ಎಂ.ಕಾಲೋನಿಯಲ್ಲಿ 3 ಸಾವಿರ ಜನರಿಗೆ ತಲಾ 1,105 ರೂ.ನಂತೆ ಡಿಡಿ ನೀಡಲಾಗಿತ್ತು. ಜನರನ್ನು ಗಂಪು ಕಟ್ಟಿಕೊಂಡು ಡಿಡಿ ಹಂಚುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಡಿಡಿಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಜಿಎಫ್​ ಬಾಬು ತಯಾರಿ ನಡೆಸಿದ್ದಾರೆ. ಈ ಮೊದಲು ಕೋಲಾರಿಂದ ಸ್ಪರ್ಧೆ ಮಾಡಬೇಕು ಎಂದು ಕೊಂಡಿದ್ದ ಬಾಬು ಬಳಿಕ ಅಲ್ಲಿಂದ ಬೆಂಗಳೂರಿನ ಚಿಕ್ಕಪೇಟೆಯಿಂದ ಅಖಾಡಕ್ಕಿಳಿಯಲು ಪ್ಲಾನ್ ಮಾಡಿದ್ದಾರೆ. ಇದರ ಮಧ್ಯೆ  ಪಕ್ಷ ವಿರೋಧಿ ಆರೋಪದ ಮೇಲೆ ಕಾಂಗ್ರೆಸ್​ನಿಂದ ಅಮಾನತುಗೊಂಡು ಏಕಾಂಗಿಯಾಗಿದ್ದಾರೆ. ಮೂಲಗಳ ಪ್ರಕಾರ ಪಕ್ಷೇತರ ಬದಲು ಜೆಡಿಎಸ್​ನಿಂದ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ: 6 ದಿನಗಳಲ್ಲಿ 47 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ಸೇರಿದಂತೆ 12 ಕೋಟಿಗೂ ಹೆಚ್ಚು ನಗದು ಜಪ್ತಿ

ಕಳೆದ ಮೇ ತಿಂಗಳಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್​ ಬಾಬು ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 6 ಕಾರುಗಳಲ್ಲಿ 3 ತಂಡವಾಗಿ ಬಂದಿದ್ದ ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿ ಹಾಗೂ ರಾಜಕಾರಣಿ ಕೆಜಿಎಫ್‌ ಬಾಬು ನಿವಾಸ ಹಾಗೂ ಕಚೇರಿಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದ್ದರು. ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ಇಡಿ ಶಾಕ್ ನೀಡಿತ್ತು. ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು. ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 pm, Mon, 3 April 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್